Home Posts tagged #Karavali

ಬ್ರಹ್ಮಾವರ : ರಾಜ್ಯ ಸರ್ಕಾರದ ವಿರುದ್ಧ ಧೋರಣೆ ಖಂಡಿಸಿ, ಲಾರಿ ಮತ್ತು ಟೆಂಪೋ ಚಾಲಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬ್ರಹ್ಮಾವರ ಭಾಗದಲ್ಲಿ ಐನೂರಕ್ಕೂ ಹೆಚ್ಚು ಲಾರಿ, ಟೆಂಪೋಗಳನ್ನು ರಸ್ತೆ ಬದಿ ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದಾರೆ.

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ

ಉಡುಪಿ: ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ

ಭಾರತೀಯ ಸೇನೆಗೆ ಸೇರಬಯಸುವ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ ಉಡುಪಿಯಲ್ಲಿ ಆಯೋಜಿಸಲಾಗಿದೆ. ಉಡುಪಿ ಸಮೀಪದ ಉದ್ಯಾವರದ ಹಿನ್ನೀರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸೀ ಸೈಲಿಂಗ್ ತರಬೇತಿ ಕಾರ್ಯಾಗಾರದಲ್ಲಿ ಹೊರರಾಜ್ಯದ ಕೆಡೆಟ್ ಗಳು ಭಾಗವಹಿಸಿರುವುದು ವಿಶೇಷವಾಗಿತ್ತು. ನೂತನ ಕೆಡೆಟ್ಗಳ ನೌಕಯಾನದ ಎಕ್ಸ್ಪೀರಿಯನ್ಸ್ ಹೇಗಿತ್ತು ಅಂತೀರಾ… ಈ ಸ್ಟೋರಿ ನೋಡಿ ಭಾರತೀಯ ನೌಕಾದಳಕ್ಕೆ ಸೇರಬಯಸುವ ಎನ್‍ಸಿಸಿ ಕೆಡೆಟ್‍ಗಳು

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ

ಪುತ್ತೂರು: ಅಪರೂಪದ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆ

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆಯಾಗಿದೆ. ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಹಾವನ್ನು ರಕ್ಷಿಸಿ ಮತ್ತೆ ಅದರ ವಾಸಸ್ಥಾನವಾದ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಎಂದು ಕರೆಯಲಾಗುವ ಈ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ

ವಿಟ್ಲ: ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ಸಮುದಾಯ ಭವನಕ್ಕೆ ಶಿಲಾನ್ಯಾಸ

ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಲಕ್ಷ್ಮಿ ಯೋಜನೆಗಾಗಿ 60ಕೋಟಿ ರೂಪಾಯಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ಕುಟುಂಬವನ್ನು ಸದೃಢವಾಗಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ಭವನದ ಶಿಲಾನ್ಯಾಸವನ್ನು ನಡೆಸಿ ಮಾತನಾಡಿದರು. ಕ್ರೈಸ್ತ ಅಕಾಡೆಮಿಯ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಚರ್ಚ್ ಬಳಿಯ ಇಂಟರ್ ಲಾಕ್ ಅಳವಡಿಕೆಗೆ ಹಾಗೂ ಸಮುದಾಯ ಭವನಕ್ಕೆ

ಮಂಗಳೂರು: ಸೆ.27ರಿಂದ 30ರ ವರೆಗೆ ದಿ. ಲೋಕನಾಥ್ ಬೋಳಾರ್ ಸ್ಮರಣಾರ್ಥ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ, ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ರಾಜ್ಯ ಮತ್ತು ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‍ನ ಸಹಯೋಗದಲ್ಲಿ ದಿವಂಗತ ಲೋಕನಾಥ್ ಬೋಳಾರ್ ಸ್ಮರಣಾರ್ಥ ಸೆಪ್ಟಂಬರ್ 27ರಿಂದ 30ರ ವರೆಗೆ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನಲ್ಲಿ ಜರಗಿತು. ಮುಂಬೈಯ ಮೊಗವೀರ ವ್ಯವಸ್ಥಾಪಕ ಮಂಡಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಶಾಖೆ, ಮಂಗಳೂರು ಬಂದರ್ ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೇತೃತ್ವದಲ್ಲಿ

ಬಂಟ್ವಾಳ: ಸೆಪ್ಟಂಬರ್ 16ರಂದು ಬಿ.ಸಿ.ರೋಡಿನಲ್ಲಿ ಹಿರಿಯ ರಂಗಕರ್ಮಿ ಮಂಜು ವಿಟ್ಲ ನುಡಿನಮನ

ತುಳುಕೂಟ ಬಂಟ್ವಾಳವು ಮಂಜು ವಿಟ್ಲ ಅವರ ಬಂಧು ಬಳಗ, ಅಭಿಮಾನಿ ಬಳಗ ಹಾಗೂ ಸಮಾನ ಮನಸ್ಕರ ಪಾಲ್ಗೊಳ್ಳುವಿಕೆಯೊಂದಿಗೆ ಸೆಪ್ಟಂಬರ್ 16ರಂದು ಸಂಜೆ 4.30ಕ್ಕೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಹಿರಿಯ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರಿಗೆ ನುಡಿನಮನ-ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಿದೆ. ಮಂಜು ವಿಟ್ಲ ಅವರು ಹಿರಿಯ ರಂಗಕರ್ಮಿಯಾಗಿ, ಬಹುಮುಖಿ ಕ್ಷೇತ್ರಗಳ ಸಾಧಕರಾಗಿ, ಹಿರಿಯ ತರಬೇತುದಾರರಾಗಿ, ವಿವಿಧ ಸಂಘಟನೆಗಳ ಮಾರ್ಗದರ್ಶಕರಾಗಿ, ಎಲ್ಲದಕ್ಕಿಂತಲೂ

ಮಂಗಳೂರು: ಬಿಎನ್‍ಐ ಮಂಗಳೂರಿನಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023

ಬಿಎನ್‍ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023ನ್ನು ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಡಾ. ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್‍ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‍ಐ ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಣೇಶ್ ಎನ್. ಶರ್ಮ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಬಿಎನ್‍ಐ ಮಂಗಳೂರು

ಡ್ರೀಮ್ ಕ್ಯಾಚರ್ಸ್ ವತಿಯಿಂದ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ಆಡಿಷನ್ ಪ್ರಕ್ರಿಯೆ

ಡ್ರೀಮ್ ಕ್ಯಾಚರ್ಸ್ ಈವೆಂಟ್ಸ್ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ ಸಹಯೋಗದೊಂದಿಗೆ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ನಡೆಯಲಿದ್ದು, ಅದಕ್ಕಾಗಿ ಮೊದಲ ಹಂತದ ಆಡಿಷನ್ ಪ್ರಕ್ರಿಯೆಯು ನಗರದ ಫಿಜಾ ಬೈ ನೆಕ್ಸಸ್ ಮಾಲ್ ನಡೆಯಿತು. 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಪರ್ಧಿಸುವ ಅವಕಾಶವನ್ನು ಕಲ್ಪಿಸಿದ್ದರು. ಗ್ರೂಪ್ ಮತ್ತು ವೈಯಕ್ತಿಕವಾಗಿ ಮತ್ತು ವಿವಿಧ ತಂಡಗಳಾಗಿ ಭಾಗವಹಿಸಲು ಅವಕಾಶವಿತ್ತು. ಕರ್ನಾಟಕದ 60ಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿ,