ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ – ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಲೋಕಾರ್ಪಣೆಗೊಳಿಸುವ ಮುನ್ನ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ಪರಿಶೀಲನೆ ನಡೆಸಲು ಪಚ್ಚನಾಡಿ ರೈಲ್ವೇ ಬ್ರಿಡ್ಜ್ ಕಾಮಗಾರಿ
ಪುತ್ತೂರು ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 21 ರಂದು ಆರಂಭಗೊಂಡು ಜನವರಿ 7 ರ ತನಕ ನಿರಂತರ 48 ದಿನಗಳ ಕಾಲ (ಒಂದು ಮಂಡಲ) ಸಂಜೆ ವಿಶೇಷ ರಂಗಪೂಜೆ ನಡೆಯಲಿದೆ. ಮೂರನೇ ವರ್ಷದಲ್ಲಿ ನಡೆಯುತ್ತಿರುವ ಈ ವಿಶೇಷ ರಂಗಪೂಜೆಯು ಕಾರ್ಪಾಡಿ, ಶ್ರೀ. ಸುಬ್ರಹ್ಮಣ್ಯ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು. ನಿರಂತರ 48 ದಿನಗಳ ಕಾಲ ನಡೆಯುವ ರಂಗಪೂಜೆಯಲ್ಲಿ ಪ್ರತೀದಿನ 12 ಕುಟುಂಬಗಳಿಗೆ ಸೇವೆ ಮಾಡಿಸಲು ಅವಕಾಶವಿದೆ.
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವಿದೇಶಿ ಮಿಷನರಿಗಳು ಸಲ್ಲಿಸಿದ ಸೇವೆಗಳು ಸ್ಮರಣೀಯ. ಇದಕ್ಕೆ ಪೂರಕವಾಗಿ ದೇಶೀಯ ಸಭಾ ಪಾಲಕರುಗಳು ಸಭಾ ಪ್ರಾಂತ್ಯದ ಅಭಿವೃದ್ಧಿಗಾಗಿ ಸಭಾ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಇಂಥವರಲ್ಲಿ ರೆ. ಜಾರ್ಜ್ ಎ. ಬೆರ್ನಾಡ್ ಕೂಡ ಒಬ್ಬರು. ಇಂಥವರನ್ನು ಸ್ಮರಿಸಿ ಇವರ ಹೆಸರಿನಲ್ಲಿ ಕರ್ನಾಟಕ ಥಿಯಲಾಜಿಕಲ್ ಕಾಲೇಜಿನ ಮುಖಾಂತರ ಗಾರ್ಡನ್ ಒಂದನ್ನು ನಿರ್ಮಾಣ ಮಾಡಿರುವುದು ಅಭಿನಂದನೀಯ ಎಂದು ಚರ್ಚ್ ಆಫ್ ಸೌತ್ ಇಂಡಿಯಾ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಯಿನಾಥ ಶೇಟ್ ಅವರನ್ನು ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸ್ವಾತಿ ಜಿ ಶೇಟ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕೋಟೇಶ್ವರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜ್ಯುವೆಲ್ ಅಸೋಸಿಯೇಷನ್ ಕುಂದಾಪುರ ಇದರ ಅಧ್ಯಕ್ಷರಾದ ಸತೀಶ್ ಶೇಟ್ ನಾಡ, ಅನುಗ್ರಹ
ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ
ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2 ಸಾವಿರಕ್ಕೂ ಹೆಚ್ಚು ಪೈಂಟಿಂಗ್ಗಳನ್ನು ರಚಿಸಿ ಎಲ್ಲರ ಮನಸನ್ನು ಗೆದ್ದಿದ್ದಾರೆ. ಮೀನುಗಾರ ಸಮುದಾಯದವರ
ಮಂಗಳೂರಿನ ಇನೋಳಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನಲ್ಲಿ ಅಕ್ಟೋಬರ್ 30 ರಂದು ಪದವಿ ದಿನದ ಸಂಭ್ರಮದ ಕ್ಷಣಗಳನ್ನು ಆಚರಿಸಲಾಗುವುದು.ಬೇರಿಸ್ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬ್ಯಾರಿಸ್ ಎನ್ವಿರೋ-ಅರ್ಕಿಟೆಕ್ಟರ್ ಡಿಸೈನ್ ಸ್ಕೂಲ್ನ ಒಂಭತ್ತನೇ ಪದವಿ ಸಮಾರಂಭವು ನಡೆಯಲಿದೆ. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಐಟಿ ಪ್ರಾಂಶುಪಾಲರಾದ ಡಾ. ಎಸ್.ಐ. ಮಂಜುರ್ ಬಾಷಾ, ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.
ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ
ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,
ಬಂಟ್ವಾಳ: ವಿಶಾಖಪಟ್ಟಂನಲ್ಲಿ ಅ.21 ಮತ್ತು 22 ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಹಾಗೂ ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ಅಂತರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೆನಿಲ್ಲಾ ಮಣಿಕಂಠ ಅವರು ಪ್ರಸಕ್ತ ಮಂಗಳೂರಿನ ಎನ್ಐಟಿಕೆಯಲ್ಲಿ ಎಂಟೆಕ್ ವ್ಯಾಸಂಗ ಮಾಡಿತ್ತಿದ್ದು ರಾಜೇಶ್