Home Posts tagged #katapady

ಕಟಪಾಡಿ ಕೊಲೆ ಪ್ರಕರಣ ಆರೋಪಿ ಸೆರೆ

ಕಟಪಾಡಿಯಲ್ಲಿ ನಡೆದ ಕೂಲಿ ಕಾರ್ಮಿಕನ ಬಲಿ ಪಡೆದ ವ್ಯಕ್ತಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಒರಿಸ್ಸಾ ಮೂಲದ ಆಕನ್. ಈತ ಹಾಗೂ ಗಣೇಶ್ ನಡುವೆ ಜಗಳ ನಡೆದು ಕಬ್ಬಿಣದ ಸಲಾಖೆಯಲ್ಲಿ ತಲೆ ಹೊಡೆದು ಕೊಲೆ ನಡೆಸಿ ಪರಾರಿಯಾಗಿದ್ದ ಆಕನ್ ನನ್ನು ರಾತ್ರಿ ಉಡುಪಿ ಬಸ್ ನಿಲ್ದಾಣದ ಬಳಿ ಕಾಪು ಪೊಲೀಸರು ಬಂಧಿಸಿದ್ದರು.

ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದ ಕೊರಗಜ್ಜ ಸನ್ನಿಧಿಗೆ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ

ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳ ದಂಡೇ ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸಿನಿಮಾ ನಟ, ನಟಿಯರು, ಉದ್ಯಮಿಗಳು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ

ಬಡತನದಲ್ಲೂ ದೀನರ ಕಷ್ಟಕ್ಕೆ ಮಿಡಿಯುವ ಹೃದಯ ರವಿ ಕಟಪಾಡಿ

ತಾನು ಆರ್ಥಿಕವಾಗಿ ಬಲಹೀನನಾಗಿದ್ದರೂ ಬೇರೊಬ್ಬರ ಕಷ್ಟಕ್ಕೆ ವಿಡಿಯುವ ತುಡಿತ ಇರುವ ಮನುಷ್ಯ ಅಪರೂಪ.. ಆದರೆ ಅದಕ್ಕೆ ಅಪವಾದವೋ ಎಂಬಂತೆ ಕೂಲಿ ಕೆಲಸ ನಡೆಸಿ ಜೀವನ ಸಾಗಿಸುವ ಅಪ್ರತಿಮ ಅಪ್ಪಟ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಕಟಪಾಡಿ ಎಂಬುದಾಗಿ ಗಮನಾರ್ಹ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ರವಿ ಕಟಪಾಡಿ ಅದೆಷ್ಟೋ ಬಡ ಕುಟುಂಬಗಳ ಕಷ್ಟಕ್ಕೆ ಸಂಧಿಸುವ ಮೂಲಕ ನಿಜವಾದ ಸಮಾಜ ಸೇವಕ ಎಣಿಸಿದ್ದಾರೆ. ಇದೀಗ ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಯ

ಕಟಪಾಡಿ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

ಕಟಪಾಡಿ ಮಟ್ಟು ಹೊಳೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಕಟಪಾಡಿ ಮಟ್ಟು ಹೊಳೆಯಲ್ಲಿ ತೇಲಿ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು, ಬಾರೀ ಸೆಳೆತ ಹೊಂದಿದ ನೆರೆಯ ನೀರಿನಲ್ಲಿ ಸಾಹಸಮಯವಾಗಿ ತಡಕ್ಕೆ ಸೇರಿಸಿ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದರು, ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ