ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (33) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರಿಯಾಝ್ ಮನೆಯ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು
ಮಂಗಳೂರು ರಥಬೀದಿ ವೆಂಕಟರಮಣ ದೇವಸ್ಥಾನ, ಆಚಾರ್ಯಮಠ ವಠಾರದಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿರುವ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿ ಪತ್ನಿ ಸಮೇತರಾಗಿ ಭೇಟಿ ನೀಡಿ ಶಾರದೆಯ ದರ್ಶನ ಪಡೆದರು. ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಜತೆಗಿದ್ದರು…
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಕುದ್ರೋಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಕುದ್ರೋಳಿಯ ಫಾತಿಮಾ ಇಸ್ಲಾಮಿಕ್ ಸೆಂಟರ್ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಆಯಿಷಾ ಸಫಾ ಅವರ ಪವಿತ್ರ ಕುರ್ ಆನ್ ಪಠಣದೊಂದಿಗೆ ಆರಂಭಗೊಂಡಿತು. ನಂತರ ಎಸ್ ಐ ಓ ಮಂಗಳೂರು ನಗರ ಅಧ್ಯಕ್ಷರಾದ