ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ
ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ, ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುವ ಸಂದರ್ಭ ಕುಣಿಗಲ್ ನಲ್ಲಿ ಬಾಸ್ಕರ್ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದ್ದಿದೆ. ಕೂಡಲೇ ಚಾಲಕ ಅಪಘಾತ ತಪ್ಪಿಸಲು ಚಾಲ ಕೂಡಲೇ ಬ್ರೇಕ್ ಹಾಕಿದ್ದು ಈ ಸಂದರ್ಭ ತಮ್ಮ ವಾಹನಕ್ಕೆ ಹಿಂಬದಿಯಿಂದ ಬಂದ ಮಿನಿ ಬಸ್ ಡಿಕ್ಕಿ
ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ. ಆದರೆ, ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’ ಎಂದೇ ಇದೆ. ಆದರೆ, ಮಂಗಳೂರು ನಗರದಲ್ಲಿಯೂ ‘ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ
ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ ಮಾತನಾಡಿ, ವಿಶ್ವ ವಿದ್ಯಾನಿಲಯ ಅಂಕಪಟ್ಟಿಯನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಅದೇ
ಸುರತ್ಕಲ್: ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ. ಟೋಲ್ ಗೇಟ್ ಮುತ್ತಿಗೆ ಸಂದರ್ಭ ಪೋಲಿಸ್ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರಿಗೆ ಲಾಠಿ ಪ್ರಯೋಗ ಮಾಡಿರುವುದಾಗಿ ಎಂದು ತಿಳಿದು ಬಂದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ಪ್ರತಿಭಟನಾಕಾರ ಅಬ್ದುಲ್ ಖಾದರ್ ಎಂಬವರ ಕಣ್ಣಿಗೆ ಲಾಠಿ ತಾಗಿ
ಮಂಗಳೂರು ಬಂದರ್ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಟ್ರಕ್ನಲ್ಲಿ ತುಂಬಿದ್ದ ಕೋಲ್ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ
ಮ.ನ.ಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ , ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದು , ಇದು ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ . ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದಾರೆ . ಇದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕಾರ್ಯವಾಗಿದ್ದು ,
ಉಳ್ಳಾಲ : ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸದಸ್ಯರು ಸೋಮವಾರದಂದು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ತೊಕ್ಕೊಟ್ಟು – ತಲಪಾಡಿ ಹೆದ್ದಾರಿಯಲ್ಲಿ ಕಾಪಿಕಾಡ್ ಅವೈಜ್ಞಾನಿಕ ಯೂ ಟರ್ನ್ ನಿಂದಾಗಿ ಪ್ರತಿ ನಿತ್ಯ ಅಪಘಾತ ನಡೆಯುತ್ತಿದ್ದು , ಇಲ್ಲಿನ ಅಪಘಾತ ನಿಯಂತ್ರಿಸುವ ಸಲುವಾಗಿ ಅಂಬಿಕಾರೋಡ್ ನಲ್ಲಿ ಯೂ ಟರ್ನ್ ತೆರೆಯುವಂತೆ ಮನವಿ ಮಾಡಲಾಯಿತು. ತೊಕ್ಕೊಟ್ಟುನಿಂದ ಕುಂಪಲ ಬೈಪಾಸ್ ತನಕ ಎರಡೂ ಬದಿಗಳಲ್ಲಿ
ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ
ಸುರತ್ಕಲ್ ಎನ್ಐಟಿಕೆ ಬಳಿಯ ಟೋಲ್ಗೇಟ್ ತೆರವಿಗೆ ಅಧಿಕಾರಿಗಳು 20 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್ಗೇಟ್ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ.