Home Posts tagged #mangalore press club (Page 2)

ಇನೋಳಿಯ ಬ್ಯಾರೀಸ್ ನಾಲೆಡ್ಜ್ ಸೆಂಟರ್‌ನಲ್ಲಿ ಒಂಭತ್ತನೇ ಪದವಿ ಸಮಾರಂಭ

ಮಂಗಳೂರಿನ ಇನೋಳಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 30 ರಂದು ಪದವಿ ದಿನದ ಸಂಭ್ರಮದ ಕ್ಷಣಗಳನ್ನು ಆಚರಿಸಲಾಗುವುದು.ಬೇರಿಸ್ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬ್ಯಾರಿಸ್ ಎನ್ವಿರೋ-ಅರ್ಕಿಟೆಕ್ಟರ್ ಡಿಸೈನ್ ಸ್ಕೂಲ್‌ನ ಒಂಭತ್ತನೇ ಪದವಿ ಸಮಾರಂಭವು ನಡೆಯಲಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು

ಮಂಗಳೂರಿನಲ್ಲಿ ಕಾರುಣ್ಯ ಸಮಾವೇಶ

ಪ್ರವಾದಿ ಜನ್ಮ ಮಾಸಾಚರಣೆಯ ಭಾಗವಾಗಿ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿರುವ ಈ ಭಾಗದ ಆಯ್ದ ಸಾವಿರ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ಒದಗಿಸುವ ಸಲುವಾಗಿ ಸಂಸ್ಥೆಯು ಕರುಣೆಯ ಕೈ ಎಂಬ ವಿಶಿಷ್ಠ ಯೋಜನೆಯನ್ನು ಕೈಗೆತ್ತಿಗೊಂಡಿದ್ದು, ಇದರ ಪ್ರಚಾರಾರ್ಥ ಅ.26 ರಂದು ಕಾರುಣ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಾವೇರಿಯ ಮುಈನುಸ್ಸುನ್ನ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕೆಎಂ ಮುಸ್ತಫಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ

ಪುತ್ತೂರಿನ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಯನ್ನು ಬಂಧಿಸುವಂತೆ ಆಗ್ರಹ

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಮಗುವನ್ನು ಕರುಣಿಸಿದ ಪ್ರಕರಣದ ಆರೋಪಿ ಆರ್‌ಎಸ್‌ಎಸ್ ಮುಖಂಡ ನಾರಾಯಣ ರೈ ಬಂಧನಕ್ಕೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮನ್ವಯ ಸಮಿತಿಯ ಮುಖಂಡ ಅಶೋಕ್ ಕೊಂಚಾಡಿ ಅವರು, ದಲಿತ ಸಮುದಾಯದ ಬಾಲಕಿಗೆ ಆದ ಅನ್ಯಾಯದ ವಿರುದ್ಧ ಮಾತನಾಡದ ಜಿಲ್ಲಾ ಉಸ್ತುವಾರಿ

ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು.  ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.

ಧ್ವನಿ ವರ್ಧಕ ಮೂಲಕ ಶಬ್ದಮಾಲಿನ್ಯ ತಡೆಯಲು ಆಗ್ರಹ : ಅ.7ರಂದು ಪ್ರತಿಭಟನೆ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಹಿಂದೂ ದೇವಸ್ಥಾನಗಳನ್ನು ರಾತ್ರೋರಾತ್ರಿ ನೆಲಸಮ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಕಳೆದ 21 ವರ್ಷದ ಹಿಂದೆಯೇ ಶಬ್ದ ಮಾಲಿನ್ಯ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಹಾಗೂ ಇತರೆ ಮಾಧ್ಯಮ ಮೂಲಕ ಶಬ್ದ ಮಾಲಿನ್ಯ ತಡೆಯಲು ಆದೇಶಿಸಿದೆ. ಹಲವಾರು ಹೈಕೋರ್ಟ್‍ಗಳಯ ಕಟ್ಟುನಿಟ್ಟಾಗಿ ಆಜ್ಞೆ ಪಾಲಿಸಲು ಹೇಳಿದ್ದರೂ ಇಂದಿಗೂ ಪಾಲನೆ ಯಾಕೆ ಆಗುತ್ತಿಲ್ಲ ಎಂದು ಶ್ರೀರಾಮ ಸೇನೆಯ ರಾಜ್ಯ ಪ್ರಧಾನ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ : ಅ.2ರಂದು ಸಂರಕ್ಷಣಾ ಅಭಿಯಾನ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಸಂಭ್ರಮೋತ್ಸವದ ಆಚರಣೆ ಸಂರಕ್ಷಣಾ ಅಭಿಯಾನವು ಆಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣಗೈದು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ. ಸಲ್ಯಾನ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಈ ಅಮೃತ

ಯೆನೆಪೋಯ ಆಸ್ಪತ್ರೆಯಿಂದ ಅಪರೂಪದ ಕ್ಯಾನ್ಸರ್ ಕಾಯಿಲೆ ನಿರ್ಮೂಲನೆ….!

ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ

ಯೆನೆಪೋಯ ವತಿಯಿಂದ ಪತ್ರಕರ್ತರಿಗೆ ಯೆನ್ ಮೀಡಿಯ ಕಾರ್ಡ್ ವಿತರಣೆ

ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ದ.ಕ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಮತ್ತು ಅವರ ಕುಟುಂಬಸ್ಥರಿಗೆ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ. ಕೊರೊನಾ ಸಂದರ್ಭದಲ್ಲಿ ಪ್ರೆಂಟ್ ಲೈನ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರಿಗೆ ಸ್ಪೆಷ್ಯಾಲಿಟಿ ಮತ್ತು ಮಲ್ಟಿ ಸ್ಪೆಷ್ಯಾಲಿಟಿ ಆರೋಗ್ಯ ಸೇವೆಯನ್ನ ರಿಯಾಯಿತಿ ದರದಲ್ಲಿ

ಜಿಲ್ಲೆಯಲ್ಲಿ ವೀಕೆಂಡ್ ಮನರಂಜನೆಗೆ ಚಿಂತನೆ : ಜಿಲ್ಲಾಧಿಕಾರಿ

ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ

ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021 : ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ

ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.