ಕನ್ನಡ ಸಾಹಿತ್ಯಕ್ಕೆ ವಿಮರ್ಶಾ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದವರು ಎಲ್ ಎಸ್ ಶೇಷಗಿರಿ ರಾವ್. ಅವರು ಸರಳ , ನೇರ ನಡೆ-ನುಡಿಯ ಮೇರು ವ್ಯಕ್ತಿತ್ವವನ್ನು ರೂಪಿಸಿಕೊಂಡು ಕನ್ನಡ ಸಾಹಿತ್ಯದಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಬಿ ಎಂ ಶ್ರೀ ಅವರ ಪ್ರೋತ್ಸಾಹದಿಂದ ಮಾತೃಭಾಷೆ ಕನ್ನಡದಲ್ಲಿ ಕೃತಿಗಳನ್ನು ರಚಿಸಿದರು. ಬಹಳ ಚಿಕ್ಕವಯಸ್ಸಿನಲ್ಲಿ ಬರಹದಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ.) ಇದರ ಕಟ್ಟಡ ರಚನೆಗೆ ಶ್ರೀ ಕ್ಷೇತ್ರದಿಂದ ರೂ.2,00,000/- ಮೊತ್ತ ಅನುದಾನ ಮಂಜೂರಾಗಿದ್ದು, ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಕಟ್ಟಡದ ಉಧ್ಘಾಟನೆಯನ್ನು ಶ್ರೀ ಕೆ.ಪಿ ಸುಚರಿತ ಶೆಟ್ಟಿ ಅಧ್ಯಕ್ಷರು ದ.ಕ
ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು. ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್ಐ ಸಂತೋಷ್ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ ಮಾರ್ಚ್ 8ರಂದು ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಸದಾನಂದ ಮಾವಜಿ, ಅಧ್ಯಕ್ಷರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರು
ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ “ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.)” ಯ ದಶಮಾನೋತ್ಸವದ ಅಂಗವಾಗಿ ಮಹಿಳಾ ದಿನಾಚರಣೆ ಮತ್ತು” ನಾನೂ ನಾಯಕಿ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವು ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದೊಂದಿಗೆ ನಡೆಯಿತು. ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ ನ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಅವರ ಅಧ್ಯಕ್ಷತೆಯಲ್ಲಿ ನಡೆದ
ಮೂಡುಬಿಬಿದಿರೆ: ಖ್ಯಾತ ಉದ್ಯಮಿ, ಸುಜಯ ಹೊಲೋ ಬ್ಲಾಕ್, ಸುಜಯ ಇಂಟರ್ಲಾಕ್ ಮಾಲಕ ಮೂಡುಬಿದಿರೆಯ ಸದಾಶಿವ ಬಂಗೇರ (71) ಇಂದು ಸಂಜೆ 5ರ ಸುಮಾರಿಗೆ ಹೃದಯಾಘಾತದಿಂದ ಮನೆಯಲ್ಲೇ ಕುಸಿದು ಬಿದ್ದು ಇಹಲೋಕವನ್ನು ತ್ಯಜಿಸಿದ್ದಾರೆ. ಜನಾನುರಾಗಿಯಾಗಿದ್ದಶ್ರೀಯುತರು ಪತ್ನಿ ತುಳು ಸಾಹಿತಿ ಜಯಂತಿ ಬಂಗೇರ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದು ಹಾಗೂ ಅನೇಕ ಪತ್ರಿಕೆಗಳಲ್ಲಿ ಪ್ರಶಂಸೆಗೆ ಪಾತ್ರರಾಗಿ ಈಗಾಗಲೇ ಮೂರು ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರು ಸುರತ್ಕಲ್ ನಿವಾಸಿಯಾಗಿದ್ದು ರೋನಾಲ್ಡ್ ಮತ್ತು ನಾನ್ಸಿ ಶಿಕ್ಷಕ ದಂಪತಿಯ ಪುತ್ರಿ. ಪ್ರಸ್ತುತ ಎಸ್ ಡಿ ಎಮ್ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ವತಿಯಿಂದ
ಕುಖ್ಯಾತ ದನಕಳ್ಳ ಮೊಹಮ್ಮದ್ ಯೂನಸ್ ಬಂಧನವಾಗಿದೆ.ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ದನಕಳ್ಳ ಮೊಹಮ್ಮದ್ ಯೂನಸ್ನನ್ನು ಮಾ. 7ರಂದು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್ ಯೂನಸ್ (30) ಕಾರ್ಕಳ ತಾಲೂಕು ರೆಂಜಾಳದಲ್ಲಿ ಶುಕ್ರವಾರ ಬಂಧಿಸಲ್ಪಟಿದ್ದಾನೆ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ
ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ “ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು” ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು. ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್
ಬೈಂದೂರು : ಮೀನುಗಾರಿಕೆ, ಮೀನುಗಾರರನ್ನು ಮತ್ತು ಕರಾವಳಿಯನ್ನು ದ್ವೇಷಿಸುವ ಬಜೆಟ್ ಇದಾಗಿದೆ. ರಾಜ್ಯದ ಆರ್ಥಿಕತೆಗೆ ತನ್ನದೆ ಕೊಡುಗೆ ನೀಡುತ್ತಾ ಬರುತ್ತಿರುವ ಮೀನುಗಾರಿಕೆ ವಲಯದ ಉತ್ತೇಜನಕ್ಕೆ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಅಲ್ಲದೆ, ಮೀನುಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಾಕಷ್ಟು




























