ಮೂಡುಬಿದಿರೆ: ತಾಲೂಕಿನ ಹೊಸಬೆಟ್ಟು ಗ್ರಾಮದ ಬಿರಾವು ಶಾಂತಿ ನಿವಾಸ ವಿಲಿಯಮ್ ಕುಟ್ಟಿನ್ಹ ಎಂಬುವರ ಮನೆಯ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ನಡೆದಿದೆ. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ ಅವರ ನಿರ್ದೇಶನದಂತೆ,ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್
ಕೃಷಿಯನ್ನೇ ನಂಬಿ ಜೀವನ ನಡೆಸುವ ಕಟಪಾಡಿಯ ಅಂಬಾಡಿ ಬೈಲು ಕೋಟೆ ಮಟ್ಟುವಿನ ರವಿ ಶೇರಿಗಾರ್ ಐದು ಬಗೆಯ ಕಲ್ಲಂಗಡಿ ಹಣ್ಣು ಸಹಿತ ವಿವಿಧ ಬಗೆಯ ಕೃಷಿ ಉತ್ಪನ್ನಗಳನ್ನು ನಡೆಸಿ ತನ್ನ ಮನೆಯನ್ನೇ ಮಾರುಕಟ್ಟೆಯನ್ನಾಗಿಸಿ ಯಶಸ್ವಿ ಕೃಷಿಕರಾಗಿದ್ದಾರೆ. ರವಿ ಶೇರಿಗಾರ್ ಕಳೆದ ಸುಮಾರು ಹತ್ತು ವರ್ಷಗಳಿಂದ ಐದು ಎಕರೆ ಗದ್ದೆಯಲ್ಲಿ ಕಲ್ಲಂಗಡಿ ಹಣ್ಣು, ಮಟ್ಟುಗುಳ್ಳ, ಸೌತೆಕಾಯಿ, ಮುಳ್ಳುಸೌತೆ, ಹೀರೇಕಾಯಿ ಹಾಗೂ ಕಪ್ಪು ಹೆಸರು ಇವುಗಳನ್ನು ಬೆಳೆಸಿ ಉತ್ತಮ ಪಸಲು
ಪುತ್ತೂರು : ವಿಶ್ವ ಕನ್ನಡ ಸಂಸ್ಥೆ ಇದರ ವತಿಯಿಂದ ವಿಶ್ವ ಕನ್ನಡ 6 ನೇ ರಾಜ್ಯ ಸಮ್ಮೇಳನದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸುವ ಸಾವಿರ ಕವಿಗಳ ಸಮ್ಮೇಳನ ಕವಿಗೋಷ್ಠಿ ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆ 73 ರಲ್ಲಿರುವ ಅಸೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಸಮ್ಮೇಳನದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ ಮಾಡುವ ಮೂಲಕ ಯುವ ಸಾಹಿತಿ ಸವಿತಾ ಈಶ್ವರಮಂಗಲ ಇವರ ಹೆಸರು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಯಿತು.
113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿಕ್ಷಣ ತಜ್ಞರಾದ ಪ್ರೊ. ಕೆ.ಇ. ರಾಧಾಕೃಷ್ಣ ಅವರು ಮಾತನಾಡಿ, ಒಂದು ಸಣ್ಣ ಅಕಾಡೆಮಿಯ ಮೂಲಕ
ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಅಪರೂಪದ ಮತ್ತು ಸುಧಾರಿತ PET-CT ಸ್ಕ್ಯಾನ್ (Gallium-68 Trivehexin) ಯಶಸ್ವಿಯಾಗಿ ನಡೆಸಿರುವುದನ್ನು ಘೋಷಿಸುತ್ತದೆ. ಇದು ನಿರ್ಧಾರಾತ್ಮಕ ಇಮೇಜಿಂಗ್ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. Gallium-68 Trivehexin ಸ್ಕ್ಯಾನ್ ಅನ್ನು ಪ್ರಾಥಮಿಕ ಹೈಪರ್ಪ್ಯಾರಾಥೈರಾಯಿಡಿಸಂ (PHPT) ಕಾಯಿಲೆಯಿಂದ ಪೀಡಿತ ರೋಗಿಗಳಲ್ಲಿ ಹೈಪರ್ಫಂಕ್ಷನಿಂಗ್
ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ . ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಆತ್ಮಹತ್ಯೆಗೈದ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ
ನೆಲ್ಯಾಡಿ: ಗೇರುತೋಪಿಗೆ ಬೆಂಕಿಬಿದ್ದ ಪರಿಣಾಮ ಐದಾರು ಎಕ್ರೆ ಜಾಗದಲ್ಲಿದ್ದ ನೂರಾರು ಫಲಭರಿತ ಗೇರುಮರಗಳು ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿರುವ ಘಟನೆ ಗೋಳಿತ್ತೊಟ್ಟು ಸಮೀಪ ಶಾಂತಿಮಾರ್ ವ್ಯಾಪ್ತಿಯಲ್ಲಿ ಫೆ.24ರಂದು ಅಪರಾಹ್ನ ನಡೆದಿದೆ. ಗ್ರಾಮಸ್ಥರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ವಿದ್ಯುತ್ ಟ್ರಾನ್ಸ್ಫಾರ್ಮರ್ನಿಂದ ಹರಡಿದ ಬೆಂಕಿಯಿಂದಾಗಿ ಈ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ.ಗೋಳಿತ್ತೊಟ್ಟು ಸಮೀಪ ಕೊಣಾಲು ಗ್ರಾಮದ
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಆಗಮಿಸುವ ಪಾದಯಾತ್ರಿಗಳ ಅನುಕೂಲಕ್ಕಾಗಿ ಅರಣ್ಯ
ನೆಲ್ಯಾಡಿ: ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಷಡಾಧಾರ, ಗರ್ಭನ್ಯಾಸಗಳ ಆಗಮನ-ಮೆರವಣಿಗೆ
ನೆಲ್ಯಾಡಿ:ಕೌಕ್ರಾಡಿ-ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಪ್ರತಿಷ್ಠಾಪನೆಯಾಗಲಿರುವ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಕಾರ್ಕಳದಿಂದ ಶಿಲ್ಪಿಗಳು ತಂದ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಮುಂಭಾಗದಲ್ಲಿರುವ ಶಿಲ್ಪಾ ಕಾಂಪ್ಲೆಕ್ಸ್ ಎದುರು ಸ್ವಾಗತಿಸಲಾಯಿತು. ಅಲ್ಲಿಂದ ವಾಹನಗಳ ಮೆರವಣಿಗೆ, ಚೆಂಡೆ ವಾದನದೊಂದಿಗೆ ರಾಷ್ಟ್ರೀಯ




























