Home Posts tagged #mangalore (Page 12)

ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ : ಪೂರ್ವಭಾವಿ ಸಭೆ

ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜಾತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ – ಓರ್ವ ಅರೆಸ್ಟ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ

ಮಾನವೀಯತೆ ಮೆರೆದ ಬೆಳ್ಳಾರೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್

ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್ ಲಕೋಟೆಯನ್ನು ಅದರ ವಾರಾಸುದಾರ ರುಕ್ಮಯ್ಯ ಗೌಡ ಪೈಚಾರುರವರ ಮೊಬೈಲ್ ನಂ. ಸಂಗ್ರಹಿಸಿ ಠಾಣೆಗೆ ಕರೆಸಿ ಈ ದಿನ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ

ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7 ರಂದು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಪೂರ್ವಾಹ್ನ 9.30ಕ್ಕೆ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ ಟ್ರಸ್ಟ್ ಮಾಣಿಯ ಅಧ್ಯಕ್ಷರೂ ಆಗಿರುವ ಶ್ರೀ ಪ್ರಹ್ಲಾದ ಶೆಟ್ಟಿ .ಜೆ ರವರು ಶಾಲಾ ಆವರಣದಲ್ಲಿ ಹಣ್ಣಿನ

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಮುಖಂಡರಾದ ಮುರಳೀಧರ್ ರೈ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಮೊದಲಾದವರು ಇದ್ದರು.

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ ಪುರಸ್ಕಾರ

ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು

ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ

ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.‌ಧರ್ಮ ಹಾಗೂ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಇವರು