ಮೂಲ್ಕಿಯ ಕ್ಯಾನ್ ಕೋಸ್ ಡ್ರೈ ಫ್ರುಡ್ಸ್ ಸ್ಟೋರ್ ಮೂಲ್ಕಿ ಯಲ್ಲಿ ಕ್ಯಾನ್ ಕೋಸ್ ಗಿವ್ ವೇ ಎಂಬ ಸ್ಪರ್ಧೆಯನ್ನು ಸೋಶಿಯಲ್ ಮೀಡಿಯಾ ಕಾಂಪೊಸಿವ್ ನಲ್ಲಿ ಏರ್ಪಡಿಸಲಾಗಿತ್ತು ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಉತ್ತರವನ್ನು ನೀಡಿದ ಆಯುಷ್ ಪೂಜಾರಿ ಯವರು ವಿಜೇತರಾದರು. ಪ್ರಶಸ್ತಿಯನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೊಲ್ಪಿ ಡಿ’ಕೊಸ್ತ ವಿಜೇತರಿಗೆ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಪುತ್ತೂರು ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು.ರಂಗ
ಮಂಗಳೂರು: ನಗರಕ್ಕೆ ಆಗಮಿಸುವ ಸಿಎಂ ಸಿದ್ದರಾಮಯ್ಯಗೆ ಭಿತ್ತಿಪತ್ರ ಪ್ರದರ್ಶಿಸಿ ಘೆರಾವ್ ಹಾಕಲು ಸಿದ್ಧತೆಯಲ್ಲಿರುವಾಗಲೇ ಡಿವೈಎಫ್ಐ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಗರದ ಹೊರವಲಯ ನರಿಂಗಾನದಲ್ಲಿ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳದಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಶನಿವಾರ ಸಂಜೆ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ವೇಳೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ತಕ್ಷಣ ಅಮಾನತಿಗೆ
ಬಂಟ್ವಾಳ: ಬಿ.ಸಿ.ರೋಡು ಅಡ್ಡಹೊಳೆ ಚತುಷ್ಫಥ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಣಿ, ಸೂರಿಕುಮೇರು, ಕಲ್ಲಡ್ಕ, ಮೆಲ್ಕಾರ್, ನೆಹರುನಗರದಲ್ಲಿ ಅಭಿವೃದ್ದಿ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಹಾಗೂ ಗುತ್ತಿಗೆ ಸಂಸ್ಥೆ ಕೆಎನ್ಆರ್ಸಿಯ ಅಧಿಕಾರಿಗಳೊಂದಿಗೆ ಚರ್ಚಿದರು. ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿಯಲ್ಲಿ ಅಭಿವೃದ್ದಿ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ
ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂಟ ಅಶೋಕ್ ರಾಯನ್ ಕ್ರಾಸ್ತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು.ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ
ಉದ್ಯಾವರ ಗುಡ್ಡೆ ಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದಿದ್ದು ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19 ) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ
ಮಂಜೇಶ್ವರ ಕುಳೂರು ಸಂತಡ್ಕದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.19ರಿಂದ ಜ.24ರವರೆಗೆ ನಡೆಯಲಿದೆ. ಜ.19ರಿಂದ ಜ.22ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಜ.23, 24ರಂದುವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.16ರಂದು ಗೊನೆಮುಹೂರ್ತ, ಜ.19ರಂದು ಹೊರೆಕಾಣೀಕೆ ಮೆರವಣಿಗೆ, ಧಾರ್ಮಿಕ ಸಭೆ, ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕೋಡಿಂಬಾಡಿಯ ಮನೆಯಲ್ಲಿ ಚಾಲನೆ ನೀಡಲಾಗುವುದು.ತುಳು ಅಕಾಡೆಮಿ ಪ್ರಕಟಿಸಿರುವ ಕೃತಿಗಳು ಹಾಗೂ ಅಕಾಡೆಮಿಯ ಮಾರಾಟ ವಿಭಾಗದಲ್ಲಿರುವ ಇತರ ತುಳು ಕೃತಿಗಳನ್ನು ಈ ಸಂದರ್ಭದಲ್ಲಿ ಶಾಸಕರಿಗೆ ನಿಗದಿತ
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ




























