Home Posts tagged #mangalore (Page 127)

ಕುಂಜತ್ ಬೈಲ್ ರಸ್ತೆ ಕಾಮಗಾರಿ ಗುದ್ದಲಿ ಪೂಜೆ

ವಾರ್ಡ್ -15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 20 ಲಕ್ಷ, ಗಾಂಧಿನಗರ – ಪಳನೀರು ರಸ್ತೆ -ಕಾಲೇಜು ಅಭಿವೃದ್ಧಿ ರಸ್ತೆ 10 ಲಕ್ಷ, ಗಾಂಧಿನಗರ ಪ್ರಮೋದ್ ಮನೆ ಬಳಿ ಇಂಟರ್ ಲಾಕ್ ವ್ಯವಸ್ಥೆ

ಚಿತ್ರಾಪುರ:ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ, ಶಾಸಕರಾದ ಡ.ಭರತ್ ಶೆಟ್ಟಿ ವೈ ಅವರು ಗುರುವಾರ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.ಚಿತ್ರಾಪುರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ

ಮಂಗಳೂರು: ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜವನ್ನು

ಕಳತ್ತೂರು: ದ.ಸಂ.ಸ ಕಳತ್ತೂರು ಗ್ರಾಮ ಶಾಖೆ ಉದ್ಘಾಟನೆ

ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ ವಿರುದ್ಧ ಅಂಬೇಡ್ಕರರು ನ್ಯಾಯೋಚಿತ ಹೋರಾಡಿ ಸಂವಿಧಾನವನ್ನು ರಚಿಸಿದರು ಅದನ್ನು ಉಳಿಸಿ ಪೋಷಿಸಿದರೆ

ಮಂಗಳೂರು : ಮಿಲಾಗ್ರಿಸ್ ನೂತನ ನರ್ಸಿಂಗ್ ಕಾಲೇಜ್ ಹಾಗೂ ಆವಿಷ್ಕಾರ-2024 ಸಾಂಸ್ಕೃತಿಕ ಹಬ್ಬದ ಉದ್ಘಾಟನೆ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ನೂತನ ನರ್ಸಿಂಗ್ ಕಾಲೇಜ್ ಹಾಗೂ ಕಾಲೇಜಿನ ಆವರಣದಲ್ಲಿ ’ಅವಿಷ್ಕಾರ್ ೨೦೨೪’ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಸಮಗ್ರ ಆರೋಗ್ಯ ವಿಜ್ಞಾನ ವಿಭಾಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾದ ಪ್ರೊಫೆಸರ್ ಯು . ಟಿ ಇಫ್ತಿಕಾರ್ ಫರೀದ್ ಮಾತನಾಡಿ, ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಒಂದು ಮಹತ್ತರ ಕಾರ್ಯವನ್ನು ಕೈಗೊಂಡಿದೆ. ನರ್ಸಿಂಗ್ ಒಂದು ಉದಾತ್ತ ವೃತ್ತಿಯಾಗಿದ್ದು ಉದ್ಯೋಗ ರಂಗದಲ್ಲಿ

ಪುತ್ತೂರು: ವಿಟಿಯು ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿ- ಎಸ್.ಜೆ.ಇ.ಸಿ ತಂಡ ವಿನ್ನರ್ಸ್

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 28 ಮತ್ತು 29 ನವೆಂಬರ್ 2024ರಂದು ವಿವಿಸಿಇ ಪುತ್ತೂರಿನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿತು.ದೈಹಿಕ ಶಿಕ್ಷಣ ನಿರ್ದೇಶಕರಾದ ವನೀಷಾ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್ ತರಬೇತುದಾರ ಜಯವರ್ದನ್ ಮತ್ತು ಗುರುನಂದನ್ ಅವರ ಮಾರ್ಗದರ್ಶನದಲ್ಲಿ ಟ್ರೋಫಿಯನ್ನು ಪಡೆದುಕೊಂಡಿತು. ಅಗಾಧ ಸಾಧನೆಗಾಗಿ ಇಡೀ

ಮೀನುಗಾರಿಕೆಗೂ ಅನುಕೂಲವಾಗುವಂತೆ ಜೆಟ್ಟಿ ನಿರ್ಮಾಣಕ್ಕೆ ಮನವಿ

ಕುಳಾಯಿ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಜೆಟ್ಟಿ ಕಾಮಗಾರಿಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯರವರು ಸ್ಥಳೀಯ ಶಾಸಕರೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಕುಳಾಯಿ:- ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ. ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ

ಮಂಗಳೂರು:ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಲೂಪಸ್ (ಎಸ್‌ಎಲ್‌ಇ) ಶಿಬಿರ

ಕೆಎಂಸಿ ಆಸ್ಪತೆ ಅತ್ತಾವರದ ಸಂಧಿವಾತ ವಿಭಾಗವು ಲೂಪಸ್ (ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್) ಶಿಬಿರವನ್ನು 20214 ರ ಡಿಸೆಂಬರ್ 2 ರಿಂದ 14 ರವರೆಗೆ ಆಯೋಜಿಸಿದೆ. ಈ ಶಿಬಿರವು ಜನರಲ್ಲಿ ಲೂಪಸ್ ರೋಗದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಅಟೋ ಇಮ್ಯುನ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮಾಹಿತಿ ಮತ್ತು ಸಮಗ್ರ ಆರೈಕೆಯನ್ನು ಒದಗಿಸುವ ಸಲುವಾಗಿ ಆಸ್ಪತೆ ಯು ಹಮ್ಮಿಕೊಂಡ ಕಾರ್ಯಕ್ರಮವಾಗಿದೆ. ಲೂಪಸ್ ಕಾಯಿಲೆ ಎಂದರೆ, ದೇಹದ ಪ್ರತಿರಕ ಣಾ ವ್ಯವಸ್ಥೆಯನ್ನೇ

ಸುಳ್ಯ: ಮಂಡೆಕೋಲಿನಲ್ಲಿ ಅರೆಭಾಷೆ ಗಡಿನಾಡ ಉತ್ಸವದ ಸಂಭ್ರಮ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು. ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿ ಸಮಾರಂಭಕ್ಕೆ

ಮಂಗಳೂರು: ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಯೋಜನೆ: ಆಮೆ ಗತಿಯಲ್ಲಿ ಕಾಮಗಾರಿ: ಮೇಯರ್ ಭೇಟಿ, ಪರಿಶೀಲನೆ

ನಗರದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬಹು ನಿರೀಕ್ಷೆಯ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಯೋಜನೆ ಆರಂಭಿಕ ಹಂತದಲ್ಲಿಯೇ ನೆನೆಗುದಿಗೆ ಬಿದ್ದಿದ್ದು, ನೂತನ ಮೇಯರ್ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿಕೊಂಡ ಮೇಯರ್ ಅವರು ಯೋಜನೆ ಬಗ್ಗೆ ಸ್ಮಾರ್ಟ್‌ಸಿಟಿ ಅಧಿಕಾರಿ ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡರು. ಸ್ಥಳೀಯರಿಗೆ ಸಮಸ್ಯೆ ಆಗದಂತೆ