Home Posts tagged #mangalore (Page 128)

ದಿಲ್ಲಿ ವಿಧಾನಸಭೆಗೆ ಎಎಪಿ ಏಕಾಂಗಿ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 16.5 ಏರಿಕೆ

ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹16.5 ಹೆಚ್ಚಳ ಮಾಡಿವೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದರ ಪರಿಷ್ಕರಣೆ ಬಳಿಕ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹1,818.50 ಆಗಿದ್ದು, 5 ಕೆ.ಜಿಯ ಸಿಲಿಂಡರ್ ದರದಲ್ಲೂ ₹4 ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಕಳೆದ ತಿಂಗಳು ಕೂಡ 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್

ಮಂಗಳೂರು: ಶ್ರೀ ರಾಮಕೃಷ್ಣ ಸ್ಕೂಲ್‌ನ 43ನೇ ಶಾಲಾ ವಾರ್ಷಿಕೋತ್ಸವ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಸೂಲ್ಕ್ 43ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರನ್ನ ಮನರಂಜಿಸಿತು. ಉತ್ತಮ ಶಿಕ್ಷಣಕ್ಕೆ ಹೆಸ್ರು ಪಡೆದುಕೊಂಡಿರುವ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಸೂಲ್ಕ್ ನ ವಾರ್ಷಿಕೋತ್ಸವವುಗೀತಾ ಎಸ್ ಎಂ ಶೆಟ್ಟಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಹಾಗೂ ಪಾಲಿಶಕ್ತಿ

ಉಡುಪಿ: ಪತ್ನಿ ಸಾವಿಗೀಡಾದ ಮರುದಿನವೇ ಪತಿ ನಿಧನ

ಪತ್ನಿ ಸಾವಿಗೀಡಾದ ಮರುದಿನವೇ ಪತಿ ಕೂಡ ನಿಧನರಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಕ್ರಿಯವಾಗಿದ್ದ ದಂಪತಿಗಳು ಈ ಮೂಲಕ ಒಂದೇ ಸಮಯದಲ್ಲಿ ಕೊನೆಯಸಿರೆಳೆದಿದ್ದಾರೆ. ಉದ್ಯಾವರದ ಚರ್ಚ್ ಪಾಲನಾ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಲಾರೆನ್ಸ್ ಡೇಸಾ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರ ಪತ್ನಿ ಶಿಕ್ಷಕಿ ಜೂಲಿಯಾನ ಹೆಲೆನ್ ರೆಬೆಲ್ಲೋ ಒಂದು ದಿನದ ಮುಂಚೆ ಸಾವನ್ನಪ್ಪಿದ್ದರು. ಈ ಆಘಾತದಿಂದ ಅನಾರೋಗ್ಯ

ಪುತ್ತೂರು : ಬಿಜೆಪಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ ಆಯ್ಕೆ

ಪುತ್ತೂರು ಭಾರತೀಯ ಜನತಾ ಪಾರ್ಟಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿಯವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ಮೋರ್ಚಾದ ಸದಸ್ಯೆ ಯಶೋಧ ಗೌಡ ಪ್ರಭಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಬೂತ್ ಸದಸ್ಯರಾಗಿ ಪ್ರವೀಣ್ ಕಲ್ಕಾರ್, ರೂಪ

ಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ

ಬೈಂದೂರು : ಅಕ್ರಮ-ಸಕ್ರಮ ಅರ್ಜಿ ಅಧಿಕಾರಿಗಳ ಹಂತದಲ್ಲಿ ತಿರಸ್ಕಾರ ಮಾಡಕೂಡದು – ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು : ಅಕ್ರಮ- ಸಕ್ರಮ ( ಬಗರ್ ಹುಕುಂ ) ಸಮಿತಿಯ ಅವಗಾಹನೆಗೆ ತರದೇ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಅರ್ಜಿ ತಿರಸ್ಕರಿಸುವುದು ಅಥವಾ ವಿಲೇವಾರಿ ಮಾಡುವಂತಿಲ್ಲ. ಸಮಿತಿಯ ಮುಂದೆ ತಂದು ಅಕ್ರಮ-ಸಕ್ರಮಕ್ಕೆ ಸಮಿತಿಯ ಸೂಚನೆಯಂತೆ ನಿರ್ಧರಿಸಬೇಕು.‌ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಲ್ಲಿ ಬಹುದೊಡ್ಡ ಹೋರಾಟ ರೂಪಿಸಬೇಕಾಗುತ್ತದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಎಚ್ಚರಿಕೆ ನೀಡಿದ್ದಾರೆ.ಕಾಡಿನಂಚಿನ ಗ್ರಾಮಗಳಲ್ಲಿ ಕಳೆದ ಅನೇಕ ವರ್ಷದಿಂದ

ಮೂಡುಬಿದಿರೆ: ಕಂಬಳದಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮ – ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. ‘ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ

ಮಂಗಳಾ ಈಜು ಕ್ಲಬ್ ನ ಪೂರ್ವಿ ಎಂ. ಇವರಿಗೆ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕಂಚಿನ ಪದಕ

ಗುಜರಾತ್ ನ ರಾಜ್ ಕೋಟ್ ನಲ್ಲಿ ನಡೆಯುತ್ತಿರುವ 68ನೇ ಎಸ್ ಜಿಎಫ್ಐ (ಸ್ಕೂಲ್ ಗೇಮ್ಸ್) ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡನೇ ದಿನದ ಸ್ಪರ್ಧೆಯಲ್ಲಿ ಅಂಡರ್ 17 ಬಾಲಕಿಯರ ವಿಭಾಗದ 4 x 100 ಫ್ರಿಸ್ಟೈಲ್ ರಿಲೇ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ ನ ಸದಸ್ಯೆ ಕು| ಪೂರ್ವಿ ಎಂ. ಇವರು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಇವರು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ, ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯಾಗಿರುತ್ತಾರೆ. ಇವರು