Home Posts tagged #mangalore (Page 22)

ರಿಕ್ಷಾ ಕಳ್ಳತನ, ಆರೋಪಿ ಬಂಧನ

ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ.ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಘಟನೆ

​ಟಿ. ಎನ್. ಸೀತಾರಾಂ ಅವರಿಗೆ “ಪಂಚಮಿ ಪುರಸ್ಕಾರ_2026”

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ .​ ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವದನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ

ಮಂಗಳೂರು:ಜ.9ರಿಂದ 11ರ ವರೆಗೆ ಕಲಾಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ

ಶರಧಿಪ್ರತಿಷ್ಠಾನ ಮಂಗಳೂರು ವತಿಯಿಂದ ಅಸ್ತ್ರ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಕಲಾಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ-2026 ಜನವರಿ 9 ರಿಂದ 11ರ ವರೆಗೆ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಚಿತ್ರಕಲಾ ಚಾವಡಿ, ತೋಟಗಾರಿಕಾ ಇಲಾಖೆ, ಮಹಾಲಸಾ ಕಾಲೇಜ್ ಆಫ್ ವಿಷುಯಲ್ ಆರ್ಟ್, ಸೌತ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ಮಂಗಳೂರು ಸಹಕಾರದಲ್ಲಿ ಕಲಾ ಪರ್ಬ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ

ಕಾರವಾರ: ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ

ಕಾರವಾರ: ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಬರಮಾಡಿಕೊಂಡರು.ಬಳಿಕ

ಮಂಗಳೂರಿನಲ್ಲಿ ಜ.31 ಮತ್ತು ಫೆ.1ರಂದು ಆಯುಷ್ ಹಬ್ಬ-2026

ಆಯುಷ್ ಹಬ್ಬ ಸಮಿತಿ 2026, ವತಿಯಿಂದ ಆಯುಷ್ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತು ಎಲ್ಲಾ ಆಯುಷ್ ಆಸ್ಪತ್ರೆಗಳು, ಕಾಲೇಜುಗಳು ಹಾಗೂ ವೃತ್ತಿ ನಿರತ ಆಯುಷ್ ವೈದ್ಯರುಗಳ ಜಂಟಿ ಆಶ್ರಯದಲ್ಲಿ 2026 ರ ಜನವರಿ 31 ಮತ್ತು ಫೆಬ್ರವರಿ 1 ಶನಿವಾರ ಭಾನುವಾರಗಳಂದು “ಆಯುಷ್ ಹಬ್ಬ” ಜರುಗಲಿದೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಟಿ ಎಂ ಎ ಪೈ ಸಭಾಂಗಣದಲ್ಲಿ ನಡೆಯಲಿರುವ ಈ ಮಹಾ ಮೇಳದಲ್ಲಿ ಸಾರ್ವಜಕರಿಗೆ ಉಪಯುಕ್ತವಾದ, ಸ್ವಾಸ್ಥ್ಯ ಸಂರಕ್ಷಣೆಗೆ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ

ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯಾಟವು ಸುಳ್ಯದ ನೆಹರೂ ಮೆಮೋರಿಯಲ್ ಮೈದಾನದಲ್ಲಿ ನಡೆದಿದ್ದು ರಾಜ್ಯ ಮಟ್ಟದಿಂದ ಹತ್ತಾರು ತಂಡಗಳು ಭಾಗವಹಿಸಿದ್ದವು.

ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್. ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಆಯ್ಕೆ

ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ ಸುಧಾಕರ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರವೀಣ್ ರಾಜ್ ಕೊಯಿಲ ಅವರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಜಯ

ಉಡುಪಿ: ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಆರಂಭಮಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪೇಜಾವರ ವಿಶ್ವಪ್ರಸನ್ನರ ಮಾರ್ಗದರ್ಶನದಲ್ಲಿ ಗೋವಿಗಾಗಿ ಮೇವು ಸಂಘಟನೆಮೂಲಕ ರಾಜ್ಯದ ಮನೆಮಾತದವರು ಯುವಮೋರ್ಚಾ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಪಾದರಸದಂತೆ ಸದಾ ಕಾಂಗ್ರೇಸ್ ಪಕ್ಷದ ವಿರುದ್ದ ಗುಡುಗುವ ಇವರನ್ನು ಹತ್ತಿಕ್ಕಲು ಅಪಪ್ರಚಾರಕ್ಕೆ ಮುಂದಾಗಿದ್ದಾರೆ. ಬಾರ್ಕೂರಿನಲ್ಲಿ ಇವರ ಮಾಲಕತ್ವದ ಸಂಕಮ್ಮ

ಮೂಡುಬಿದಿರೆ ತಾ.ಕಾಯ೯ನಿರತ ಪತ್ರಕತ೯ರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಆಯ್ಕೆ

ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೊಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ., ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬೆಳುವಾಯಿ ಸೀತಾರಾಮ ಆಚಾರ್ಯ, ಪ್ರಸನ್ನ ಹೆಗ್ಡೆ, ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಪುನೀತ್ ಆಯ್ಕೆಗೊಂಡಿದ್ದಾರೆ. ಮೂಡುಬಿದ್ರಿ

ಕಾಪು: ಮಾರಿಯಮ್ಮ ದೇವಸ್ಥಾನಕ್ಕೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ

ಕಾಪು:ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಇಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ಬಸವರಾಜ ಹೊರಟ್ಟಿ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ