Home Posts tagged #mangalore (Page 270)

ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದ ಕಾಲಡಿ ಹಾಕಿ ತುಳಿಯುತ್ತಾರೆ : ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿಕೆಗೆ ಬಾವಾ ಕಿಡಿ

`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ

ಉಳ್ಳಾಲ – ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ : ಮಾಜಿ ಸಚಿವ ಈಶ್ವರಪ್ಪ ಹೇಳಿಕೆ

ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು. ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಂದ ತೊಕ್ಕುಟ್ಟು ಜಂಕ್ಷನ್‍ವರೆಗೆ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ

ಮುಂಡ್ಕೂರು ಕಲ್ಲಿಮಾರಿನಲ್ಲಿ ಪುರಾತನ ನಾಗಕಲ್ಲು ಪತ್ತೆ

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್ ವಿನಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ. ನಾಗ ಬನದ ಸಮೀಪ ಅಗೆಯುವಾಗ ಈ ಕಲ್ಲು ಪತ್ತೆಯಾಗಿದೆ. ನಾಗಕಲ್ಲು ತುಂಡಾಗಿದ್ದು ಬಹಳ ಪುರಾತನವಾದ ಅಪರೂಪದ ಶಿಲ್ಪ ಕಲೆ ಇದರಲ್ಲಿ ಗೋಚರಿಸುತ್ತಿದೆ. ರವಿಪ್ರಸಾದ್ ಭಟ್ ಸಹಕಾರದಲ್ಲಿ ಈ ಅಪರೂಪದ ಶಿಲ್ಪರೂಪದ ನಾಗಕಲ್ಲು ಪತ್ತೆಯಾಗಿದೆ. ಸುಮಾರು 500 ವರ್ಷಗಳ ಹಿಂದಿನ ಪುರಾತನ ಶಿಲ್ಪ ಕಲೆಯ ಹಾಗೆ ಕಂಡುಬರುತ್ತಿದೆ.

ಮಸ್ಕತ್‍ನಲ್ಲಿ ಮೇ 12 ರಂದು “ಶಿವದೂತೆ ಗುಳಿಗೆ” ಪ್ರದರ್ಶನ

ಮಸ್ಕತ್: ವಿಜಯ ಕುಮಾರ್ ಕೊಡಿಯಾಲಬೈಲ್ ರವರ ನಿರ್ದೇಶನದ ವಿಭಿನ್ನ ಶೈಲಿಯ ತುಳು ಮತ್ತು ಕನ್ನಡ ನಾಟಕ ದಾಖಲೆ ಸಂಖ್ಯೆಯಲ್ಲಿ ಪ್ರೇಕ್ಷಕರು ನೋಡಿ ಆನಂದಿಸಿದ “ಶಿವದೂತೆ ಗುಳಿಗೆ” ನಾಟಕವು ಮೇ 12 ರಂದು ಮಸ್ಕತ್ ನ ರೂವಿಯ ಅಲ್ ಫಲಾಜ್ ಹೋಟೆಲ್ ನ ಗ್ರಾಂಡ್ ಹಾಲ್ ಅಡಿಟೋರಿಯಂನಲ್ಲಿ ಪ್ರದರ್ಶನಗೊಳ್ಳಲಿದೆ ವಿಶ್ವ ಪರ್ಯಾಯ ಸಂಚಾರದಲ್ಲಿರುವ ಭಾವಿ ಪರ್ಯಾಯ ಪೂಜ್ಯ ಪುತ್ತಿಗೆ ಮಠಾದೀಶರಾದ ಶ್ರೀ ಶ್ರೀ ಸುಗುನೇಂದ್ರ ತೀರ್ಥ ಸ್ವಾಮೀಜಿಯವರು ಮಸ್ಕತ್ ಗೆ ಆಗಮಿಸಿದ್ದ

ಹಿರಿಯ ನಾಗರಿಕರಿಗಾಗಿ ಉಚಿತ ಹೃದಯ ತಪಾಸಣಾ ಶಿಬಿರ

ಸೇವಾಭಾರತಿ(ರಿ),ಮಂಗಳೂರು ಇದರ ಸೇವಾ ಪ್ರಕಲ್ಪವಾದ `ಅನಂತಸೌಖ್ಯ” ಹಾಗೂ ಕೆ.ಎಂ.ಸಿ,ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮತ್ತು ಮಂಗಳೂರು ಹಿರಿಯ ನಾಗರಿಕರ ಸಂಘ ಇವರ ಸಹಯೋಗದೊಂದಿಗೆ, ಹಿರಿಯ ನಾಗರಿಕರಿಗಾಗಿ ಉಚಿತ“ಹೃದಯತಪಾಸಣಾ ಶಿಬಿರ”ವು, ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಠಾರದಲ್ಲಿ ನಡೆಯಿತು ಶಿಬಿರವನ್ನು, ಡಾ.ಪದ್ಮನಾಭಕಾಮತ್, ಪ್ರೊಫೆಸರ್ ಮತ್ತು ಮುಖ್ಯಸ್ಥರು, ಹೃದಯಚಿಕಿತ್ಸಾ ವಿಭಾಗ,

ನಿಮ್ಮ ಆಶೆಯೇ ನನ್ನ ಆಶೆ- ಕ್ಷೇತ್ರದ ಜನತೆಗೆ ಕೋಟ್ಯಾನ್‌ ಅಭಯ

ಮೂಡುಬಿದಿರೆ: ಕ್ಷೇತ್ರದ ಜನತೆಯ ಮನದಲ್ಲಿರುವ ಆಶೆಯೇ ನನ್ನ ಆಶೆಯೂ ಆಗಿದೆ. ನಿಮ್ಮ ತಲೆಯಲ್ಲಿ ಏನೆಲ್ಲ ಯೋಚನೆಗಳಿವೆಯೋ ಅವೆಲ್ಲವೂ ನನ್ನ ಯೋಚನೆಯೂ ಆಗಿದೆ. ಸರ್ವಾಂಗೀಣ ರೀತಿಯಲ್ಲಿ ಮೂಡಬಿದರೆ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದಷ್ಟೇ ನನ್ನ ಗುರಿಯಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು. ಮೂಡುಬಿದರೆ ಕನ್ನಡ ಭವನದಲ್ಲಿ ನಡೆದ ಮುಲ್ಕಿ ಮೂಡುಬಿದಿರೆ ಮಂಡಲದ ಪ್ರಣಾಳಿಕೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ

ಕಾರ್ಕಳ ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ

ಕಾರ್ಕಳ, ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯುತ್ತಿದ್ದು, ಶ್ರೀ ಮುಖ್ಯ ಪ್ರಾಣ ದೇವರ ಅಷ್ಟಬಂಧ ಸಹಿತ ಪ್ರತಿಷ್ಠೆ ,ಪ್ರತಿಷ್ಠಾ ಕಲಶಾಭಿಷೇಕ , ಪ್ರಸನ್ನ ಪೂಜೆ,108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ , ಪ್ರಸನ್ನ ಪೂಜೆ, ನ್ಯಾಸ ಪೂಜೆ,ಚಂಡಿಕಾ ಯಾಗ, ಮಾರಿಯಮ್ಮ ಮತ್ತು ಉಚ್ಚಂಗಿ ಮಾರಿಯಮ್ಮ ನ ಬಿಂಬ ಶುದ್ದಿ ಪ್ರಕ್ರಿಯೆ, ಬಿಂಬ ಶುದ್ದಿ ಹೋಮ ಗಳು ಮನ್ಯುಸುಕ್ತ ಯಾಗ, ಕಾಳಿ ಗಾಯತ್ರಿ ಮಂತ್ರ ಹೋಮ, ಮದ್ಯಾಹ್ನ ಅನ್ನ ಸಂತರ್ಪಣೆ ಶ್ರೀ ಮಾರಿಯಮ್ಮ

ಉಡುಪಿ ನಗರದೊಳಗೆ ಸಂಚರಿಸುವ ಆಟೋ ಚಾಲಕರ ಸಮಸ್ಯೆ ಬಗೆ ಹರಿಸದಿದ್ದರೆ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಉಡುಪಿ ಶಾಸಕ ರಘುಪತಿ ಭಟ್ ವಿರುದ್ದ ಅಟೋ ಚಾಲಕರು ತಿರುಗಿ ಬಿದ್ದಿದ್ದಾರೆ. ನಗರದ ಒಳಗಡೆ ಓಡಾಡುವ ಅಟೋಚಾಲಕರ ಮಧ್ಯೆ ಬಿರುಕು ಮೂಡಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳನ್ನು ಅಟೋ ಚಾಲಕರು ಮಾಡಿದ್ದಾರೆ.ಅಷ್ಟೇ ಅಲ್ಲ ನಗರದೊಳಗಡೆ ಸಂಚರಿಸುವ ಅಟೋ ಚಾಲಕರ ಸಮಸ್ಯೆಗಳನ್ನು ಬಗೆ ಹರಿಸದಿದ್ದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆಯನ್ನು ಕೂಡ ಅಟೊ ಚಾಲಕರು ನೀಡಿದ್ದಾರೆ. ನಿಯಮದಂತೆ ನಗರದಲ್ಲಿ ಸಂಚರಿಸುವ ಅಟೋಗಳು ರೋಟೆಶನ್ ಮಾದರಿಯಲ್ಲಿ

ಕುಡ್ಲ ಕಬಡ್ಡಿ-2023″ ಉದ್ಘಾಟನಾ ಸಮಾರಂಭ

ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಂಟರ ಯಾನೆ ನಾಡವರ ಮಾತ್ರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್

ಬಾಲಕಿ ಸಾವಿನ ಬೆನ್ನಲ್ಲೆ ಹೆದ್ದಾರಿ ದುರಾವಸ್ಥೆಗೆ ಮತ್ತೊಂದು ಬಲಿ

ಕಾಪುವಿನಲ್ಲಿ ಹೆದ್ದಾರಿ ದುರವಸ್ಥೆಗೆ ಬಾಲಕಿ ಬಲಿಯಾದ ಸ್ಥಳದಲ್ಲೇ ಮತ್ತೊರ್ವ ಯುವಕ ಬಲಿಯಾಗುವ ಮೂಲಕ ಹೆದ್ದಾರಿ ಪ್ರಯಾಣ ಕಠಿಣವಾಗುತ್ತಿದೆ.ಬಾಲಕಿ ಸಾವಿನ ಕಹಿ ನೆನಪು ಮಾಸುವ ಮೊದಲೇ ಅದೇ ಸ್ಥಳದಲ್ಲಿ ಆಂಬುಲೆನ್ಸ್ ಇನೋವ ಕಾರು ಬೈಕ್ ಸವಾರನಿಗೆ ಡಿಕ್ಕಿಯಾಗುವ ಮೂಲಕ ಯುವಕ ದಾರುಣಾವಾಗಿ ಮೃತಪಟ್ಟಿದ್ದಾನೆ. ಮೃತ ಯುವಕ ಉಚ್ಚಿಲ ನಿವಾಸಿ ರೀತೇಶ್ ದೇವಾಡಿಗ(25) ಈತ ವಾದ್ಯ ನುಡಿಸುವ ಕಾಯಕವನ್ನು ನಡೆಸುತ್ತಿದ್ದ ಎನ್ನಲಾಗಿದ್ದು, ಈತ ಉಡುಪಿ ಕಡೆಗೆ ಹೆದ್ದಾರಿ ಮೂಲಕ