Home Posts tagged #mangalore (Page 274)

ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ

ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನೆ

ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು

ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರ್ಕಾರ : ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ

ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ ಅವರು, ಸಮುದಾಯದ ಶೇ.90ರಷ್ಟು ಜನರು

ಉಚಿತ ವೈದ್ಯಕೀಯ ತಪಾಸಣಾ ಶಿಬಿರ:ವಿಟ್ಲದ ಒಕ್ಕೆತ್ತೂರು ಶಾಲೆಯಲ್ಲಿ ನಡೆದ ಕಾರ್ಯಕ್ರಮ

ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಒಕ್ಕೆತ್ತೂರು ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೆತ್ತೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಹಮ್ಮದ್ ಹಾರೀಶ್ ಸಿಎಚ್ ಅವರು

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು. ದಾನಿ ಕೃಷ್ಣ ಶೆಟ್ಟಿ ಶ್ರೀದ್ವಾರ ಅವರು ನಿರ್ಮಿಸಿದ ಹೆದ್ದಾರಿ ಬದಿಯ ರಾಜಗೋಪುರದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಚಿತ್ರಾಪುರ

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ ಬಂಗಾರು ಅರಸರು ಉದ್ಘಾಟಿಸಿದರು. ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ವಿಟ್ಲದಿಂದ ಕುದ್ದುಪದವು-

ಮೂಡುಬಿದರೆಯ ಆದರ್ಶ ಸಂಸ್ಥೆಯಿಂದ ಸ್ವಾವಲಂಬನಾ ದಿನಾಚರಣೆ

ಮೂಡುಬಿದಿರೆ: ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ (ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸಂಸ್ಥೆಯ ಮೂಲಕ ಪ್ರವರ್ತಿಸಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ 23ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆಯು ವಿಜಯನಗರದ ಆದರ್ಶಧಾಮದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇದರ ನಿರ್ದೇಶಕಿ ಭಾರತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಬದುಕಲು ಉತ್ತಮವಾದ ಆರೋಗ್ಯ

ಎನ್‍ಐಎ ತಂಡ ಸಂಚರಿಸುತಿದ್ದ ಪೊಲೀಸ್ ವಾಹನಕ್ಕೆ ಬೈಕ್ ಢಿಕ್ಕಿ…!

ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ

ಪಾಟ್ನಾ ಬಾಂಬ್ ಪ್ರಕರಣ : ಬಂಟ್ವಾಳದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ದಾಳಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ

ಮಂಗಳೂರು: ಪ್ರೆಸ್ ಕ್ಲಬ್ ದಿನಾಚರಣೆ : ಕಡಬ ತಾಲೂಕು ಪತ್ರಕರ್ತರ ಸಂಘಕ್ಕೆ ECG ಯಂತ್ರ ಹಸ್ತಾಂತರ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಕುಡ್ಲ ಕುದ್ರು ಪ್ಯಾರಡೈಸ್ ಐಲ್ಯಾಂಡ್ ನಲ್ಲಿ ಭಾನುವಾರದಂದು ನಡೆದ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರು ಕಡಬ ಪ್ರೆಸ್ ಕ್ಲಬ್ ಗೆ ಇಸಿಜಿ ಯಂತ್ರವನ್ನು ಹಸ್ತಾಂತರ ಮಾಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಕಾರ್ಯದರ್ಶಿ ವಿಜಯ ಕುಮಾರ್ ಇಸಿಜಿ ಯಂತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಖ್ಯಾತ ಚಿತ್ರನಟ, ಬಿಗ್ ಬಾಸ್ ವಿನ್ನರ್ ರೂಪೇಶ್