Home Posts tagged #mangalore (Page 290)

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ

ಉಳ್ಳಾಲ ; ಕುಮ್ಕಿ ಜಮೀನಿನಿಂದ ಮರಗಳ ಕಡಿದುಅಕ್ರಮ ಸಾಗಾಟ

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿಗೆ ಒಳಪಟ್ಟ ಕುಮ್ಕಿ ಜಮೀನಿನಲ್ಲಿ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ದ.ಕ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ದೂರು ನೀಡಲಾಗಿದೆ. ಬಗಂಬಿಲದ ಸರ್ವೇ ನಂ. 301/3 ರಲ್ಲಿರುವ ಕುಮ್ಕಿ ಜಮೀನಿಗೆ ಹಕ್ಕುದಾರರಾಗಿರುವ ವ್ಯಕ್ತಿ ಸೇರಿದಂತೆ ಮೂವರು ದೂರು ಸಲ್ಲಿಸಿದ್ದಾರೆ. ಸ್ಥಳೀಯಾಡಳಿತ ಕುಮ್ಕಿ ಜಮೀನನ್ನು ಉಳ್ಳಾಲ ಪುರಸಭೆಗೆ ನೀಡುವ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಆಕ್ಷೇಪಣೆಯನ್ನು ವಕೀಲರ ಮೂಲಕ

ಪತ್ರಕರ್ತ ನವೀನ್ ಸೂರಿಂಜೆ ಕೃತಿ ‘ಕುತ್ಲೂರು ಕಥನ’ ಬಿಡುಗಡೆ

ಮಂಗಳೂರು: ಪತ್ರಕರ್ತ ನವೀನ್ ಸೂರಿಂಜೆ ಬರೆದ ಕೃತಿ ಕುತ್ಲೂರು ಕಥನವನ್ನು ಖ್ಯಾತ ಚಿಂತಕ ಹರ್ಷ ಮಂದರ್ ಬಿಡುಗಡೆಗೊಳಿಸಿದರು. ಬಿಜ್ಜೋಡಿಯ ಶಾಂತಿ ಕಿರಣ ಸಭಾಂಗಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕೃತಿಯ ಅನವಾರಣಗೊಳಿಸಿದ ಹರ್ಷ ಮಂದರ್ ಅವರು ಈ ಕೃತಿಯನ್ನು ಭಾಷಾ ಸಮಸ್ಯೆ ಕಾರಣದಿಂದಾಗಿ ಓದಲು ಸಾಧ್ಯವಾಗದೆ ಇರುವುದಕ್ಕೆ ಬೇಸರ ಇದೆ. ಆದರೆ ಇದರಲ್ಲಿರುವ ವಿಷಯಗಳನ್ನು ಅರಿತುಕೊಂಡಿದ್ದೇನೆ. ಈ ಕೃತಿ  ಸಂವಿಧಾನ ರಕ್ಷಣೆಗೆ ಸಹಾಯಕವಾಗಿದೆ ಎಂದು ಹೇಳಿದರು. ಒಂದು ಊರಿನ

ಉರ್ವಶೆ 2023- ಕೆಎಂಸಿ, ಮಣಿಪಾಲದಲ್ಲಿ ರಾಷ್ಟ್ರೀಯ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಚಾರ ಸಂಕಿರಣ

ಮಣಿಪಾಲ, 27ನೇ ಜನವರಿ 2023:ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಉಪವಿಭಾಗವಾಗಿರುವ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಭಾಗವು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 2023 ರ ಜನವರಿ 21 – 22 ರಂದು ಮೊದಲ ರಾಷ್ಟ್ರೀಯ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಚಾರ ಸಂಕಿರಣ (ಉರ್ವಶೆ 2023 )ವನ್ನು ಆಯೋಜಿಸಿತ್ತು. ತಂಡವು ಆಯೋಜಿಸಿದ ದೇಶದ ವಿವಿಧ ಭಾಗಗಳಿಂದ ಸ್ತ್ರೀ ಶ್ರೋಣಿಯ (ಸ್ತ್ರೀ ಪೆಲ್ವಿಕ್) ಮೆಡಿಸಿನ್ ಮತ್ತು ಪುನರ್ನಿರ್ಮಾಣ

ಲಾರಿಯಿಂದ ಮೀನಿನ ತ್ಯಾಜ್ಯ ನೀರು ; ಸರಣಿ ಅಪಘಾತ, ಟ್ಯಾಂಕರ್ ತಡೆದು ಪ್ರತಿಭಟಿಸಿದ ಸ್ಥಳೀಯರು

ಉಳ್ಳಾಲ: ಫಿಸ್ ಮಿಲ್ ತ್ಯಾಜ್ಯಯುಕ್ತ ನೀರು ಟ್ಯಾಂಕರಿನಿAದ ರಸ್ತೆಯುದ್ದಕ್ಕೂ ಹರಿದು, ಸ್ಥಳೀಯರು ಟ್ಯಾಂಕರ್ ಳಾರಿಯನ್ನು ತಡೆದು ಪ್ರತಿಭಟಿಸಿದ ಘಟನೆ ಉಳ್ಳಾಲದಲ್ಲಿ ಇಂದು ನಡೆದಿದೆ. ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಒಂದು ಇಂದು ಬೆಳಿಗ್ಗೆ ಉಳ್ಳಾಲ ಕೋಟೆಪುರದ ಫ್ಯಾಕ್ಟರಿ ಕಡೆ ಸಾಗುತ್ತಿದ್ದ ವೇಳೆ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಣದವರೆಗೆ ರಸ್ತೆಯುದ್ದಕ್ಕೂ ದುರ್ನಾತ ಬೀರುವ ರಾಸಾಯನಿಕ ಮಿಶ್ರಿತ ತ್ಯಾಜ್ಯವನ್ನ ಚೆಲ್ಲುತ್ತಾ ಸಾಗಿದೆ.ಪರಿಣಾಮ

ವಿಧಾನ ಪರಿಷತ್ ಸದಸ್ಯರ ನೇತ್ರತ್ವದಲ್ಲಿ ವರಹಮೂರ್ತಿಗೆ ನೇಮ

ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ರವರ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಮನೆಯಲ್ಲಿ ವರಹಮೂರ್ತಿ ಹಾಗೂ ವಾರ್ತಾಳಿ ದೈವಗಳ ಹರಕೆಯ ನೇಮೋತ್ಸವ ಬಹಳ ಅದ್ಧೂರಿಯಾಗಿ ಜರಗಿತು. ಕಾಪು ತಾಲೂಕಿನ ಪಡುಬಿದ್ರಿ ಯುಪಿಸಿಎಲ್ ಕಾಲೋನಿ ಪ್ರದೇಶದ ಲಕ್ಷ್ಮೀ ವೆಂಕಟೇಶ ನಿಲಯದಲ್ಲಿ ಕುಟುಂಬದ ಹಿರಿಯರು ಆರಾಧಿಸಿಕೊಂಡು ಬಂದಿರುವ ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೇಮೋತ್ಸವ ವಿಧ್ಯುಕ್ತವಾಗಿ ನೆರವೇರಿದೆ. ಸಂಜೆ ಹೊತ್ತಿಗೆ ಹಿರಿಯರ ಮಾರ್ಗದರ್ಶನದಂತೆ ಭಂಡಾರ ಹೊರಟು

ಜೂಲಿಯಟ್-2 ಸಿನಿಮಾ ತುಳುನಾಡಿನ ಹೊಸ ಭರವಸೆ

ಕನ್ನಡದಲ್ಲಿ ಕರಾವಳಿ ಕಂಟೆಂಟ್ ಇರುವ ಚಿತ್ರಗಳು ಹೆಚ್ಚು ಜನಪ್ರೀಯತೆ ಪಡೆಯುತ್ತಿವೆ. ಈ ಮೂಲಕ ಸಿನಿಪ್ರಿಯರ ಅಭಿರುಚಿ ಕೂಡ ಬದಲಾಗುತ್ತಿದೆ. ಇದೀಗ ತುಳುನಾಡಿನ ಹೊಸ ಭರವಸೆಯೊಂದಿಗೆ ಜೂಲಿಯಟ್-2 ಕನ್ನಡ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಹೊಸ ರೀತಿಯ ಕಥೆಯೊಂದಿಗೆ ಮನರಂಜಿಸುತ್ತಿರುವ ಕರಾವಳಿ ಕಡೆಯ ಕಥೆಗಳಲ್ಲಿ ಜೂಲಿಯಟ್-2 ಟೀಸರ್ ಹೆಚ್ಚು ಗಮನಸೆಳೆಯುತ್ತಿದೆ. ಜೂಲಿಯಟ್-2 ಸಿನಿಮಾ ಹೆಸರೇ ಹೇಳುವಂತೆ ಮಹಿಳಾ ಪ್ರಧಾನ ಚಿತ್ರ ಆಗಿದೆ. ಇಲ್ಲಿ ಹೆಚ್ಚು ಮಕ್ಕಳು ಎಷ್ಟು

ಬಂಟ್ವಾಳಕ್ಕೆ ಭೇಟಿ ನೀಡಿದ 13 ದೇಶಗಳ ರೋಟರಿ ಸದಸ್ಯರು

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್‍ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ

ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ , ಫೆ.4, 5ರಂದು ಯುಎಇ ದುಬೈ, ಅಬುಧಾಬಿಯಲ್ಲಿ ಪ್ರೀಮಿಯರ್ ಪ್ರದರ್ಶನ

ಎನ್‍ಎನ್‍ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ ಫೆಬ್ರವರಿ 4, 5ರಂದು ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫ್ರೀಮಿಯರ್ ಪ್ರದರ್ಶನ ಹಾಗೂ ಫೆಬ್ರುವರಿ 10 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ಇದರ ಅಂಗವಾಗಿ ಜನವರಿ 22ರಂದು ದುಬೈಯ ಪೋರ್ಚೂನ್ ಏಟ್ರಿಯಂ ಹೋಟೆಲ್ ನಲ್ಲಿ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ರಾಜೇಶ್

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ ಬಟ್ಟೆ ಕಳವು

ಪುತ್ತೂರಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಟ್ಟೆ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಬಟ್ಟೆ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.