ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್ ವಿ ಪದವಿಪೂರ್ವ ಕಾಲೇಜು, ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ಪಿಯು ಕಾಲೇಜು ಒಟ್ಟು 7 ಚಿನ್ನ, 3 ಬೆಳ್ಳಿ ಮತ್ತು 01 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕಗಳನ್ನು
ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಎಂದು ಗುರುತಿಸಲಾಗಿದೆ. ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವ್ರ ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ
ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ವರ್ಟೆಕ್ಸ್ ಸಹಯೋಗದಲ್ಲಿ ನೀವಿಯಸ್ ಮಂಗಳೂರು ಮ್ಯಾರಥಾನ್-2025 ನಾಲ್ಕನೇ ಆವೃತ್ತಿಯ ಮ್ಯಾರಥಾನ್ ಮಂಗಳೂರಿನಲ್ಲಿ ನಡೆಯಿತು. ಇದು ಅತೀ ದೊಡ್ಡ ಮ್ಯಾರಥಾನ್ ಆಗಿದ್ದು, ಅಂತರರಾಷ್ಟ್ರೀಯ ಮಟ್ಟದ ಮ್ಯಾರಥಾನ್ಗಳು ಭಾಗವಹಿಸಿದ್ದರು. ವಿವಿಧ ವಿಭಾಗದಲ್ಲಾಗಿ ಸುಮಾರು 6 ಸಾವಿರಕ್ಕೂ ಹೆಚ್ಚು ಮಂದಿ ಈ ಮ್ಯಾರಥಾನ್ ಪಾಲ್ಗೊಂಡಿದ್ದರು. ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ವರ್ಟೆಕ್ಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೀವಿಯಸ್
ಮಂಗಳೂರು: ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ ಸರಕಾರದ ನಡೆ ಶ್ಲಾಘನೀಯವಾದದ್ದು ಎಂದು ಜಾನಪದ ವಿದ್ವಾಂಸ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರು ತಾಲೂಕು
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಸಾಹಿತ್ಯ ಸಂಭ್ರಮ -2025 ಇದರ ಸಮಾರೋಪ ಸಮಾರಂಭ- ಸನ್ಮಾನ , ಗಾನ ವೈಭವ ಕಾರ್ಯಕ್ರಮ ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗ್ಗಲಡ್ಕ ಇದರ ಸಹಯೋಗದೊಂದಿಗೆ ದುಗ್ಗಲಡ್ಕದ ಅಯ್ಯಪ್ಪ ಭಜನಾ ಭಜನಾ ಮಂದಿರದ ಸಭಾಭವನದಲ್ಲಿ ನ.7 ರಂದು ಸಂಜೆ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ಸುಳ್ಯ
ಆಲೂರು:ಪಟ್ಟಣದ ಮುಖ್ಯರಸ್ತೆಯಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ಮಾಡಿ ನಂತರ ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕುವಕಚೇರಿ ಆವರಣದಲ್ಲಿ ಆಯೋಜಿಸಿದ್ದು,ಕಾರ್ಯಕ್ರಮವನ್ನು ಆಲೂರು ಸಕಲೇಶಪುರ ಕಟ್ಟಾಯ ವಿಧಾನಸಭಾ ಶಾಸಕರಾದ ಸಿಮೆಂಟ್ ಮಂಜು ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕನಕದಾಸರ ಜನ್ಮ ದಿನವನ್ನು ‘ಕನಕದಾಸ ಜಯಂತಿ’ಎಂದು ಆಚರಿಸಲಾಗುತ್ತದೆ. ಕತ್ತಿ ಗುರಾಣಿ ಹಿಡಿದು ರಣರಂಗದಲ್ಲಿ
ಸಕಲೇಶಪುರ- ನಗರ ಪೊಲೀಸ್ ಠಾಣೆ ವ್ಯಾಪ್ತಿಯ APMC ಬಳಿ ಅಸ್ಸಾಂ ಮೂಲದ ಕಾರ್ಮಿಕರಾದ ಅಮ್ಜದ್ ಅಲಿ ಮತ್ತು ಇದ್ರೀಸ್ ಅಲಿ ಎಂಬ ಇಬ್ಬರನ್ನು ಪೊಲೀಸರು ದಸ್ತಗಿರಿಮಾಡಿದ್ದಾರೆ. ಇವರು ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿಯ ಬೆಟ್ಟದಮನೆಯ ಎಸ್ಟೇಟ್ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಸುಮಾರು 500 ಗ್ರಾಂ (ಅರ್ಧ ಕಿಲೋ) ಗಾಂಜಾ ಸೊಪ್ಪನ್ನು ಮಾರಾಟಮಾಡುತ್ತಿದ್ದ ವೇಳೆ ಹಿಡಿಯಲ್ಪಟ್ಟಿದ್ದಾರೆ. ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನಂತರ ಅವರನ್ನು
ಮೂಡುಬಿದಿರೆ: ಮಕ್ಕಳಲ್ಲಿ ಯಕ್ಷಗಾನದ ಒಲವನ್ನು ತುಂಬಿದಾಗ ತುಳುನಾಡಿನಲ್ಲಿ ಯಕ್ಷಗಾನ ಕಲೆ ಇನ್ನಷ್ಟು ಶ್ರೀಮಂತ ಕಲೆಯಾಗಿ ಬೆಳೆಯಲು ಸಾಧ್ಯ ಎಂದು ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಶ್ರೀ ಯಕ್ಷನಿಧಿ ಮೂಡುಬಿದಿರೆ ಇದರ ದಶಮಾನೋತ್ಸವದ ಅಂಗವಾಗಿ ಸಮಾಜ ಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಭಾ ಕಾಯ೯ಕ್ರಮದಲ್ಲಿ ಆಶೀರ್ವಚನ ನೀಡಿದರು. ಜೈನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಕುಮಾರ್ ಬಲ್ನಾಡ್ ಮುಖ್ಯ ಅತಿಥಿಯಾಗಿ
ಬೈಂದೂರು:ಸರಕಾರದ ಅನುದಾನವನ್ನು ಕಾಯದೇ ಸರಕಾರೇತರ ಸಂಸ್ಥೆಗಳ ಸಹಯೋಗ ಪಡೆದು ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ನಿರಂತರ ಒದಗಿಸಿದ್ದಲ್ಲಿ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ ಬೈಂದೂರು ಕ್ಷೇತ್ರದ ಆಯ್ದ ಶಾಲೆಗಳಿಗೆ ಸಮೃದ್ಧ ಬೈಂದೂರು ಪರಿಕಲ್ಪನೆಯ “300 ಟ್ರೀಸ್” ಯೋಜನೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಯೂಥ್ ಫಾರ್ ಸೇವಾ ಬೆಂಗಳೂರು ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ
ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಇಲಾಖಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ



























