Home Posts tagged #mangalore (Page 310)

ಕರಾವಳಿಯ ಕುವರ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಕಿರೀಟ

ಕರಾವಳಿಯ ಕುವರ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಬಿಗ ಬಾಸ್ ಸೀಸನ್ 9 ರ ವಿಜೇತರಾಗಿ ಹೊರಹೊಮ್ಮಿದ್ದಾರೆ. ತುಳು ಚಿತ್ರಗಳ ಮೂಲಕ ಹಾಗೂ ಹಲವಾರು ಸಮಾಜ ಸೇವೆಗಳ ಮುಖಾಂತರ ಕರಾವಳಿಯ ಜನರ ಮನಸನ್ನು ಗೆದ್ದಿರುವ ರೂಪೇಶದ ಶೇಟ್ಟಿ, ಬಿಗ್ ಬಾಸ್ ಶೋ ನಲ್ಲಿ ವಿಜೇತರಾಗಿರುವುದು ಹೆಮ್ಮೆಯ ಸಂಗತಿ.ಸೆ.24ರಂದು ಶುರುವಾದ ಬಿಗ್ ಬಾಸ್ ಶೋ 100 ದಿನಗಳ ಕಾಲ ನಡೆದು, ಡಿ.31ಕ್ಕೆ

ಪಣಂಬೂರು ಬೀಚ್‍ನ ಹೊಟೇಲ್‍ಗಳಿಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್

ಮಂಗಳೂರು: ಪಣಂಬೂರು ಬೀಚ್‍ನ ಹೊಟೇಲ್‍ಗಳಿಗೆ ಏಕಾ ಏಕಿ ದಾಳಿ ನಡೆಸಿರುವ ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಹೊಸ ವರ್ಷದಂದೇ ಹೊಸ ಸಂಚಲನ ಮೂಡಿಸಿದ್ದಾರೆ. ಬೀಚ್ ಬಳಿಯಲ್ಲಿರುವ ಹಲವು ಹೊಟೇಲ್, ಫಾಸ್ಟ್ ಫುಡ್ ಅಗಡಿಗೆ ತೆರಳಿ ಅಲ್ಲಿನ ಕಿಚನ್ ಪರಿಶೀಲಿಸಿದಾಗ ಶುಚಿತ್ವವೇ ಇಲ್ಲದ ವ್ಯವಸ್ಥೆ ಕಂಡು ಬಂದಿತ್ತು. ಅಲ್ಲದೇ ಶುಚಿತ್ವ ಇಲ್ಲದ ಕಿಚನ್, ಹಲವು ಬಾರಿ ಬಳಸಿದ ಎಣ್ಣೆ, ಇಲಿ ಕಚ್ಚಿದ ತರಕಾರಿಗಳು ಅಲ್ಲಿ ಕಂಡು ಬಂದವು. ಅಲ್ಲದೇ ಅಂಗಡಿ ಮಾಲಕರ ಬಳಿ

ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ

ಬಂಟ್ವಾಳ: ತುಂಬೆ ಗ್ರಾ.ಪಂ ಬಂಟ್ವಾಳ ಇದರ ಆಶ್ರಯದಲ್ಲಿ ಪ್ರಕೃತಿ ಸಂಜೀವಿನಿ ಒಕ್ಕೂಟ ತುಂಬೆ ಇದರ ಸಹಕಾರದೊಂದಿಗೆ ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣಲ್ಲಿ ನಡೆಯಿತು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಪ್ರಾಸ್ತವಿಕವಾಗಿ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಪರಿಸರ ಹಾಳಾಗಿದೆ. ಬಳಸಿದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಪ್ಲಾಸ್ಟಿಕ್ ಚೀಲ ನಮ್ಮ

ಕೋವಿಡ್ ಮಹಾಮಾರಿ ನಾಶಕ್ಕಾಗಿ ಶಬರಿಮಲೆ ಪಾದಯಾತ್ರೆ ಕೈಗೊಂಡ ಪಡುಬಿದ್ರಿ ಈಚು ಸ್ವಾಮಿ

ಕೊರೊನಾ ವೈರಸ್ ಎಂಬ ಭಯಾನಕ ವಿಷರೋಗವು ಭಾರತ ದೇಶದಿಂದ ನಾಶವಾಗಿ ಹೋಗಲೆಂದು ಶಬರಿಮಲೆ ಕ್ಷೇತ್ರಕ್ಕೆ ತುಪ್ಪದ ಅಭಿಷೇಕವನ್ನು ಪಾದಯಾತ್ರೆಯ ಮೂಲಕ ಹರಕೆ ಹೊತ್ತು ಪಡುಬಿದ್ರಿ ಭಗವತಿ ಗ್ರೂಫ್ ಸದಸ್ಯ ವಿಶ್ವ ಕಲ್ಲಟ್ಟೆ (ಈಚು ಸ್ವಾಮಿ). ಎರಡು ವರ್ಷಗಳ ಹಿಂದೆ ಈ ಹರಕೆ ಹೇಳಿದ್ದರು. ಆದರೆ ಶಬರಿಮಲೆಗೆ ಪಾದಯಾತ್ರೆ ನಿಷಿದ್ಧವಿದ್ದರಿಂದ ಈ ಸೇವೆ ಮಾಡಲು ವಿಳಂಬವಾಯಿತು. ಹಲವು ವರ್ಷಗಳಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯಾಗಿ ಕ್ಷೇತ್ರ ದರ್ಶನ ಮಾಡಿರುವ ಇವರು ಕಳೆದ

ಜ. 2 : ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಪುಷ್ಪಯಾಗ

ಮಂಗಳೂರು: “ವೈಕುಂಠ ಏಕಾದಶಿಯ ಪ್ರಯುಕ್ತ ಜನವರಿ 2ರಂದು ಸೋಮವಾರ ಡೊಂಗರಕೇರಿ ವೆಂಕಟರಮಣ ದೇವರ ಸಾನಿಧ್ಯದಲ್ಲಿ ಚೈತನ್ಯಾಭಿವೃದ್ಧಿ ಹಾಗೂ ಲೋಕಕಲ್ಯಾಣ ಪ್ರಾಪ್ತಿಯ ಸಂಕಲ್ಪದೊಂದಿಗೆ ನಾಮತಯ ಮಹಾಮಂತ್ರ ಜಪಯಜ್ಞ ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ದೇವರ ಪ್ರೇರಣೆಯಂತೆ ಮತ್ತು ಗುರುಗಳ ಮಾರ್ಗದರ್ಶನದೊಂದಿಗೆ ಹಮ್ಮಿಕೊಳ್ಳಲಾಗಿದೆ” ಎಂದು ದೇವಳದ ಆಡಳಿತ ಮೊಕ್ತೇಸರ ವರದರಾಜ್ ನಾಗ್ವೇಕರ್ ಮಾಹಿತಿ ನೀಡಿದರು. ಅಂದು ಸಾಯಂಕಾಲ 4 ಘಂಟೆಗೆ ಡೊಂಗರಕೇರಿ

ಕೋವಿಡ್ ನೆಪದಲ್ಲಿ ಭಾರತ ಜೋಡೋ ಯಾತ್ರೆ ತಡೆಯುವ ಷಡ್ಯಂತ್ರ : ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪ

ಪುತ್ತೂರು: ಭಾರತವನ್ನು ಬೆಸೆಯುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿಯು ಇದೀಗ ಅದನ್ನು ತಡೆಯುವ ನಿಟ್ಟಿನಲ್ಲಿ ಕೋವಿಡ್ ನೆಪ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜೋಡೋ ಯಾತ್ರೆಯನ್ನು ನಿಲ್ಲಿಸಿ ಇಲ್ಲದಿದ್ದಲ್ಲಿ ಕೋವಿಡ್

ಗುತ್ತಿಗೆದಾರನನ್ನು ಹೊಗಳಿದ ಸುಪ್ರಿಂ ಕೋಟ್ ೯ನ ಮುಖ್ಯ ನ್ಯಾಯಾಧೀಶರು

ಮೂಡುಬಿದಿರೆಯ ವಕೀಲರ ಸಂಘದ ವತಿಯಿಂದ ರೂ 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಕೀಲರ ಭವನದ ಕಾಮಗಾರಿ ಅಚ್ಚುಕಟ್ಟಾಗಿ ಒಳ್ಳೆಯ ರೀತಿಯಲ್ಲಿ ನಡೆದಿದೆ ನಿಮಗೆ ಅಭಿನಂದನೆಗಳು ಎಂದು ಕಟ್ಟಡ ನಿರ್ಮಾಣದ ಗುತ್ತಿಗೆದಾರ, ಬಿಮಲ್ ಕನ್ಟ್ರಕ್ಷನ್ ನ ಪ್ರವೀಣ್ ಅವರನ್ನು ಸುಪ್ರಿಂ ಕೋಟ್ ೯ನ ಮುಖ್ಯ ನ್ಯಾಯಾಧೀಶ ಅಬ್ದುಲ್ ನಝೀರ್ ಅವರು ಅಭಿನಂದಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಡಿಸೆಂಬರ್ 30ರಂದು ವಕೀಲರ ಭವನವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ

ಹೊಸ ವರ್ಷಾಚರಣೆಗೆ ಸಜ್ಜಾದ ಹೋಟೆಲ್ ಓಶಿಯನ್ ಪರ್ಲ್

ಮಂಗಳೂರು ನಗರದ ಪ್ರತಿಷ್ಟಿತ ಹೋಟೆಲ್‍ಗಳಲ್ಲಿ ಒಂದಾದ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ 2023 ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ ಖಾದ್ಯಪ್ರೀಯರ ಅಚ್ಚುಮೆಚ್ಚಿನ ಹೋಟೆಲ್ ಆಗಿದ್ದು, ಈ ಬಾರಿ ಹೊಸ ವರ್ಷ 2023ನ್ನು ಬರಮಾಡಿಕೊಳ್ಳಲು ಈಗಾಗಲೇ ಸಜ್ಜಾಗಿದ್ದಾರೆ. ಮಂಗಳೂರಿನ ಜನತೆಗಾಗಿ ವಿಶೇಷ ಮನೋರಂಜನೆಯ ಕಾರ್ಯಕ್ರಮದ ಜೊತೆಗೆ

ಎರಡು ದಿನಗಳ ಕಾಲ ನಡೆಯಲಿರುವ ಮಂಗಳೂರು ಉತ್ಸವ ಎಕ್ಸ್ ವಿಷನ್ ಕಮ್ ಸೇಲ್

ಮಂಗಳೂರು ಉತ್ಸವ ಎಕ್ಸ್‍ವಿಷನ್ ಕಮ್ ಸೇಲ್ ನಗರದ ಪಾಂಡೇಶ್ವರದ ರೋಸಾರಿಯೋ ಸಾಂಸ್ಕೃತಿಕ ಸಭಾಂಗಣದಲ್ಲಿ ಎರಡು ದಿನ ಕಾಲ ಹಮ್ಮಿಕೊಳ್ಳಲಾಗಿದ್ದು, ಶನಿವಾರದಂದು ಎಕ್ಸ್ ವಿಷನ್ ಕಮ್ ಸೇಲ್‍ಗೆ ಚಾಲನೆ ಸಿಕ್ಕಿತು. ಗೃಹಪ್ರಯೋಗಿ ವಸ್ತುಗಳು, ಮಹಿಳೆಯರ ವಿವಿಧ ಡ್ರೆಸ್ ಮೆಟೀರಿಯಲ್ಸ್ ಗಳು, ಕಾರು, ತಿಂಡಿ ತಿನ್ನಸುಗಳು ಹೀಗೆ ಒಂದೇ ವೇದಿಕೆಯಲ್ಲಿ ಕಾಣ ಸಿಕ್ಕಿತ್ತು. ಎಲ್ಲಾ ಉತ್ಪನ್ನಗಳು ಒಂದೇ ವೇದಿಕೆಯಲ್ಲಿ ಸಿಗುವ ನಿಟ್ಟಿನಲ್ಲಿ ಮಂಗಳೂರು ಉತ್ಸವ

ಹೊಸ ವರ್ಷಾಚರಣೆ ಹಿನ್ನೆಲೆ, ಪೊಲೀಸರಿಂದ ರಾತ್ರಿ ವೇಳೆ ಕಟ್ಟುನಿಟ್ಟಿನ ಕಾರ್ಯಾಚರಣೆ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು ರಾತ್ರಿ ವೇಳೆ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ರಾತ್ರಿ ವೇಳೆ ಹೊಟೇಲ್, ಪಬ್, ರೆಸ್ಟೋರೆಂಟ್ ಗಳಲ್ಲಿ 12.30ರ ವರೆಗೂ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ, ಡಿಜೆ ಇನ್ನಿತರ ಧ್ವನಿ ವರ್ಧಕ ಬಳಕೆಯನ್ನು ರಾತ್ರಿ 10 ಗಂಟೆಗೆ ಕೊನೆಗೊಳಿಸಬೇಕು ಎಂದು ಕಮಿಷನರ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್