Home Posts tagged #mangalore (Page 325)

“ಹರೇಕಳ ಗ್ರಾಮ ಸೌಧ” ಉದ್ಘಾಟನೆ

ಉಳ್ಳಾಲದ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟನೆ ನಡೆಯಿತು. ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು.ಟಿ. ಖಾದರ್ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟಿಸಿದರು. ನಂತರ ಮಾತನಡಿದ ಅವರು ಗ್ರಾಮ ಪಂಚಾಯಿತಿ ಕಚೇರಿ ಎಂಬುವುದು ಗ್ರಾಮದ ಆತ್ಮ.ಹರೇಕಳ ಗ್ರಾಮ ವಿವಿಧ

ಕೊರೆಯುವ ಚಳಿಯಲ್ಲಿ ದೇಶದ ವೀರ ಯೋಧರ ನಿತ್ಯದ ಬದುಕು

ಬಂಟ್ವಾಳ: ಚಳಿಗಾಲದಲ್ಲಿ ತಣ್ಣೀರ ಸ್ನಾನ ಮಾಡಲು ನಾವು ಹಿಂದೆಟ್ಟು ಹಾಕುತ್ತೇವೆ. ಅಂತಹುದರಲ್ಲಿ ಮೈ ಕೊರೆಯುವ ಚಳಿ, ಮೈನಸ್ 18 ಡಿಗ್ರೆ ಸೆಲ್ಸಿಯಸ್ ವಾತವರಣವಿರುವ ಅರುಣಾಚಲ ಪ್ರದೇಶದ ಕೊರೆಯುವ ಚಳಿಯಲ್ಲಿ ಗಡಿ ಕಾಯುವ ನಮ್ಮ ದೇಶದ ವೀರಯೋಧರ ನಿತ್ಯದ ಬದುಕು ಹೇಗಿರಬಹುದು? ಇದಕ್ಕೊಂದು ತಾಜಾ ಉದಾಹರಣೆ ಈ ವಿಡಿಯೋವೊಂದು ಇಲ್ಲಿದೆ. ಭಾರತ ಚೀನಾ ಗಡಿಭಾಗವಾಗಿರುವ ಅರುಣಚಲಪ್ರದೇಶದ ಎತ್ತರದ ಪರ್ವತ ಭಾಗದಲ್ಲಿ ನಮ್ಮ ವೀರ ಯೋಧರು ಗಡಿಕಾಯುತ್ತಿದ್ದಾರೆ. ಕೊರೆಯುವ ಚಳಿಗೆ

ಸುರತ್ಕಲ್ ಟೋಲ್ ಗೇಟ್ ರದ್ದು: ಬಸ್ಸು ಪ್ರಯಾಣ ದರ ಇಳಿಕೆಗೆ ಹೋರಾಟ ಸಮಿತಿ ಆಗ್ರಹ

ಸುರತ್ಕಲ್ ಟೋಲ್ ಗೇಟ್ ದಾಟಿ ಮುಲ್ಕಿ, ಕಿನ್ನಿಗೋಳಿ, ಮುಕ್ಕ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಪ್ರಯಾಣಿಕರ ಟಿಕೆಟ್ ಮೇಲೆ ಹಾಕಿದ್ದ ಟೋಲ್ ತೆರಿಗೆಯನ್ನು ತಕ್ಷಣವೇ ಕೈಬಿಟ್ಟು ಪ್ರಯಾಣ ದರವನ್ನು ಇಳಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಏಳು ವರ್ಷಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಆರಂಭಗೊಂಡಾಗ ಮುಲ್ಕಿ, ಹಳೆಯಂಗಡಿ, ಕಿನ್ನಿಗೋಳಿ ಮುಂತಾದ ಮಂಗಳೂರು ಗ್ರಾಮೀಣ ಭಾಗಗಳಿಗೆ ಸಂಚರಿಸುತ್ತಿದ್ದ ಖಾಸಗಿ

ಮಂಜೇಶ್ವರದಲ್ಲಿ ಸಂಭ್ರಮದ ಬೀಚ್ ಪೆಸ್ಟ್ ಗೆ ಚಾಲನೆ

ಮಂಜೇಶ್ವರ: ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ನಲ್ಲಿ ಸಂಭ್ರಮದ ಬೀಚ್ ಫೆಸ್ಟ್ ಗೆ ಚಾಲನೆ ದೊರಕಿತು. ಇನ್ನು ಮುಂದಿನ ಒಂದು ತಿಂಗಳಿನಲ್ಲಿ ನಡೆಯಲಿರುವ ಬೀಚ್ ಫೆಸ್ಟ್ ಮಂಜೇಶ್ವರದ ಬೀಚ್‍ನಲ್ಲಿ ಉತ್ಸವದ ಸಂಭ್ರಮವಾಗಲಿದೆ. ಈ ಸಲದ ಮಂಜೇಶ್ವರ ಕಂಡು ಕೊಳಕೆ ಬೀಚ್ ಫೆಸ್ಟ್ ವಿವಿಧ ವಿನ್ಯಾಸಗಳನ್ನು ಹೊಂದಿದ್ದು, ಮಕ್ಕಳಿಗೆ ಹಾಗೂ

ಪುತ್ತೂರು : ಮತದಾರರ ಗುರುತಿನ ಚೀಟಿ ಅನಧಿಕೃತ ವಿತರಣೆ ಆರೋಪ

ಪುತ್ತೂರು: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದ ಮೇಲೆ ದಾಳಿ ಮಾಡಿದೆ. ತಹಸೀಲ್ದಾರ್ ನಿಸರ್ಗ ಪ್ರಿಯ ಮತ್ತು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ

ಕೊರೊನಾಕ್ಕೆ ರಮ್ ಮದ್ದು ಎಂದಿದ್ದ ಕೌನ್ಸಿಲರ್ ರವಿಚಂದ್ರ ಗಟ್ಟಿ ಪಕ್ಷದಿಂದ ಅಮಾನತು

ಉಳ್ಳಾಲ: `ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ದೇಶಾದ್ಯಂತ ಸುದ್ಧಿಯಾದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಆದೇಶ ಹೊರಡಿಸಿದೆ. ಮೊನ್ನೆ ನಡೆದ

ವಕೀಲರ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ  ದೌರ್ಜನ್ಯ ಆರೋಪ: ಮಂಗಳೂರು ವಕೀಲರ ಸಂಘ ಖಂಡನೆ

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ F. I.R ದಾಖಲಿಸಿ ರಾತೋರಾತ್ರಿ ವಕೀಲರ ಮನೆ

ಗುರುಪುರ ಕೈಕಂಬ ಇಳಿಜಾರು ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ!!

ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು

ಕಾರ್ಕಳ : ಕಾಮಗಾರಿ ವೇಳೆ ಪುರಾತನ ಫಿರಂಗಿ ಮದ್ದು ಗುಂಡು ಪತ್ತೆ

ಕಾರ್ಕಳ ದ ಹೃದಯ ಭಾಗದಲ್ಲಿರುವ ಕೋಟೆಕಣಿಯೆಂಬಲ್ಲಿ ಖಾಸಗಿ ಸ್ಥಳದಲ್ಲಿ ಕಾಮಗಾರಿಕೆಗೆ ಎಂದು ನೆಲ ಅಗಿಯುತ್ತಿದ್ದ ವೇಳೆ ಪುರಾತನ ಕಾಲದಲ್ಲಿ ಫಿರಂಗಿಗಳಿಗೆ ಬಳಸುತ್ತಿದ್ದ ನೂರಾರು ಕಲ್ಲಿನ ಮದ್ದು ಗುಂಡುಗಳು ಪತ್ತೆಯಾಗಿವೆ. ಈ ಸ್ಥಳದಲ್ಲಿ ಕೆಲವು ಸಮಯಗಳಿಂದ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ವೇಳೆ ಮದ್ದು ಗುಂಡುಗಳು ಶನಿವಾರ ಕಾಮಗಾರಿಗೆ ವೇಳೆ ಇವುಗಳು ಮದ್ದು ಗುಂಡುಗಳು ಕಂಡುಬಂದಿವೆ. ಪುರಾತನ ಕಾಲದಿಂದಲೂ ರಾಜರುಗಳ ಕೋಟೆಯಾಗಿತ್ತು ಮೈಸೂರಿನ ಟಿಪ್ಪು ಸುಲ್ತಾನ್

ಸಂಗೀತ ವಿದ್ವಾನ್ ಶ್ರೀ ಎಂ ನಾರಾಯಣ ಅವರಿಗೆ ಈ ವರ್ಷದ ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿ.

ಡಾ|| ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ (ರಿ) ಆಶ್ರಯದಲ್ಲಿ ಇದೇ ಡಿಸೆಂಬರ್ 6 ರಂದು ಪದ್ಮಶ್ರೀ ಡಾ|| ಕದ್ರಿ ಗೋಪಾಲನಾಥ್ ಅವರ 73 ನೇ ಜನುಮ ಜಯಂತಿಯ ಪ್ರಯುಕ್ತ ಕದ್ರಿ ಸಂಗೀತ ಸೌರಭ 2022 ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಕದ್ರಿ ಸಂಗೀತ ಸೌರಭ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಶ್ರೀ ಎಂ ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ. ಮೂಡಬಿದ್ರೆಯಲ್ಲಿ ಜನಿಸಿದ ಶ್ರೀ ಎಂ ನಾರಾಯಣ ಅವರು ಒಬ್ಬ ಅಪ್ರತಿಮ ಕಲಾವಿದರು. ಪ್ರಸ್ತುತ ಸುರತ್ಕಲ್