Home Posts tagged #mangalore (Page 343)

ಅಮೃತ ನಗರೋತ್ಥಾನ ಯೋಜನೆ : 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯ ಅಂದಾಜು ಪಟ್ಟಿ

ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ತಿಳಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯು ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಾರಾಡಿ -ರೈಲ್ವೇ

ಸುಳ್ಯ : ಅನಾಥ ಶವ ದಹನ

ಆರಂತೋಡು ಅಡ್ಡಕ್ಕ ಎಂಬಲ್ಲಿ ಮಹಿಳೆ ಯೊಬ್ಬರು ಸುಮಾರು 10 ದಿನದ ಹಿಂದೆ ಮೃತಾರಾಗಿದ್ದು ಕೊಳೆತ ಸ್ಥಿತಿ ಯಲ್ಲಿ ಪತ್ತೆ ಯಾಗಿದ್ದು ವ್ಯಕ್ತಿ ಯೊಬ್ಬರು ನೋಡಿ ವಿಪತ್ತು ನಿರ್ವಹಣ ಘಟಕ ಸದಸ್ಯರ ಗಮನಕೆ ತಂದಾಗ ತಕ್ಷಣ ಸ್ಪಂದಿಸಿ ವಿಪತ್ತು ನಿರ್ವಹಣ ಸದಸ್ಯ ಅಬ್ದುಲ್ ರಜಾಕ್ ಮತ್ತು ಸದಸ್ಯರು ಸೇರಿ ತಮ್ಮ ಆಂಬುಲೆನ್ಸ್ ನಲ್ಲಿ ಹೋಗಿ ಶವ ತೆಗಿದು ಕೊಂಡು ಸುಳ್ಯ ವಿಮುಕ್ತಿ ಧಾಮಕ್ಕೆ ತಂದು ಸದಸ್ಯರಾದ ಪ್ರಸನ್ನ ರವರ ಪಿಕಪ್ ವಾಹನದಲ್ಲಿ ಸುಮಾರು 200 ಕೆಜಿ ಚಿಪ್ಪಿ ತಂದು

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಾಕ್ರಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್, ಕೋಶಾಧಿಕಾರಿಯಾಗಿ ನಾಗೇಶ ಬಾಳೆಹಿತ್ಲು, ಜತೆಕಾರ್ಯದರ್ಶಿಯಾಗಿ ಜಯಗಣೇಶ್, ಮೀನಾಕ್ಷಿ ಪದ್ಮನಾಭ, ಸಂಘಟನಾಕಾರ್ಯದರ್ಶಿ ಸತೀಶ್ ಸಂಪಾಜೆ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ , ದಾಮೋದರ ಏರ್ಯ, ಯೋಗೀಶ್ ಬಂಗೇರ, ಮನೋಹರ ನೇರಂಬೋಳು, ದಯಾನಂದ

ದೇಶ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಮೇಜರ್ ವಿಜಯ್‍ಚಂದ್ರ

ಮಂಗಳೂರು: ದೇಶ ಸೇವೆ ಸಲ್ಲಿಸಿ ಊರಿಗೆ ಬಂದ ಯೋಧ ಮೇಜರ್ ವಿಜಯ್ ಚಂದ್ರ ಅವರಿಗೆ ಅದ್ದೂರಿ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳೂರಿನ ಪಂಪ್ವೆಲ್ ಬಳಿ ನೆರವೇರಿತು. ಕಳೆದ 12 ವರ್ಷಗಳಿಂದ ದೇಶ ಸೇವೆಯಲ್ಲಿ ನಿರತರಾಗಿದ್ದ ಯೋಧ ತನ್ನ ತಾಯಿ ನಾಡಿಗೆ ಮರಳಿದ ವೇಳೆ ಊರಿನ ಬಂಧುಗಳಿಂದ ಅದ್ದೂರಿ ಸ್ವಾಗತದ ಮೂಲಕ ಪಂಪ್ವೆಲ್ ನಿಂದ ಬಜಾಲ್ ವೀರನಗರದ ವರೆಗೆ ಮೆರವಣಿಗೆ ಸಾಗಿತು.

ಕುಂದಾಪುರ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕಿಕೊಂಡು ಬಂದು ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯು ನಾಜೂಕಿನಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ಬೋನಿನೊಳಗೆ ಹಾಕಿ ಮೇಲೆಕ್ಕೆತ್ತಿ ರಕ್ಷಿಸಲಾಗಿದೆ. ಇದೀಗ ಗುಡ್ಡಿಹೋಟಲ್, ಜಡ್ಡಾಡಿ ಕೋಣ್ಕಿ, ಬಡಾಕೆರೆ ತಾರೀಬೇರುನಲ್ಲಿ ಮುಂತಾದ ಸ್ಥಳದಲ್ಲಿ ಪದೇ ಪದೇ ಜನ ವಾಸ್ತವ ಸ್ಥಳದಲ್ಲಿ ಚಿರತೆಗಳು ಕಾಣಿಸಿಕೊಂಡು ಜನರು ಭಯ

ಕಡಬ : ರೈಲು ಇಂಜಿನ್ ಢಿಕ್ಕಿಯಾಗಿ ವ್ಯಕ್ತಿ ಗಂಭೀರ

ಕಡಬ: ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ರೈಲು ಇಂಜಿನ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ನೆಟ್ಟಣದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಗಂಭೀರ ಗಾಯಗೊಂಡ ವ್ಯಕ್ತಿ. ರೈಲು ಇಂಜಿನ್ ಢಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಂಗಳೂರಿನಲ್ಲಿ

ಕಂಬಳ ಕ್ಷೇತ್ರದ ಸಾಧಕ ಬಾಡಪೂಜರಿ ಇನ್ನಿಲ್ಲ

ಮಂಗಳೂರು ಕಂಬಳ ಕ್ಷೇತ್ರದ ಸಾಧಕ ಯಜಮಾನ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡಬಿದ್ರೆಯ ಇರುವೈಲ್ ಪಾಣಿಲ ಬಾಡಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು. ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದು, ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್, ಖ್ಯಾತಿಯ ಅಶ್ವಥುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು. ಇರುವೈಲ್ ಪಾಣಿಲ ಬಾಡವೂಜಾರಿ ಪ್ರಗತಿಪರ ಕೃಷಿಕರಾಗಿದ್ದು, 23 ವರ್ಷ ಕಂಬಳ

ಉಡುಪಿ : ಬೈಕ್‍ಗೆ ಲಾರಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೈಕ್ಕೊಂದಕ್ಕೆ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಮೃತ ವ್ಯಕ್ತಿ ಕಟಪಾಡಿ ಸರ್ಕಾರಿ ಗುಡ್ಡೆ ಮೂಡಬೆಟ್ಟು ನಿವಾಸಿ ಹೂವಿನ ವ್ಯಾಪಾರಿ ಮಹಮ್ಮದ್ ರಫೀಕ್ ಬಾವ(35), ವಿವಾಹಿತರಾಗಿದ್ದ ಇವರು ಒಂದು ಮಗುವಿನ ತಂದೆ, ಕಟಪಾಡಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಇವರು ದ್ವಿಚಕ್ರ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಉದ್ಯಾವರ ತಲುಪುತಿದ್ದಂತೆ, ಕೇರಳದಿಂದ ಮುಂಬೈಗೆ ಬಾಡಿ ಪಿಕ್ಸ್

ತೊಕ್ಕೊಟ್ಟು – ಕುಂಪಲ ಬೈಪಾಸ್ : ಸರ್ವೀಸ್ ರಸ್ತೆಗೆ ಒತ್ತಾಯ : ತೀವ್ರ ಹೋರಾಟಕ್ಕೆ ನಿರ್ಧಾರ

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ನಿಂದ ಕುಂಪಲ ಬೈಪಾಸ್ ತನಕ ಎರಡೂ ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸುವಂತೆ ಸಾರ್ವಜನಿಕ ಹೋರಾಟ ಸಮಿತಿಯು ಆಗ್ರಹಿಸಿದೆ. ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸಭೆಯು ಸೋಮವಾರ ಸಂಜೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಸಮಿತಿಯ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹೊರಾಟ ಸಮಿತಿಯ ಸಭೆಯಲ್ಲಿ ಸರ್ವ ಪಕ್ಷಗಳ ಮುಖಂಡರು

ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

ಮಂಗಳೂರು . ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2022- 2024 ರ ಅವಧಿಗೆ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅರ್ಹವಾಗಿಯೇ ಅವಿರೋಧವಾಗಿ ಮಯೂರ್ ಉಳ್ಳಾಲ್ಆಯ್ಕೆಯಾಗಿದ್ದಾರೆ. ಕುಲಾಲ ಸಮಾಜದ ಏಳಿಗೆಗೆ ಹತ್ತುಹಲವಾರು ಚಿಂತನೆ ,ಯೋಜನೆ, ಯೋಚನೆಗಳನ್ನು ಹೊಂದಿರುವ ಮಯೂರ್ ಉಳ್ಳಾಲ್ . ಸಂಘದ ಆಡಳಿತದಲ್ಲಿರುವ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಮತ್ತು ಶ್ರೀ ದೇವಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದ್ದಾರೆ