Home Posts tagged #mangalore (Page 350)

ಎಸ್.ಡಿ.ಎಂ. ಸಂಸ್ಥೆಗೆ ಸಂಪತ್ ಕುಮಾರ್ ನೈಜ ಸಂಪತ್ತು: ಡಾ. ಸತೀಶ್ಚಂದ್ರ

ವಿದ್ಯೆ, ಬುದ್ಧಿವಂತಿಕೆ ಹಾಗೂ ಹೃದಯವಂತಿಕೆ ಸಹಿತ ಉನ್ನತ ಗುಣಗಳಿರುವ ಡಾ. ಬಿ.ಪಿ. ಸಂಪತ್ ಕುಮಾರ್ ಅವರು ಎಸ್.ಡಿ.ಎಂ. ಸಂಸ್ಥೆಗೆ ನೈಜ ಸಂಪತ್ತು ಎಂದು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಅವರು ಹೇಳಿದರು.ಉಜಿರೆ ಎಸ್.ಡಿ.ಎಂ. ಕಾಲೇಜಿನ ಕುಲಸಚಿವ (ಆಡಳಿತ) ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಸಂಪತ್ ಕುಮಾರ್ ಅವರಿಗೆ

ಉಜಿರೆಯಲ್ಲಿ ಎಸ್.ಡಿ.ಎಂ. ಮಲ್ಟಿಮೀಡಿಯಾ ವೀಡಿಯೊ ಕಾನ್ಫರೆನ್ಸ್ ವ್ಯವಸ್ಥೆಗೆ ಚಾಲನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅತ್ಯಾಧುನಿಕ ಎಸ್.ಡಿ.ಎಂ. ಮಲ್ಟಿಮೀಡಿಯಾ ವಿಡಿಯೋ ಕಾನ್ಫರೆನ್ಸ್ ಕೊಠಡಿಯನ್ನು ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ. ಎಸ್. ಆರ್. ನಿರಂಜನ ಅವರು ಸೆ.28ರಂದು ಉದ್ಘಾಟಿಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ ಅವರು ವೀಡಿಯೊ ಕಾನ್ಫರೆನ್ಸ್ ಲಿಂಕ್ ಕ್ಲಿಕ್ ಮಾಡುವ ಮೂಲಕ ಈ ಸೌಲಭ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ಹೆಗ್ಗಡೆಯವರ

ಸುರತ್ಕಲ್ : ಮುಕ್ಕದಲ್ಲಿ ನಂದಿನಿ ಮೂ ಕೆಫೆ ಶುಭಾರಂಭ

ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕೆಎಂಎಫ್ ವತಿಯಿಂದ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆ ಉದ್ಘಾಟನೆಗೊಂಡಿತ್ತು. ಮುಕ್ಕದಲ್ಲಿ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆಯನ್ನು ಕರ್ನಾಟಕ ಹಾಲು ಮಹಾ ಮಂಡಳಿ ಇದರ ವ್ಯವಸ್ಥಾಪಕ ನಿದೇಶಕರಾದ ಬಿ.ಸಿ ಸತೀಶ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ರು. ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಎರಡು ಕೇಂದ್ರ ಮುಕ್ಕ ಮತ್ತು ಹೊಸಬೆಟ್ಟಿನಲ್ಲಿ

ಅತಿವೃಷ್ಟಿಯಿಂದಾಗಿ ಅಡಿಕೆ ಬೆಳೆಗೆ ಉಂಟಾದ ಹಾನಿ : ಪರಿಹಾರ ನೀಡುವಂತೆ ಒತ್ತಾಯ

ಪುತ್ತೂರು : ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ,ಹಸಿರು ಸೇನೆಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟಮೆ ನಡೆಯಿತು. ರೈತಸಂಘದ ಕಛೇರಿಯಿಂದ ಮೆರವಣಿಗೆ ಮೂಲಕ ಹೊರಟ ರೈತಸಂಘದ ಕಾರ್ಯಕರ್ತರು ಪುತ್ತೂರು ಮಿನಿ ವಿಧಾನಸೌಧದ ಮುಂದೆ ಸೇರಿ ಪ್ರತಿಭಟನೆ ನಡೆಸಿದರು. ಈ

ಅ.4: ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ ಸಭಾಂಗಣದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಮುಂಬಯಿಯ ಹಿರಿಯ ಕವಿ ಹಾಗೂ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ.ಶೆಟ್ಟಿ ಅವರು ಉದ್ಘಾಟಿಸುವರು, ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಅಧ್ಯಕ್ಷೆ

ಮೂಡುಬಿದಿರೆ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ರೇಡಿಯೋ ಸಾರಂಗ್, ಮಂಗಳೂರು ಸಹಭಾಗಿತ್ವದಲ್ಲಿ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಐತಿಹಾಸಿಕ ತಾಣ ಸಾವಿರ ಕಂಬದ ಬಸದಿ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸ್ವಚ್ಚತೆ‌ ಹಾಗೂ ಪ್ಲಾಸ್ಟಿಕ್ ನಿಷೇಧ ಮಾಹಿತಿಯನ್ನೊಳಗೊಂಡ ಕರಪತ್ರ

ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗಕರ್ಮಿ ಅಕ್ಷರ ಕೆ.ವಿ.ಆಯ್ಕೆ

ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ:-2022ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ ಎಂದು ಬಾಲವನ ಪ್ರಶಸ್ತಿ 2022ರ ಆಯ್ಕೆ ಸಮಿತಿಯ ಅಧ್ಯಕ್ಷರಾದ ಮತ್ತೂರು ವಿಧಾನಸಭಾ

ತುಳು ಭಾಷೆಗೆ ಮಾನ್ಯತೆಗಾಗಿ ಪ್ರಯತ್ನ ನಿರಂತರ: ಡಾ.ಭರತ್ ಶೆಟ್ಟಿ ವೈ

ತುಳುನಾಡಿನ ಆಡುಭಾಷೆ ತುಳುವಾಗಿದ್ದು, ಇಲ್ಲಿನ ಜನತೆ ಬೆಂಗಳೂರಿಗರಂತೆ ಅಪ್ಪಟ ಶುದ್ದ ಮಾತನಾಡುತ್ತಾರೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಯಾರೂ ವಿರೋಧಿಸುವುದಿಲ್ಲ. ತುಳು ಭಾಷಿಕಕರ ಬಗ್ಗೆ ಅಪಪ್ರಚಾರ ಸಲ್ಲದು ,ಇಂತಹ ತಪ್ಪು ಕಲ್ಪನೆಯಿಂದ ಹೊರಬರಬೇಕಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಕೋಡಿಕಲ್‍ನ ಹತ್ತು ಅಡ್ಡ ರಸ್ತೆ, ಮೂರು ಮುಖ್ಯ ರಸ್ತೆಗೆ ಸ್ಥಳೀಯ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಮನಪಾ

ದಲಿತ ಮಹಿಳೆಗೆ ಸೇರಿರುವ ಎರಡು ಎಕರೆ ಭೂಮಿ ಕಬಳಿಸಿದ ಆರ್ಟ್ ಆಫ್ ಲೀವಿಂಗ್ ಆಶ್ರಮ: ಸಮತಾ ಸೈನಿಕ ದಳದಿಂದ ಬೃಹತ್ ಹೋರಾಟದ ಎಚ್ಚರಿಕೆ

ಬೆಂಗಳೂರು; ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಆಶ್ರಮದಿಂದ ದಲಿತ ವೃದ್ಧ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಇದೇ 29 ರಂದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಸಮತಾ ಸೈನಿಕ ದಳ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಆರ್ ಚಂದ್ರಶೇಖರ್, ಬೆಂಗಳೂರು

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ರಕ್ಷಾ ರಾಮಯ್ಯ : ಆಂಧ್ರಪ್ರದೇಶದಲ್ಲಿ ಭಾರತ ಐಕ್ಯತಾ ಯಾತ್ರೆಗೆ ವ್ಯಾಪಕ ಸಿದ್ಧತೆ

ಕನ್ಯಾ ಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ‍್ರ ಪ್ರದೇಶ ಉಸ್ತುವಾರಿ ರಕ್ಷಾ ರಾಮಯ್ಯ ಹೆಜ್ಜೆ ಹಾಕಿದರು. ಗುಂಡ್ಲುಪೇಟೆಯಿಂದ ಶುಕ್ರವಾರದಿಂದ ಪ್ರಾರಂಭವಾಗಿರುವ ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ಪಡೆಯೊಂದಿಗೆ ರಕ್ಷಾ ರಾಮಯ್ಯ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಕ್ಷಾ