Home Posts tagged #mangalore (Page 353)

ಶ್ರೀ ಮಂಗಳಾದೇವಿ ದೇವಸ್ಥಾನ : ದಸರಾ ಕವಿ ಸಂಭ್ರಮ ಸಾಧಕರಿಗೆ ಸನ್ಮಾನ

ದಸರಾ ಸಂಭ್ರಮಾಚರಣೆಯ ಅಂಗವಾಗಿ ಆಸಕ್ತಿ ಮಂಗಳೂರು, ಕಲಾಸಕ್ತರ ಬಳಗ ಹಾಗೂ ಚುಟುಕು ಸಾಹಿತ್ಯ ಪರಿಷತ್ ಅವರು ಆಯೋಜನೆ ಮಾಡಿದಂತಹ ಕವಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಕಲಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮಾನಾಥ ಹೆಗ್ಡೆ ಉದ್ಘಾಟಿಸಿದರು. ಚುಟುಕು ಸಾಹಿತ್ಯ

ಆಕಾಶ್ ಬೈಜೂಸ್ ಸಂಸ್ಥೆಯಿಂದ ಎನ್‍ಇಇಟಿ, ಜೆಇಇ ಕೋಚಿಂಗ್

ಶಿಕ್ಷಣದಲ್ಲಿ ಹೆಣ್ಣು ಮಗುವಿಗೂ ನ್ಯಾಯ ಸಿಗಬೇಕು ಹಾಗೂ ಸಬಲೀಕರಣಗೊಳ್ಳಬೇಕು ಎಂಬ ಕಾರಣಕ್ಕೆ ಆಕಾಶ್ ಬೈಜೂಸ್ ಎಲ್ಲರಿಗೂ ಶಿಕ್ಷಣವನ್ನು ಪ್ರಾರಂಭಿಸಿದೆ. ಎಎನ್‍ಟಿಎಚ್‍ಇ 2022ರ ಭಾಗವಾಗಿ ಸುಮಾರು 2,000 ಹಿಂದುಳಿದ ವಿದ್ಯಾರ್ಥಿನಿಯರಿಗೆ ಉಚಿತ ಎನ್‍ಇಇಟಿ ಮತ್ತು ಜೆಇಇ ಕೋಚಿಂಗ್ ಮತ್ತು ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದ್ದು, ಅದಕ್ಕಾಗಿಯೇ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿ ವೇತನ ಪರೀಕ್ಷೆ ನಡೆಸಲಿದೆ ಎಂದು ಆಕಾಶ್ ಬೈಜೂಸ್

ಪಡುಬಿದ್ರಿಯಲ್ಲಿ ಪುಟಾಣಿಗಳಿಗೆ ವೇಷ ಹಾಕಿ ಭಿಕ್ಷಾಟನೆ

ನವರಾತ್ರಿ ಬಂತೆಂದರೆ ಸಾಕು ಕರಾವಳಿಯಲ್ಲಿ ವೇಷಗಳದ್ದೇ ಕಾರುಬಾರು. ಆದರೆ ಪಾಲಕರು ಏನೂ ತಿಳಿಯದ ಮುಗ್ಧ ಪುಟಾಣಿಗಳ ಮುಖಕ್ಕೆ ಬಣ್ಣ ಬಳಿದು ಜರಿ ಜರಿ ಬಟ್ಟೆ ತೊಡಿಸಿ, ಭಿಕ್ಷಾಟನೆಗೆ ಬಳಕೆ ಮಾಡುವುದು ಪಡುಬಿದ್ರಿ ಪರಿಸರದಲ್ಲಿ ಕಂಡು ಬಂದಿದೆ. ಗರ್ಭಿಣಿ ಮಹಿಳೆ ತನ್ನ ಪುಟ್ಟ ಎರಡು ಮಕ್ಕಳಿಗೆ ವೇಷ ಹಾಕಿ ಭಿಕ್ಷೆ ಬೇಡಿ ಸುತ್ತಿರುವುದು ಕಂಡು ಬಂದಿದೆ. ಸ್ಥಳೀಯರೋರ್ವರು ಆ ಮಹಿಳೆಯೊಂದಿಗೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೂ ನಡೆದಿದೆ. ಏನೂ ತಿಳಿಯದ ಮಕ್ಕಳಿಗೆ ವೇಷ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ : ಲಲಿತಾ ಪಂಚಮಿ ಆಚರಣೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು ನವರಾತ್ರಿ ಉತ್ಸವಕ್ಕೆ ಪ್ರಸಿದ್ಧಿ ಪಡೆದಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕಟೀಲು ದೇವಳಕ್ಕೆ ಲಕ್ಷಾಂತರ ಮಂದಿ ಭಕ್ತರು ಬೇಟಿ ನೀಡುತ್ತಿದ್ದಾರೆ. ಬೇರೆ ದೇವಸ್ಥಾನಗಳಲ್ಲಿನ ನವರಾತ್ರಿ ಉತ್ಸವಕ್ಕಿಂತ ಇಲ್ಲಿನ ಆಚರಣೆ ಭಿನ್ನವಾಗಿರುತ್ತದೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹುಲಿ ವೇಷ ಮೆರವಣಿಗೆ ಬರುವುದು ಇಲ್ಲಿನ ವಿಶೇಷ. ನವರಾತ್ರಿಯ ಲಲಿತಾ ಪಂಚಮಿಯ ದಿನ ಕಟೀಲು ಗ್ರಾಮ, ಕೊಡೆತ್ತೂರು, ಮೂಲ

ಶಾರದಾ ಮಹೋತ್ಸವದ 100 ನೇ ವರ್ಷ : ಸಹಸ್ರ ಚಂಡಿಕಾ ಮಹಾಯಾಗ

ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆ ಯ ನಿವಾರಣೆಗಾಗಿ ಸ್ಥಿರ ಲಕ್ಷ್ಮಿ ಪ್ರಾಪ್ತಿಗಾಗಿ ಒಂದು ಸಾವಿರ ಚಂಡಿಕಾ ಪಾರಾಯಣ ಹಾಗೂ ಹೋಮಗಳನ್ನು ಮಾಡಿದರೆ ನಮ್ಮ ವಿಶೇಷ ಕಾಮನೆಗಳು ಪರಿಪೂರ್ಣವಾಗುತ್ತದೆ ಎಂಬ ವಿಶ್ವಾಸದಿಂದ ಈ ಯಾಗವನ್ನು ಮಾಡಲಾಗುತ್ತಿದ್ದು . ಬ್ರಹ್ಮಾಂಡದ ಮೂಲಬಿಂದು ಕರುಣಾ ಸಿಂದು ಬ್ರಹ್ಮಾಂಡದ ಸಕಲ ಜೀವ ಕಂದಗಳ ತಾಯಿ ಮಾತ್ರವಲ್ಲ ಬ್ರಹ್ಮಾಂಡವೆಲ್ಲವನ್ನು ತನ್ನ ಗರ್ಭದಲ್ಲಿಟ್ಟುಕೊಂಡವಳು ಶ್ರೀ ಶಾರದಾ ಮಾತೆ ಆದುದರಿಂದ ಈ ಜೀವಗಳಿಗೆ

ಕೇರಳದಲ್ಲಿ ರೈಲಿನಿಂದ ಬಿದ್ದು ವಿಟ್ಲದ ಯುವಕ ಮೃತ್ಯು

ವಿಟ್ಲ: ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿಯ ಯುವಕ ಮೃತಪಟ್ಟಿದ್ದಾರೆ.ವಿಟ್ಲ ಸಮೀಪದ ಕಡಂಬು ನಿವಾಸಿ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಅವರ ಪುತ್ರ ಮಹಮ್ಮದ್ ಅನಾಸ್(19) ಮೃತಪಟ್ಟ ಯುವಕ. ಈತ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್ ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ಟೈನ್ ನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ

16 ದಿನದ ಅವಳಿ ಶಿಶುಗಳನ್ನು ಕತ್ತು ಹಿಸುಕಿ ಕೊಂದ ತಾಯಿ

ಭೋಪಾಲ್: ಅತ್ತೆಯೊಂದಿಗೆ ಜಗಳ ಮಾಡಿಕೊಂಡು ಮಹಿಳೆಯೊಬ್ಬರು ತನ್ನ 16 ದಿನಗಳ ಅವಳಿ ಮಕ್ಕಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಪ್ನಾ ಧಾಕಡ್ ತನ್ನ ಮಕ್ಕಳನ್ನು ಕೊಂದ ಆರೋಪಿ. ಮಕ್ಕಳನ್ನು ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈಕೆಯ ಪತಿ ಮದ್ಯವ್ಯಸನಿ ಹಾಗೂ ಕೆಲಸವಿಲ್ಲದವನೆಂದು ಅತ್ತೆ ನಿಂದಿಸುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಮಕ್ಕಳು ಇಲ್ಲದಿರುವ ಬಗ್ಗೆ ಸಪ್ನಾಳ ಪತಿ ಪೊಲೀಸ್‌

ಪ್ರವಾಸೋದ್ಯಮ ಉತ್ತೇಜನಕ್ಕೆ ಹಲವು ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು : ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಸೆ.27ರ ಮಂಗಳವಾರ ಜಿಲ್ಲಾಡಳಿತ, ಮಂಗಳೂರು ಸ್ಮಾರ್ಟ್ ಸಿಟಿ, ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ನಗರದ

ಹೋಟೆಲ್ ಓಶಿಯನ್ ಪರ್ಲ್ ಸೆ. 30 ರಂದು ಉಜಿರೆಯಲ್ಲಿ ಶುಭಾರಂಭ

ಅಥಿತಿ ಸೇವೆಗೆ ಮತ್ತು ಉತ್ತಮ ಗುಣ ಮಟ್ಟದ ಆಹಾರ ಕ್ರಮಕ್ಕೆ ಹೆಸರು ವಾಸಿಯಾದ ಹೋಟೆಲ್ ಓಷನ್ ಪರ್ಲ್, ಉಜಿರೆ 30 ಸೆಪ್ಟೆಂಬರ್ 2022 ರಂದು ತನ್ನ 4ಶಾಖೆಯನ್ನು ತೆರೆಯಲಿದೆ. ಓಷನ್ ಪರ್ಲ್ ಹೋಟೆಲ್ಸ್ ಪ್ರೈ. ಲಿಮಿಟೆಡ್ ಸಂಸ್ಥೆ, ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮೂರು ಶಾಖೆಗಳನ್ನು ಹೊಂದಿದ್ದು, ಅವುಗಳೆಂದರೆ ದಿ ಓಷನ್ ಪರ್ಲ್, ಮಂಗಳೂರು, ದಿ ಓಷನ್ ಪರ್ಲ್, ಉಡುಪಿ ಮತ್ತು ದಿ ಓಷಿಯನ್ ಪರ್ಲ್ ಇನ್, ಮಂಗಳೂರು ತಮ್ಮ 4 ನೇ ಶಾಖೆಯನ್ನು ಆರಂಭಿಸಲು ಹೆಮ್ಮೆಪಡುತ್ತಿದೆ.

ಕುಂಭಾಶಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಕುಂದಾಪುರ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಶ್ರೀ ಶ್ರೀ ನಾಗಾಚಲ ಅಯ್ಯಪ್ಪಸ್ವಾಮಿ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿಗಳು, ವೇದಮೂರ್ತಿ ಲೋಕೇಶ್ ಅಡಿಗ ಅವರು ಮಾತನಾಡಿ, ಇಂದು ನಡೆಯುವ ದೇವಳದ ಎಲ್ಲಾ ಕಾರ್ಯಕ್ರಮಕ್ಕೂ ಚಾಲನೆ ನೀಡಿ ನವರಾತ್ರಿಯ