Home Posts tagged #mangalore (Page 360)

ತ್ರಾಸಿ-ಮರವಂತೆ ಬೀಚ್‍ನಲ್ಲಿ ತಿಮಿಂಗಿಲದ ಮೃತದೇಹ ಪತ್ತೆ

ಕುಂದಾಪುರ: ಕೆಲವು ದಿನಗಳ ಹಿಂದೆ ಸತ್ತ ತಿಮಿಂಗಲ ತ್ರಾಸಿ- ಮರವಂತೆ ಕಡಲತೀರದಲ್ಲಿ ಹೆದ್ದಾರಿ ಬದಿಯ ದಡದಲ್ಲಿ ಬಿದ್ದಿದೆ. ಬೆಳಗ್ಗಿನಿಂದಲೇ ತಿಮಿಂಗಿಲ ಕೊಳೆತು ನಾರುತ್ತಿದ್ದರೂ ಇದುವರೆಗೆ ಪ್ರವಾಸೋದ್ಯಮ ಇಲಾಖೆಯಾಗಲೀ ಮೀನುಗಾರಿಕಾ ಇಲಾಖೆಯಾಗಲೀ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲದಿರುವುದು ಹೆದ್ದಾರಿ ಪ್ರಯಾಣಿಕರು ಹಾಗೂ ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ.

ವ್ಯಸನ ಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಮನ ಪರಿವರ್ತನೆ ಮಾಡಬೇಕು : ಡಾ. ದೀಕ್ಷಾ ಶೆಣೈ

ಮೂಡುಬಿದಿರೆ : ಮಾದಕ ದ್ರವ್ಯ ಸೇವನೆ, ಮಾದಕ ವ್ಯಸನ ಈ ಸಮಾಜಕ್ಕೆ ಅಂಟಿಕೊಂಡಿರುವ ಕೆಟ್ಟ ರೋಗ. ಈ ದುಶ್ಚಟಕ್ಕೆ ದೊಡ್ಡ ದೊಡ್ಡ ನಗರಗಳಲ್ಲಿ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಅತೀ ವೃದ್ಧರು ಕೂಡ ಬಲಿಯಾಗುವ ಮೂಲಕ ಇದು ರಾಷ್ಟ್ರೀಯ ಸಮಸ್ಯೆಯಾಗಿ ತಲೆದೂರಿದೆ. ಇಂತಹ ವ್ಯಸನಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಧೈರ್ಯ ತುಂಬಿ ಮನ ಪರಿವರ್ತನೆ ಮಾಡಬೇಕು ಎಂದು ಆಳ್ವಾಸ್‍ನ ಪ್ರಕೃತಿ – ಯೋಗ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೀಕ್ಷಾ ಶೆಣೈ

ಬಸ್‍ನಲ್ಲಿ ಅಧಿಕಾರಿಯ ಪರ್ಸ್ ಕದ್ದ ಮಹಿಳೆ : ವೀಡಿಯೋ ವೈರಲ್

ಪುತ್ತೂರು : ಪುತ್ತೂರಿಗೆ ಬರುವ ಖಾಸಗಿ ಬಸ್ ನಲ್ಲಿ ಪ್ರಯಾಣಿಕ ಮಹಿಳೆಯೊಬ್ಬರು ಮತ್ತೊಂದು ಮಹಿಳೆಯ ಪರ್ಸ್ ಕದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪರ್ಸ್ ಕಳೆದುಕೊಂಡ ಪುತ್ತೂರು ತಾಲೂಕು ಪಂಚಾಯಿತಿಯ ಯೋಜನಾಧಿಕಾರಿ ಸುಕನ್ಯ ಪುತ್ತೂರು ಠಾಣೆಗೆ ಸಿಸಿಟಿವಿ ದೃಶ್ಯ ಆಧರಿಸಿ ದೂರು ನೀಡಿದ್ದು, ಕಳ್ಳತನಗೈದ ಮಹಿಳೆಗಾಗಿ ಪೆÇಲೀಸರು ಹುಡುಕಾಟ ಪ್ರಾರಂಭಿಸಿದ್ದರೆ. ಆದರೆ ಹುಡುಕಾಟಕ್ಕೆ ಖಾಸಗಿ ಬಸ್ ಬಸ್ಸಿನೊಳಗೆ ಅಳವಡಿಸಿದ್ದ ಸಿಸಿಟಿವಿಯ ದೃಶ್ಯವೇ ಪ್ರಮುಖ

ಕಸ ವಿಲೇವಾರಿ ಚಾಲಕರ ಸೇವೆಯನ್ನು ಟೆಂಡರ್‍ಗೆ ವಹಿಸದಂತೆ ಆಗ್ರಹ : ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಒತ್ತಾಯ

ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ ವಿಲೇವಾರಿ ಚಾಲಕರ ಸೇವೆಯನ್ನು ಮರಳಿ ಟೆಂಡರ್‍ಗೆ ವಹಿಸದಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣ ಗೌಡ, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ. ಅಶೋಕ್ ಹಾರನಹಳ್ಳಿ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಒಂದು ಕಾಲದಲ್ಲಿ ನಾನು

ಸುಳ್ಯ : ಇನ್ನು ದುರಾಸ್ಥಿಯಾಗದೆ ಉಳಿದ 1954 ನೇ ಇಸವಿಯ ಪುನರ್ಜಿತ ರಸ್ತೆ

ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ ಅವಲಂಬಸಿರುತ್ತಾರೆ. 1954 ನೇ ಇಸವಿಯಲ್ಲಿ ಪುನರ್ಜಿತ ರಸ್ತೆ ಇದೀಗ ಸಂಪೂರ್ಣ ಹದಗೆಟ್ಟು

ಮಂಗಳೂರು ದಸರಾ : ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಜನ ಸೇರಲಿದ್ದಾರೆ – ಬಿ.ಜನಾರ್ದನ ಪೂಜಾರಿ

ಮಂಗಳೂರು ದಸರಾ ಈ ಬಾರಿ ಹಿಂದಿನ ದಸರಾಕ್ಕಿಂತಲೂ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯವರಿಗೂ ಆಹ್ವಾನ ನೀಡಲಾಗುವುದು. ಅವರು ಭೇಟಿ ನೀಡುತ್ತಾರೆ ಎನ್ನುವ ವಿಶ್ವಾಸವಿದೆ. ಕೊರೋನ ಕಾರಣದಿಂದ ಈ ಹಿಂದಿನ ವರ್ಷ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿಲ್ಲ.

ಬಂಟ್ವಾಳ : 29ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ

ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ ಮಹಿಳಾ ಸಂಘದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಮೊದಲಾದವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ

ಮಂಗಳೂರು: ಸಿಎಎಸ್‌ಕೆ ಇದರ 109ನೇ ವಾರ್ಷಿಕ ಸಾಮಾನ್ಯ ಸಭೆ

ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಪ್ರಸ್ತಕ ಸಾಲಿನ ನೂತನ ಅಧ್ಯಕ್ಷರು, ಉಪಾಧ್ಯಕ್ಷರು , ಸದಸ್ಯರು ಆಯ್ಕೆಗೊಂಡಿದ್ರು. ವಾ.ಓ೦೧: ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಕೆಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದ್ರ 109ನೇ ವಾರ್ಷಿಕ ಸಾಮಾನ್ಯ ಸಭೆಯನ್ನ ಆಯೋಜಿಸಲಾಗಿತ್ತು. 2021-22ನೇ ಸಾಲಿನ

ಮಂಗಳೂರು ದಸರಾ ಮಹೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ, ಗುರು ಬೆಳದಿಂಗಳು ಫೌಂಡೇಶನ್, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಲೇಡಿಹಿಲ್ ಸಮೀಪದ ನಾರಾಯಣಗುರು ವೃತ್ತದಿಂದ ಸ್ವಚ್ಛತಾ ಕಾರ್ಯಕ್ರಮ ಆರಂಭಗೊಂಡು ಕುದ್ರೋಳಿ ದೇವಸ್ಥಾನದವರೆಗೆ ಯುವಕರು ಸ್ವಚ್ಛಗೊಳಿಸಿದರು.