ಮಕ್ಕಳಲ್ಲಿ ಕಲಿಕಾ ನ್ಯೂನತೆಯನ್ನು ಗುರುತಿಸುವುದು: ಪ್ರತಿಯೊಂದು ಕ್ಷಬ್, ಶಿಕ್ಷಕರಿಗೆ ಮತ್ತು ಪೋಷಕರಿಗೆ ಆಯಾ ಶಾಲೆಗಳಲ್ಲಿ ಕಾರ್ಯಾಗಾರವನ್ನು ಏರ್ಪಡಿಸಿ ಹಾಗು ಹತ್ತಿರದ ಶಾಲೆಗಳ ಎಲ್ಲಾ ಶಿಕ್ಷಕರನ್ನು ಮತ್ತು ಕಲಿಕಾ ನ್ಯೂನತೆಯುಳ್ಳ ಮಕ್ಕಳ ಪೋಷಕರನ್ನು ಒಂದುಕಡೆ ಸೇರಿಸಿ ದೊಡ್ಡ ಮಟ್ಟದ ಕಾರ್ಯಾಗಾರವನ್ನು ಏರ್ಪಡಿಸುವುದು. ಕಲಿಕಾ ನ್ಯೂನತೆ ಇದ್ದರೂ ಮುಂದೆ ವೃತ್ತಿ
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲ ತಿಂಗಳುಗಳ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆದಿತ್ತು. ಆಗ ದೈವಜ್ಞರು ಸೂಚಿಸಿದ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ 9 ರಿಂದ ದೇಗುಲದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇ ಮೂ ರವೀಶ ತಂತ್ರಿ, ಕುಂಟಾರುರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ. ಮಾಧ್ಯಮದೊಂದಿಗೆ
ಮಂಗಳೂರು : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.,
ಸುರತ್ಕಲ್ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ” ಸಭೆ : “ಒಂದು ತಿಂಗಳಲ್ಲಿ ಟೋಲ್ ಗೇಟ್ ತೆರವುಗೊಳ್ಳುತ್ತದೆ” ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಹೇಳಿಕೆ ಹಾಗೂ ಒಂದು ವರ್ಷ ಅವಧಿಗೆ ಟೋಲ್ ಸಂಗ್ರಹ ಗುತ್ತಿಗೆ ನವೀಕರಣ ಗೊಂಡಿರುವ ವಿಚಾರಗಳ ಕುರಿತು ವಿಷದವಾಗಿ ಚರ್ಚಿಸಲಾಯಿತು. ಟೋಲ್ ತೆರವಿಗೆ ಅಧಿಕೃತ ದಿನಾಂಕ ಘೋಷಿಸದೆ ಕೇವಲ ಬಾಯ್ಮಾತಿನ ಭರವಸೆಗಳನ್ನು ಹಿಂದಿನ ಅನುಭವಗಳ ಆಧಾರದಲ್ಲಿ ನಂಬಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ
ಮಂಗಳೂರಿನ ತೆಂಕ ಎಡಪದವಿನವರಾದ ಡಾ. ದುರ್ಗಾಪ್ರಸಾದ್ ಅವರಿಗೆ ಉತ್ತಮ ವೈದ್ಯಕೀಯ ಸೇವೆಗಾಗಿ ಶ್ರೇಷ್ಟ ವೈದ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಗ್ರಾಮೀಣ ಪ್ರದೇಶಗಳಾದ ಪೆರುವಾಯಿ ಮತ್ತು ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ 18 ವರ್ಷಗಳಲ್ಲಿ ದುಡಿದು ಸಮುದಾಯ ಆರೋಗ್ಯ ಕೇಂದ್ರ ವಾಮದಪದವನ್ನು ರಾಜ್ಯದಲ್ಲಿಯೇ ಮಾದರಿ ಆರೋಗ್ಯ ಕೇಂದ್ರವನ್ನಾಗಿ ರೂಪಿಸಿದ ಹಿರಿಮೆ ಇವರಿಗೆ ಸಲ್ಲಿತ್ತದೆ.
ಮಂಗಳೂರಿನ ಯೆಯ್ಯಾಡಿಯ V4 ಡಿಜಿಟಲ್ ಇನ್ಫೋಟೆಕ್ನ ಸೆಕ್ಯೂರಿಟಿ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜು(74) ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಕಳೆದ ಹಲವಾರು ವರ್ಷಗಳಿಂದ V4 ಮೀಡಿಯಾದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಮೂಲತಃ ಮಡಿಕೇರಿಯಾಗಿರುವ ಇವರು, ಮಂಗಳೂರಲ್ಲಿ ಬಂದು ನೆಲೆಸಿದ್ದರು. ಇಂದು ಮಡಿಕೇರಿಯ ಶುಂಠಿಕೊಪ್ಪದಲ್ಲಿ ಅಂತ್ಯ ಸಂಸ್ಕಾರ
ಮಂಗಳೂರಿನ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಸಿಎ ನಿತಿನ್ ಬಾಳಿಗಾ ಅವರು ಇತ್ತೀಚೆಗೆ ಐಬಿಬಿಐ ನಡೆಸಿದ ಕ್ಯಾಟಗರಿ ಫೈನಾನ್ಸಿಯಲ್ ಅಸೆಟ್ ಸೆಕ್ಯುರಿಟೀಸ್ ವಿಭಾಗದ ಮೌಲ್ಯಮಾಪಕರ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಹಣಕಾಸು ಆಸ್ತಿಗಳಿಗೆ ನೋಂದಾಯಿತ ಮೌಲ್ಯಮಾಪಕರಾಗಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸಿಎ ನಿತಿನ್ ಬಾಳಿಗಾ ಅವರು ಮೂಲತಃ ಮಂಗಳೂರಿನ ಉರ್ವ ಮಾರ್ಕೇಟ್ನ ನಿವಾಸಿಯಾಗಿದ್ದಾರೆ.
ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಶಾಸಕರಾದ ರಘುಪತಿ ಭಟ್ ನೇತೃತ್ವದಲ್ಲಿ ಆಯೋಜಿಸಿರುವ 75 ಕೀ.ಮೀ. ಮ್ಯಾರಥಾನ್ ಓಟ “ಅಗ್ನಿಪಥ್ ದೌಡ್” ಇಂದು ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಮುಂಬಯಿ, ಆ.22 : ದಿಶಾ ” ಒಂದು ಉತ್ತಮ ಕಾರ್ಯಕ್ರಮ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮವು ಹಂತ ಹಂತವಾಗಿ ಬೆಳೆಯುತ್ತಾ ಹೋಗುತ್ತಿದೆ. ನಮ್ಮ ಹಿಂದಿನವರು ಹಾಕಿರುವ ಸದೃಢ ಅಡಿಪಾಯ ಶ್ರೇಯೋಭಿವೃದಿಗೆ ಕಾರಣವಾಗಿದೆ ಇದಕ್ಕೆ ಎಸ್. ಎಂ. ಶೆಟ್ಟಿ ಸ್ಕೂಲ್ ಉದಾಹರಣೆಯಾಗಿದೆ ಎಂದು ಬಂಟರ ಸಂಘ ಮುಂಬಯಿ ಅದ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು ತಿಳಿಸಿದರು. ಆ.21 ರಂದು ಪೊವಾಯಿ ಎಸ್.ಎಂ.ಶೆಟ್ಟಿ ಶಾಲೆಯ ಸಭಗೃಹದಲ್ಲಿ ಬಂಟರ ಸಂಘ ಮುಂಬಯಿ , ಅಂಧೇರಿ – ಬಾಂದ್ರ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.ಈ ವೇಳೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೊಲೀಸ್




























