ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ವತಿಯಿಂದ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ ಹಾಗೂ ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ ಮನೆಮಾತಾಗಿತ್ತು.ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು.ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ರತ್ನಮಾನಸ ಇಲ್ಲಿನ ಮೇಲ್ವಿಚಾರಕರಾಗಿರುವ ಶ್ರೀ. ಯತೀಶ್ ಬಳಂಜ ಮಾತನಾಡುತ್ತಾ,ಪ್ರಕೃತಿಯ ವಿಸ್ಮಯ,ಅದರಿಂದಾಗುವ ಪ್ರಯೋಜನ,ಅದನ್ನು ಉಳಿಸುವ ಪ್ರಯತ್ನ ವಿದ್ಯಾರ್ಥಿಗಳು
ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಪುತ್ತಿಗೆ ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸರಕಾರಗಳು ಗ್ರಾ.ಪಂಗಳ ಮೂಲಕ 42 ವಿವಿಧ
ಯುಎನ್ಡಿಪಿ ಮತ್ತು ಎಎಲ್ಸಿ ಇಂಡಿಯಾ ಸಂಸ್ಥೆಯ ವತಿಯಿಂದ 5 ದಿನದ ಉದ್ಯಮಶಿಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಕುಂಪಲದಲ್ಲಿ ಉದ್ಘಾಟನೆಗೊಂಡಿತು. ಮಹಿಳಾ ಉದ್ಯಮಿ ಗಳನ್ನು ಪ್ರೋತ್ಸಾಹಿಸಿ ಅವರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದೊಂದಿಗೆ ಸ್ತ್ರೀ ಶಕ್ತಿ ಗುಂಪಿನ ಆಸಕ್ತ ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಿದರು. ನಾರಾಯಣ ಕುಂಪಲ ಅವರು
ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ
ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ ರಸ್ತೆಯ ಡಾಮರು ಎದ್ದು ಹೊಂಡಗಳು ಬಿದ್ದು ಪಾದಾಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ಹೋಗುವುದೇ ಒಂದು
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು
ಹತ್ತನೆ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟಿಲ್ಲ ಎಂದು ಮಾಧ್ಯಮ ಗೋಷ್ಠಿಯಲ್ಲಿ ಸುಳ್ಳು ಹೇಳಿಕೆ ನೀಡಿದ ಸಚಿವ ರಾದ ಸುನಿಲ್ ಕುಮಾರ್, ಕೋಟ ಶ್ರೀ ನಿವಾಸ ಪೂಜಾರಿ ಸಾರ್ವಜನಿಕ ರಲ್ಲಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಮಿಥುನ್ ರೈ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ
ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ರಾಜ್ಯದ 10ನೆ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಕೈಬಿಡಲಾಗಿದ್ದ ನಾರಾಯಣ ಗುರು ವಿಷಯವನ್ನು ಮರು ಸೇರ್ಪಡೆಗೊಳಿಸಲು ಆದೇಶಿಸಿರುವುದು ಬಿಲ್ಲವ ಸಮಾಜದ ಹೋರಾಟಕ್ಕೆ ಸಂದ ಜಯವಾಗಿದೆ. ಆದರೆ ಇದರ ಲಾಭವನ್ನು ಪಡೆಯುವ ಯತ್ನ ಸ್ಥಳೀಯ ಜನಪ್ರತಿನಿಧಿಗಳು ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಬಿಲ್ಲವ ನಾಯಕರು ಸ್ಪಷ್ಟ ಪಡಿಸಿದ್ದಾರೆ.




























