Home Posts tagged #mangalore (Page 420)

ಕುಂಟಿಕಾನದಲ್ಲಿ ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ : ಸ್ಕೂಟರ್ ಸವಾರನಿಗೆ ಗಾಯ

ಮಂಗಳೂರಿನ ಕುಂಟಿಕಾನದ ಎಜೆ ಆಸ್ಪತ್ರೆಯ ಮುಂಭಾಗದಲ್ಲಿ ಖಾಸಗಿ ಬಸ್‌ನ ಹಿಂಬದಿಗೆ ಸ್ಕೂಟರ್ ವಾಹನ ಢಿಕ್ಕಿಯಾಗಿದ್ದು, ಸ್ಕೂಟರ್ ಸವಾರ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಬಸ್‌ನ ಹಿಂಬದಿಗೆ ದ್ವಿಚಕ್ರ ವಾಹನ ಸವಾರ ಹಿಮ್ಮುಖವಾಗಿ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ದ್ವಿಚಕ್ರವಾಹನ ಸವಾರ ಬಸ್‌ನ ಅಡಿಗೆ ನುಗ್ಗಿದ್ದು, ಗಂಭೀರ ಗಾಯಗೊಂದಿಗೆ

ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಲೇಡಿಗೋಷನ್ ಆಸ್ಪತ್ರೆಗೆ ವಾಟರ್ ಪ್ಯೂರಿಫೈಯರ್ -ಕಮ್ -ಹೀಟರ್ನ ನ ಕೊಡುಗೆ

ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ವಾಟರ್ ಪ್ಯೂರಿಫೈಯರ್ ಕಂ ಹೀಟರ್ ನ್ನು ಭಾರತೀಯ ಜೀವ ವಿಮಾ ನಿಗಮವು ಕೊಡುಗೆಯಾಗಿ ನೀಡಿದೆ. ಈ ಕಾರ್ಯ ಮಾದರಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ದುರ್ಗಾ ಪ್ರಸಾದ್ ಅವರು ಹೇಳಿದರು. ಭಾರತೀಯ ಜೀವವಿಮಾ ನಿಗಮದ 65ನೇ ವರ್ಷಾಚರಣೆ ಸಂದರ್ಭದಲ್ಲಿ ಆಸ್ಪತ್ರೆಯ ಸುಪರಿಂಟೆಂಡೆಂಟ್ ಅವರು ವಾಟರ್ ಪ್ಯುರಿಫಯ್ಯರ್ ಕಂ ಹೀಟರ್ ಅನ್ನು ಸ್ವೀಕರಿಸಿ ಮಾತನಾಡಿದರು. ನಿಗಮದ ಮಂಗಳೂರು ಶಾಖೆಯ ಹಿರಿಯ ಪ್ರಬಂಧಕರಾದ ಶ್ರೀ ಎಚ್

ಪ್ರವಾದಿ ನಿಂದನೆಯನ್ನು ವಿರೋಧಿಸಿ ಪ್ರತಿಭಟನೆ

ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ ಬಹಳಷ್ಟು ಜನರು ಪ್ರವಾದಿಯವರನ್ನು ಅರಿತಾಗ ಇಸ್ಲಾಂ ಸ್ವೀಕರಿಸಿದ ಚರಿತ್ರೆಯಿದೆ. ಪ್ರವಾದಿಯನ್ನು

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಕ್ಕಳನ್ನು ಮಂಗಳೂರಿನಲ್ಲಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್‌ ಠಾಣೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು. ಒಟ್ಟಾರೆ ಪ್ರಕರಣ ಸುಖ್ಯಾಂತ್ಯ ಕಂಡಿದೆ.  

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಶಾಸಕರಾದ ಡಾ. ಭರತ್ ಶೆಟ್ಟಿ ಭೇಟಿ

ಬೊಂದೇಲ್ – ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ. ಅಕ್ಟೋಬರ್ 10 ರಿಂದ ಇನ್ನೊಂದು ಬದಿಯ ರಾಜಕಾಲುವೆ ವರೆಗೆ ರಸ್ತೆ ಕಾಮಗಾರಿಗಾಗಿ ಮುಖ್ಯ ರಸ್ತೆಯನ್ನು ಒಂದು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಈ ಸಂಬಂಧ ಮಾಹಿತಿ ಪಡೆಯಲು ಹಾಗೂ ಕಾಮಗಾರಿ ಪರಿಶೀಲಿಸಲು

ಲೇಖಕರ ಸಂಘದ ಅಧ್ಯಕ್ಷರಾಗಿ ಉಮರ್ ಯು.ಹೆಚ್. ಪುನರಾಯ್ಕೆ

ಮುಸ್ಲಿಮ್ ಲೇಖಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ, ಅಂಕಣಕಾರ, ಕರಿಯರ್ ಕೌನ್ಸಿಲರ್ ಉಮರ್ ಯು.ಹೆಚ್. ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆ ಮತ್ತು  ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಆಲಿ ಕುಂಞಿ ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎ. ಮುಹಮ್ಮದ್ ಅಲಿ, ಕಾರ್ಯದರ್ಶಿಯಾಗಿ ರಿಯಾಝ್ ಅಹ್ಮದ್, ಕೋಶಾಧಿಕಾರಿಯಾಗಿ ಮುಹಮ್ಮದ್ ಮುಹ್ಸಿನ್ ಆಯ್ಕೆಯಾಗಿದ್ದಾರೆ. ಏ.ಕೆ. ಕುಕ್ಕಿಲ,

ಮಂಗಳೂರು ನಗರದ ಕೊಲೊಸೊ ಕಾಲೇಜಿನ ವಿದ್ಯಾರ್ಥಿನಿ ನೀನಾಳ ಸಾವಿನ ತನಿಖೆಗೆ ಎಸ್.ಎಫ್.ಐ. ಒತ್ತಾಯ

ಮಂಗಳೂರು ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಜನೆ ಮಾಡುತ್ತಿದ್ದ ಕಾಸರಗೋಡು ಮೂಲದ ವಿದ್ಯಾರ್ಥಿನಿ ನೀನಾ ಹಾಸ್ಟೇಲ್‌ನ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯ ಬಗ್ಗೆ ಕಾಲೇಜಿನ ವಿದ್ಯಾರ್ಥಿ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿದೆ. ವಿದ್ಯಾರ್ಥಿನಿಯು ಆತ್ಮಹತ್ಯೆಗೈಯಲು ಹಾಸ್ಟೆಲ್‌ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಪೊಲೀಸ್ ಇಲಾಖೆ ವಿದ್ಯಾರ್ಥಿ ನೀನಾಳ

ಮೋರ್ಗನ್ಸ್ ಗೇಟ್‌ನಲ್ಲಿ ನಡೆದ ಶೂಟೌಟ್ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸುಧೀಂದ್ರ ಪ್ರಭು ಸಾವು

ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಶುಕ್ರವಾರ ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು ತಂದೆಯಿಂದಲೇ ಗುಂಡೇಟಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಸುಧೀಂದ್ರನನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಆತನ ಮೆದುಳು ನಿಷ್ಕ್ರಿಯಗೊಂಡ ವಿಷಯವನ್ನು ವೈದ್ಯರು ಘೋಷಿಸಿದ್ದರು. ಶುಕ್ರವಾರ ನಸುಕಿನಜಾವ

ಶೃಂಗೇರಿಗೆ ಪ್ರಯಾಣ ಬೆಳೆಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ರಾಷ್ಟ್ರಪತಿ ರಾಮನಾಥ ಕೋವಿಂದ್  ಅವರ ಮೂರು ದಿನಗಳ ಕರ್ನಾಟಕ ರಾಜ್ಯ ಪ್ರವಾಸದ ಸಂದರ್ಭದಲ್ಲಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಮೈಸೂರಿಗೆ ತೆರಳಿ ಗುರುವಾರ ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಕರಾವಳಿಯ ಆತಿಥ್ಯವನ್ನು ಸ್ವೀಕರಿಸಿ ಇಂದು ಬೆಳಗ್ಗೆ 10.45ಕ್ಕೆ ಶೃಂಗೇರಿಗೆ ಪ್ರಯಾಣ ಬೆಳೆಸಿದರು. ಗುರುವಾರ ಸಂಜೆ 6:50ಕ್ಕೆ ಭಾರತೀಯ ವಾಯು ಪಡೆಯ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಳಿದಾಗ ಗೌರವ

ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್ ನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 16 ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯ