Home Posts tagged #mangalore (Page 427)

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು.

ಕೋವಿಡ್ ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಜಾಗ್ರತೆ ವಹಿಸಬೇಕು : ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆಯಲ್ಲಿಜಾಗ್ರತೆವಹಿಸಬೇಕು, ಪಕ್ಕದ ರಾಜ್ಯದವರಿಗೆ ಟೆಸ್ಟ್ ಮಾಡಬೇಕು, ಈಗಾಗಲೇ ಎಲ್ಲಾ ಗಡಿ ಜಿಲ್ಲೆಗಳಿಗೆ ನಾನು ಭೇಟಿ ಕೊಡ್ತಾ ಇದ್ದೇನೆ, ಮೈಸೂರು

ಕರಾವಳಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ

ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಮೀನುಗಾರಿಕೆ, ಬಂದರು ಹಾಗೂ

ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ

ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ

ಉಭಯ ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ

ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ

ವಿನ್ಯಾಸ ಅನುಮೋದನೆ ಶುಲ್ಕ ಕಡಿಮೆ ಮಾಡಿರುವುದು ಸ್ವಾಗತಾರ್ಹ:ಕ್ರೈಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ನಗರ ಯೋಜನಾ ವಿಭಾಗಕ್ಕೆ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆಯ ಶುಲ್ಕವನ್ನು ಪರಿಷ್ಕರಿಸಿರುವುದನ್ನು ಕ್ರೆಡಾಯ್ ಮಂಗಳೂರಿನ ಅಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿದ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್, ಜನ ಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೂಡಾದ

ಕರಾವಳಿಯಲ್ಲಿಅಗಸ್ಟ್ 12ರವರೆಗೆ ಭಾರೀ ಮಳೆ ಸಾಧ್ಯತೆ

 ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.  

ಕಾರ್ಪೋರೇಟ್ ಕಂಪೆನಿಗಳಿಂದ ದೇಶ ಉಳಿಸಿ – CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ

ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ ದೇಶವನ್ನು ಉಳಿಸಿ ದಿನಾಚರಣೆಯ ಭಾಗವಾಗಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ: ಪೊಲೀಸರಿಂದ ತಪಾಸಣೆ

ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು

ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚಿ:ಸಚಿವ ಎಸ್. ಅಂಗಾರ ಸೂಚನೆ

ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಸೂಚಿಸಿದರು.ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ 10.000 ರೂ. ಪರಿಹಾರ ಮೊತ್ತವನ್ನು ಶೀಘ್ರವಾಗಿ ಮತ್ತು ಕಡ್ಡಾಯವಾಗಿ ಆಯಾ ಕುಟುಂಬಗಳಿಗೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಅವರು ಮಾತನಾಡಿ, ಜಿಲ್ಲೆಯಲ್ಲಿ ನೆರೆಯಿಂದಾಗಿ ಹೆಚ್ಚಿನ