ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ
ಜಪ್ಪಿನಮೊಗರು ಗ್ರಾಮದ ಕೊಪ್ಪರಿಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ
ಕರಾವಳಿ ಕರ್ನಾಟಕದಲ್ಲಿ ಮನೆ ಮಾತಾಗಿರುವ ವಿ4ನ್ಯೂಸ್ ವಾಹಿನಿಗೆ 16ರ ಸಂಭ್ರಮ. ಈ ಸಂಭ್ರಮವನ್ನು ಕೋವಿಡ್ ವಾರಿಯರ್ಸ್ಗಳಿಗೆ ಗೌರವಾರ್ಪಣೆ ಸಲ್ಲಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು. ಕರಾವಳಿಯಲ್ಲಿ ನಡೆಯುವ ಕ್ಷಿಪ್ರ ಬೆಳವಣಿಗೆಗಳನ್ನು ನೇರಪ್ರಸಾರದಲ್ಲೇ ಅತ್ಯಂತ ವೇಗವಾಗಿ ಪ್ರಸಾರ ಮಾಡುವ ನ್ಯೂಸ್ ಬುಲೆಟಿನ್ಗಳು, ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಡಿಬೇಟ್ ಶೋಗಳು, ಮನರಂಜನಾ ಕಾರ್ಯಕ್ರಮಗಳು, ಕಾಮಿಡಿ ರಿಯಾಲಿಟಿ ಶೋ, ಹೆಲ್ತ್ ಶೋಗಳು, ಶೈಕ್ಷಣಿಕ ಕಾರ್ಯಕ್ರಮಗಳು,
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳೂರಿನ ಡಾ. ಎನ್ಎಸ್ಎಎಂ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜು ಮತ್ತು ಕಾಲೇಜಿನ ಎನ್ಎಸ್ಎಸ್ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹಲವಾರು ಮಂದಿ ಯೋಗ ಪ್ರದರ್ಶನ ನಡೆಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯ ಶಿಕ್ಷಕ ಜನಾರ್ದನ್, ಪ್ರಧಾನಿ ನರೇಂದ್ರ ಮೋದಿಯ ಆಶಯದಂತೆ ಪ್ರತೀ ವರ್ಷವೂ ಯೋಗ
ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್ಡೌನ್ ಸಡಿಲಿಕೆ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಅನ್ಲಾಕ್ 1.0 ಭಾಗವಾಗಿ ಅಗತ್ಯವಸ್ತುಗಳ ಖರೀದಿಗೆ ಅವಧಿ ವಿಸ್ತರಣೆ
ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ ಸಂದರ್ಭ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ, ಕೇಸು ದಾಖಲಿಸಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ. ಪಕ್ಷದ ನಾಯಕರೊಬ್ಬರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿದ್ದವೆನ್ನಲಾಗಿದೆ. ಮದುವೆ ನೂರಕ್ಕೂ ಹೆಚ್ಚು ಜನರ ಗುಂಪುಗೂಡಿದ್ದರು ಎಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ
ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಸೂಕ್ತ ಸೌಲಭ್ಯ ನೀಡಲಿದೆ. ಇದರ ಪ್ರಯೋಜನವನ್ನು ಪಡೆದು ಸರಕಾರದ ” ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ” ಯೋಜನೆ ಯಶಸ್ವಿಗೊಳಿಸಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು. ಅವರು ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆಯಲ್ಲಿ ಈ ಯೋಜನೆಯ ಸಮಗ್ರ ಮಾಹಿತಿ ನೀಡಿದರು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ
ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿದ್ದಾರೆ. ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ ಕೃಪಾ ರಾವ್ ಬಂಧಿತ. ನಗರದ ನವಭಾರತ ಸರ್ಕಲ್ ಬಳಿಯಿರುವ ಮೌರಿಷ್ಕ್ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ವಸಂತಾ ಎಂಬವರು 2021 ಮಾರ್ಚ್ 10ರಂದು ಭದ್ರಾವತಿಯಿಂದ ಮಂಗಳೂರಿಗೆ
ಬದಲಾವಣೆ ಎನ್ನುವುದು ಕಷ್ಟಕರ ಮತ್ತು ಪ್ರತಿರೋಧ ಪೂರಿತವಾಗಿದ್ದರೂ ಅದು ಪ್ರಕೃತಿ ಸಹಜ ಹಂತ. ತಿಕ್ಕಾಡುವ ಬದಲು ಅಭಿವೃದ್ಧಿಯತ್ತ ಮುಖಮಾಡಿದಾಗ ಬದಲಾವಣೆ ಸುಲಭ. ದೂರವಾಣಿ ಸಂಪರ್ಕ ಕಂಪೆನಿಗಳಿಂದ ಹಿಡಿದು ಪ್ರತೀ ಮನೆ – ಕುಟುಂಬಗಳಲ್ಲಿ ನಾವು ಮರೆತಿರುವ ದಿನಚರಿಯೂ ಕೂಡಾ ನಮಗೆ ಹೊಸತನ್ನು ನೀಡಿದೆ. ಪರಿವರ್ತನೆ ಅನ್ನುವುದು ನಮ್ಮ ಅಂತರಾತ್ಮದಿಂದ ಪ್ರಾರಂಭಗೊಂಡಾಗ ಮಾತ್ರ ಜಗತಿಗೆ ಧನಾತ್ಮಕತೆಯನ್ನು ಪಸರಿಸಲು ಸಾಧ್ಯ ಎಂಬುದಾಗಿ ಮೈ ಅಂತರಾತ್ಮ ಮತ್ತು ಆಡ್ ಐಡಿಯಾ


















