ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್
ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ
ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಕುದ್ರೋಳಿ ಕ್ಷೇತ್ರದ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಅವರು ಚಾಲನೆ ನೀಡಿದರು. ಕುದ್ರೋಳಿ ಕ್ಷೇತ್ರ ದ ಪ್ರಧಾನ ದ್ವಾರದಿಂದ ಮಣ್ಣಗುಡ್ಡ, ನಾರಾಯಣಗುರು ಸರ್ಕಲ್, ಎಂ.ಜಿ. ರಸ್ತೆ, ಪಿವಿಎಸ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ಕ್ಲಾಕ್ ಟವರ್, ಅಳಕೆ ಯಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸುವ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಜರುಗಿತು. ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ
ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಮಗಾರಿಗಳಿಗೆ ಪರಿಶೀಲನೆ ನಡೆಸಿದರು. ಮಂಗಳೂರಿನ ನಗರದ ಪಂಪ್ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಸ್ಮಾರ್ಟ್ ಸಿಟಿಯಡಿಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್ ವೀಕ್ಷಣೆಯನ್ನು ಮಾಡಿದರು. ಬೋಳಾರದಲ್ಲಿ ನಿರ್ಮಾಣವಾದ ಈಜುಕೊಳ ಕಾಮಗಾರಿ ಪರಿಶೀಲನೆ ನಡೆಸಿದರು.
ಮಂಗಳೂರು : `ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ.ಬಾಕಿ ಹಣ ಸರ್ಕಾರ ಬಿಡುಗಡೆ
ಮಂಗಳೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ ನಡೆದ ಪರೇಡ್ನಲ್ಲಿ 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿರವರು ಪೆÇಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೆÇಲೀಸ್
ತುಡರ್ ಪ್ರಕಾಶನದಿಂದ ಪ್ರಕಟಿಸಲಾದ ಅಕ್ಷಯ್ ಆರ್. ಶೆಟ್ಟಿ ಅವರ ‘ಪೆರ್ಗ’ ತುಳು ನಾಟಕ ಹಾಗೂ ‘ಹಿಡಿ ಅಕ್ಕಿಯ ಧ್ಯಾನ’ ಕನ್ನಡ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್ಕ್ಲಬ್ನಲ್ಲಿ ನಡೆಯಿತು. ಪೆರ್ಗ ತುಳು ನಾಟಕ ಕೃತಿಯನ್ನು ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅವರು ಅನಾವರಣಗೊಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಲೇಖಕಿ ಅಕ್ಷಯ ಶೆಟ್ಟಿ ಅವರ ಗಮನ ಇರುವುದು ಸಂಸ್ಕøತಿಯನ್ನು
ರಾಷ್ಟ್ರೀಯ ಓಪನ್ ಮತ್ತು ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿಯು ಅಕ್ಟೋಬರ್ 17ರಿಂದ 21ರ ತನಕ ಮಂಗಳೂರಿನ ಟೌನ್ ಹಾಲ್ನಲ್ಲಿ 9 ರೌಂಡ್ಗಳ ಸ್ಪರ್ಧೆ ನಡೆಯಲಿದೆ ಎಂದು ಚೆಸ್ ಅಸೋಸಿಯೇಶನ್ನ ಅಧ್ಯಕ್ಷರಾದ ರಮೇಶ್ ಕೋಟೆ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಈ ಪಂದ್ಯಾಟಕ್ಕೆ ಬೇರೆ ಬೇರೆ ರಾಜ್ಯಗಳ ಆಟಗಾರರು, ಅಂತರಾಷ್ಟ್ರೀಯ ಮಟ್ಟದ ಆಟಗಾರರು ಸಹಿತ ಸುಮಾರು 400
ಮಂಗಳೂರು: ಎಜೆ ಆಸ್ಪತ್ರೆ ಮುಂಭಾಗ ಆಸ್ಪತ್ರೆ ಕಡೆಯಿಂದ ಹೊರ ಬರುತ್ತಿದ್ದಂತೆ ಆಕ್ಟೀವ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದಂತೆ ಮುಂಭಾಗದದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಮೈಮೇಲೆ ಹರಿದು ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟಿರುತ್ತಾರೆ . ಮಂಗಳೂರು ಸಂಚಾರ ಪೂರ್ವ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ




























