ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್
ಮಂಗಳೂರಿನ ಫಳ್ನೀರ್ನ ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು ರಾತ್ರಿ 8ಗಂಟೆಗೆ ನಗರದ ಹೋಟೆಲೊಂದರಲ್ಲಿ ರ್ಯಾಗಿಂಗ್ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು
ಕರಾವಳಿಯ ಪ್ರಸಿದ್ಧ ಕ್ಷೇತ್ರ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಕ್ಷೇತ್ರಕ್ಕೆ ನೂತನ ವ್ಯವಸ್ಥಾಪನ ಸಮಿತಿಯ ರಚನೆಯಾಗಿದೆ. ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ.ಜೆ.ಶೆಟ್ಟಿ ಆಯ್ಕೆಗೊಂಡರೆ, ಸದಸ್ಯರಾಗಿ ರಾಘವೇಂದ್ರ ಅಡಿಗ, ಕೆ.ದೇವದಾಸ್ ಕುಮಾರ್, ಎಚ್.ಕುಸುಮಾ ದೇವಾಡಿಗ, ಎನ್.ನಿವೇದಿತ ಶೆಟ್ಟಿ, ಕೆ.ರಾಜೇಶ್ , ಎಚ್.ಕೆ.ಪುರುಷೋತ್ತಮ ಜೋಗಿ, ಮನೋಹರ್ ಸುವರ್ಣ, ನಾರಾಯಣ್ ಕೋಟ್ಯಾನ್ ಬೋಳಾರ್ ಆಯ್ಕೆಯಾಗಿದ್ದಾರೆ. ಮೂರು ವರ್ಷದ ಅವಧಿಗೆ ವ್ಯವಸ್ಥಾಪನ
ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿದು, ನಿರ್ಮಾಣಗೊಂಡಿದ್ದ ತಡೆಗೋಡೆ ಕಾಮಗಾರಿ ಕುಸಿದು ಬಿದ್ದಿದೆ.
ಮಂಗಳೂರಿನ ಕದ್ರಿಯಲ್ಲಿ ಸೆಲೂನ್ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್, ಬಂಧಿತ ವ್ಯಕ್ತಿ. ಈತ ಯೂನಿಸೆಕ್ಸ್ ಸೆಲೂನ್ಗೆ ನುಗ್ಗಿ ಯುವತಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಕದ್ರಿಯ ಯುನಿಸೆಕ್ಸ್ ಸೆಲೂನ್ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಯುವತಿಯ ಮೈಗೆ ಕೈ ಹಾಕಿ ಕಿರುಕುಳ ನೀಡಿದ್ದ ದಾವೂದ್ ಆಕೆಗೆ ಹಲ್ಲೆ
ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,
ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.
ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾದ ವತಿಯಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ಶುಕ್ರವಾರದಂದು
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು
ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ ನದಿ ಮೀನುಗಾರಿಕೆಯನ್ನು ನೀರಿಗೆ ಇಳಿದು ಮೀನುಗಾರಿಕೆ ಮಾಡುವ ಪದ್ದತಿಯಲ್ಲಿ ಬೊಲ್ಪುಬಲೆ ಮತ್ತು