Home Posts tagged #mangaluru (Page 33)

ಕಟ್ಟಡ ಕಾರ್ಮಿಕರಿಗೆ ಗ್ರಾಮ ಮಟ್ಟದಲ್ಲಿ ಆಹಾರ ಕಿಟ್ ನೀಡಬೇಕು ಎಂದು ಕಾರ್ಮಿಕ ಆಯುಕ್ತರಿಗೆ ಮನವಿ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ ಗಳನ್ನು ಗ್ರಾಮ ಮಟ್ಟದಲ್ಲಿ ನೀಡಬೇಕು ಹಾಗೂ ಶಾಸಕರು ಗಳು ಆಹಾರ ಕಿಟ್ ಗಳಲ್ಲಿ ಹಸ್ತಕ್ಷೇಪ ಮಾಡವುದನ್ನು ಖಂಡಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ .ಸಿ.ಐ.ಟಿ.ಯು ವತಿಯಿಂದ ಬಂಟ್ವಾಳ ಕಾರ್ಮಿಕ ನಿರೀಕ್ಷಕರ ಮುಖಾಂತರ ಕಲ್ಯಾಣ ಮಂಡಳಿ ಕಾರ್ಯದರ್ಶಿ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ:- ಆನ್‌ಲೈನ್ ಮೂಲಕ ಅಡುಗೆ ಸ್ಪರ್ಧೆ ಆಯೋಜನೆ

ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್‌ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ ವತಿಯಿಂದ ಭವಿಷ್ಯದ ಬಾಣಸಿಗರಾಗಲು ಬಯಸುವ ದ್ವಿತೀಯ ಪಿಯುಸಿ ಹಾಗೂ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದ

ಶ್ರೀನಿವಾಸ ಹೊಟೇಲ್ ಕಟ್ಟಡದ ಕುಸಿತದ ವದಂತಿ: ಗಾಳಿ ಸುದ್ದಿ ಎಬ್ಬಿಸಿತ್ತು ವಾಟ್ಸಪ್ ಬಿರುಗಾಳಿ

ಮಂಗಳೂರಿನ ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿದೆ. ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ

ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ : ಜಗದೀಶ್ ಶೇಣವ

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವದ ಹತ್ಯೆ

ಕೋವಿಡ್ ಪ್ಯಾಕೇಜ್‌ಗೆ ಆಗ್ರಹಿಸಿ ತುಳುನಾಡ ದೈವಾರಾಧಕರ ಮನವಿ

ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ ) ಉಡುಪಿ ಜಿಲ್ಲೆಯ ಸರ್ವ ಸದಸ್ಯರುಗಳು ಸೇರಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ಭೇಟಿ ಮಾಡಿ ಮನವಿ ಕೊಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳನ್ನು ಹೇಳಿದರು. ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ ಸರ್ಕಾರ ನಮ್ಮ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ದುಡಿಯುವವರಿಗೆ ಈ ಲಾಕ್ ಡೌನ್ ತುತ್ತು

ಮಂಗಳೂರಿನಲ್ಲಿ ವಾಹನಗಳ ತಪಾಸಣೆ : ನಿಷೇಧಿತ ಟಿಂಟ್ ತೆಗೆದ ಪೊಲೀಸರು

ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್,

ಶಾಸಕ ಡಾ.ಭರತ್ ಶೆಟ್ಟಿಯವರ ನೇತೃತ್ವದಲ್ಲಿಕೋವಿಡ್ ಲಸಿಕೆ ಅಭಿಯಾನ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ