ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಿಕಾಸ ಪ್ಲೈಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ
ಮಂಗಳೂರಿನ ಮೆರಿಹಿಲ್ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್
ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆಯಿತು.ಪ್ರತೀ ಗ್ರಾಮದಿಂದ ಸಂಗ್ರಹಿಸಿದ ಹಾಲು, ತೆಂಗಿನಕಾಯಿಗಳನ್ನು ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ ನಂತರ ಭಜನೆಯೊಂದಿಗೆ ಕಡಲ ಕಿನಾರೆಗೆ ಆಗಮಿಸಿ ಗಂಗಾ ಮಾತೆಗೆ ಸಮರ್ಪಣೆ ಮಾಡಲಾಯಿತು. ಮುಂದಿನ ಮೀನುಗಾರಿಕೆಯ ಅವಧಿಯಲ್ಲಿ ಮೀನುಗಾರರಿಗೆ ಒಳಿತಾಗಲಿ ಎಂದು ಕದ್ರಿ ಜೋಗಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥ್ ಜೀ ಮಹರಾಜ್
ಮಂಗಳೂರಿನ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕೇರಳದ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಏಕೈಕ ಹಬ್ಬವೇ ಓಣಂ. ಅಂತಹ ಓಣಂ ಹಬ್ಬವನ್ನು ಮಂಗಳೂರಿನಲ್ಲೂ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಮಂಗಳೂರಿನ ಸಾನಿಧ್ಯ ಸಂಸ್ಥೆಯಲ್ಲಿ ಓಣಂ ಹಬ್ಬದ ಸಂಕೇತವಾಗಿ ಪೂಕಳಂನ್ನು ರಚಿಸಿ ವಿಶೇಷವಾಗಿ ಆಚರಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ಪೊಲೀಸ್ ಉಪ ಆಯುಕ್ತರಾದ
ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಮಂಗಳೂರು ಶಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದ ಕೊಡಿಯಾಲ್ಬೈಲ್ನ ಪಿವಿಎಸ್ ಕಲಾಕುಂಜ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಆಚರಿಸಲಾಗುವುದು ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 2 ಮತ್ತು 3ರಂದು ದೇವಾಲಯದ
ಗ್ಯಾರೇಜ್, ಕೆಫೆ, ಮತ್ತು ಆಟೋ ಪಾರ್ಟ್ಸ್ ಈ ಮೂರನ್ನೂ ಒಳಗೊಂಡ ಗ್ಯಾರೇಜ್ ಕೆಫೆ ಮಂಗಳೂರಿನ ನಾಗುರಿಯಲ್ಲಿ ಉದ್ಘಾಟನೆಗೊಂಡಿತು.ಎಲ್ಲವೂ ಒಂದೇ ಸೂರಿನಡಿಯಲ್ಲಿರುವ ಈ ನೂತನ ಸಂಸ್ಥೆಯನ್ನು ಅತಿಥಿಗಳು ಉದ್ಘಾಟಿಸಿದರು. ಉದ್ಘಾಟನಾ ಸಂದರ್ಭದಲ್ಲಿ ಹುಲಿನಲಿಕೆ ಆಕರ್ಷಣೀಯವಾಗಿತ್ತು. ನಾಗುರಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮೋಟೋ ಕ್ಲೌನ್ಝ್, ಸ್ಲೈಸ್ ಆಫ್ ಹೆವೆನ್ ಮತ್ತು ಐಕ್ಯಂ ಆಟೋ ಸ್ಪಾ ಆಂಡ್ ಡಿಟೈಲಿಂಗ್ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುತ್ತದೆ.
ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೆÇೀನು, ನಗದು 1,800 ರೂ.,
ಮಂಗಳೂರಿನ ಜ್ಯೋತಿ ಸರ್ಕಲ್ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ಗ್ರಾಹಕರಾದ ಭರತ್ ಉಳ್ಳಾಲ್ ದಂಪತಿಗಳು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಟಾಟಾ ಎಂದರೆ ಜಗತ್ತಿನಲ್ಲಿಯೇ ಒಂದು ನಂಬಿಕೆಯ ಹೆಸರಾಗಿದ್ದು,
ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಪಾಂಡೇಶ್ವರ ಪೆÇಲೀಸರು ಬಂಧಿಸಿದ್ದಾರೆ.ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ ಎಂಬವರು ಕಿಡ್ನಾಪ್ ಮಾಡಿ 5 ಲಕ್ಷ ರೂ. ಹಾಗೂ ಕಾರು ನೀಡುವಂತೆ ಬೇಡಿಕೆ ಇಟ್ಟಿದ್ದರು. ಅವರು ಕೊಡಲು ನಿರಾಕರಿಸಿದಾಗ ಅವರ




























