Home Posts tagged #mangaluru (Page 40)

ಕಾಂಗ್ರೆಸ್ ಯಾವತ್ತೂ ದ್ವೇಷ ರಾಜಕೀಯ ಮಾಡಿಲ್ಲ : ಮಾಜಿ ಸಚಿವ ರಮಾನಾಥ್ ರೈ

ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ

ಅದ್ಯಪಾಡಿ : ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್‍ನ ಭಕ್ತಿ ಗೀತೆಗಳ ಲೋಕಾರ್ಪಣೆ

ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್ ಎಂಬ 5 ಭಕ್ತಿ ಗೀತೆಗಳ ಲೋಕಾರ್ಪಣೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಗೆಗೆ ತುಳು ಭಕ್ತಿ ಗೀತೆಯು ಬಿಡುಗಡೆಗೊಂಡಿತು. ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಶ್ರೀ ಕೆ ಲಕ್ಷ್ಮೀ ನಾರಾಯಣ ಅಸ್ರಣ್ಣರು

ಕದ್ರಿ : ಹೋಟೆಲ್ ಡಿಂಕಿ ಡೈನ್‍ ನಲ್ಲಿ ಉಚಿತ ಕಷಾಯ, ಮೆಂತೆ ಗಂಜಿ ವಿತರಣೆ

ಹೋಟೆಲ್ ಡಿಂಕಿ ಡೈನ್‍ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳಲ್ಲಿ ಬರುವ ಅಮಾವಾಸ್ಯೆಯಂದು ಕರಾವಳಿ ಭಾಗದಲ್ಲಿ ಆಟಿ ಕಷಾಯ ಸೇವನೆ ಡಿಂಕಿ ಡೈನ್ ಹೋಟೆಲ್ ಮಾಲಕರಾದ ಸ್ವರ್ಣ ಸುಂದರ್, ಕಿರಣ್ ಜೋಗಿ, ಮಾಜಿ ಮೇಯರ್ ಹರಿನಾಥ್ ಜೋಗಿ ಪತಂಜಲಿ ಡಾ. ಜ್ಞಾನೇಶ್ ನಾಯಕ್, ಅಶೋಕ್, ಲಕ್ಷ್ಮಣ್ ಕುಮಾರ್ ಮಲ್ಲೂರು, ಪ್ರದೀಪ್

ಕದ್ರಿ : ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ

ದ.ಕ. ಜಿಲ್ಲೆ – ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್‌.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ

ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಚಾತುರ್ಮಾಸ್ಯ ಸಂಪನ್ನ

ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ 24ನೇ ಚಾತುರ್ಮಾಸ್ಯವು ಶ್ರೀವಜ್ರದೇಹಿ ಮಠದಲ್ಲಿ ಸಂಪನ್ನಗೊಂಡಿತು. ಪೂಜ್ಯ ಶ್ರೀಗಳು ಮೃತ್ತಿಕಾ ಪೂಜೆಯನ್ನು ನೆರವೇರಿಸಿದರು. ವ್ಯಾಸ ಪೂಜೆ ಮತ್ತು ಪಟ್ಟದ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಅನಂತರ ಭಕ್ತರು ಈ ಸತ್ಕರ್ಮದಲ್ಲಿ ಪಾಲ್ಗೊಂಡಿದ್ದರು.

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ – ಕಮೀಷನರ್

ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ.

Mangaluru : ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಆರೋಪ – ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ

ಕಿನ್ನಿಗೋಳಿ : ಮಾರಕ ಕಾಯಿಲೆಯಿಂದ ಬಳಲುತ್ತಿರುವ ಮಮತಗೆ ಬೇಕಾಗಿದೆ ದಾನಿಗಳ ನೆರವು

ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ. ಮುಂಬೈಯ ಅಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗಾಗಿ ತನ್ನಲ್ಲಿರುವ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಇದುವರೆಗೆ ಸುಮಾರು 65 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ದಾನಿಗಳ, ಮಹರಾಷ್ಟ್ರ ಸರಕಾರ ಅಲ್ಲದೆ

ಏಕರೂಪ ನಾಗರಿಕ ಸಂಹಿತೆ ಕುರಿತು ಮಂಗಳೂರು ಧರ್ಮಕೇಂದ್ರ ಕೈಸ್ತ ಮುಖಂಡರ ಸಭೆ

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬಗ್ಗೆ ಇರುವ ಸಾಧಕ-ಭಾದಕಗಳ ಬಗ್ಗೆ ಮಂಗಳೂರು ಧರ್ಮಕೇಂದ್ರ ಕೈಸ್ತ ಮುಖಂಡರು ಸಭೆ ಸೇರಿ ಚರ್ಚಿಸಿದರು.ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಡಿಕುನ್ಹಾ ರವರು ಸವಿಸ್ತಾರವಾಗಿ ವಿಷಯವನ್ನು ಸಭೆಗೆ ಮಂಡಿಸಿದರು. ಹಿರಿಯ ಬರಹಗಾರಾ ಹಾಗೂ ಸೆವಕ್ ವಾಡಿಚಿ ಪತ್ರಿಕೆಯ ಸಂಪಾದಕ ವಂದನೀಯ ಚೇತನ್ ಲೋಬೊ ಪ್ರತಿಕ್ರಿಯೆ ನೀಡಿದರು. ಸಭಾ ಪಾಲಕರಾದ ಖ್ಯಾತ ವಕೀಲರಾದ ಎಂ. ಪಿ. ನೊರೊನ್ಹಾರವರು ವಿವಿಧ