Home Posts tagged #mangaluru (Page 41)

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳಂಜದಲ್ಲಿ ಶನಿವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ 12.90 ಸೆಂ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲೇ ಅತ್ಯಧಿಕ. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ, 10.40 ಸೆಂ.ಮೀ., ಕುಕ್ಕೇಡಿಯಲ್ಲಿ 10.25 ಸೆಂ.ಮೀ. ಪಡಂಗಡಿ, ಮಾಲಾಡಿ ಮತ್ತು ಲಾಯಿಲದಲ್ಲಿ ತಲಾ 9.50 ಸೆಂ.ಮೀ.ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ

ಜುಲೈ 7ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7ರ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ

ಮಂಗಳೂರು : ಮಳೆಯ ಅಬ್ಬರಕ್ಕೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ

ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ

ಬಿಕರ್ನಕಟ್ಟೆ : ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ಸ್ ಬಿದ್ದು ವಾಹನ ಜಖಂ

ಮಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ಮಳೆಯಿಂದಾಗಿ ಹಾನಿ ಸಂಭವಿಸುತ್ತಿದೆ. ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 12ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ. ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 12 ವಾಹನಗಳು ಜಖಂಗೊಂಡಿವೆ. ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ.

ಗುರುಪುರ : ಗ್ರಾಮ ಸಭೆ ನಡೆಸದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ ಒದಗಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಪರಿಹಾರ ಒದಗಿಸುವ ದಿನಾಂಕ ಮತ್ತು ಎಲ್ಲಾ ಅಧಿಕಾರಿಗಳು ಬಂದರೆ ಮಾತ್ರ ಸಭೆ ನಡೆಸಬೇಕೆಂದು ಒತ್ತಾಯಿಸಿದರು. ಇಂದು ಸಭೆಗೆ 28 ಅಧಿಕಾರಿಗಳ

Mangaluru : ಹಿರಿಯ ನಾಗರಿಕರಿಗೆ ಬಸ್ಸಿನಲ್ಲಿ ಸೀಟು ಕೊಡಲ್ಲ ದೂರಿನ ಹಿನ್ನಲೆ ; ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿದ ಎಎಸ್‍ಐ

ಹಿರಿಯ ನಾಗರಿಕರಿಗೆ ಬಸ್‍ನಲ್ಲಿ ಸೀಟ್ ವ್ಯವಸ್ಥೆಯಿಲ್ಲ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೇಳಿ ಬಂದ ಬೆನ್ನಲ್ಲೇ ಎಎಸ್‍ಐ ಒಬ್ಬರು ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿ ಪೊಲೀಸ್ ಕಮಿಷನರ್ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರೊಬ್ಬರು ಕರೆ ಮಾಡಿ ನಮಗೆ ಬಸ್ ನಲ್ಲಿ ಸೀಟ್ ಮೀಸಲಾತಿ ಇದ್ದರೂ ಅದು ಪಾಲನೆಯಾಗುತ್ತಿಲ್ಲ ಎಂದು ದೂರಿದ್ದರು. ಅದರ ಬೆನ್ನಲ್ಲೇ ಪಾಂಡೇಶ್ವರ ಸಂಚಾರ

ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಜವಾಬ್ದಾರಿ ತಹಶೀಲ್ದಾರ್ ಗೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ

ದೇರಳಕಟ್ಟೆ : ದೇಶದ ಮೊದಲ ಕೇಶ ವಿನ್ಯಾಸ ಕಾಲೇಜು – “ಶಿವಾಸ್” ಆಗಸ್ಟ್ ನಲ್ಲಿ ಕಾರ್ಯಾರಂಭ

ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂಗೀಕೃತವಾದ ದೇಶದ ಮೊತ್ತ ಮೊದಲ ಕೇಶ ವಿನ್ಯಾಸ ಕಾಲೇಜು ಆಗಸ್ಟ್ ನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶಿವಾ’ಸ್ ಕಾಲೇಜು ಹೆಸರಲ್ಲಿ ಕಾರ್ಯಾರಂಭಗೊಳ್ಳಲಿದೆ. ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಒಂದು ವರ್ಷದ ಡಿಪ್ಲೋಮಾ ಪೂರೈಸಿದ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪ್ರಮಾಣೀಕೃತ ಸರ್ಟಿಫಿಕೇಟ್ ಸಿಗಲಿದೆ. ಬಹು ಬೇಡಿಕೆಯಿರುವ ಕೇಶ ವಿನ್ಯಾಸ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಉದ್ಯೋಗವಕಾಶ ಒದಗಿಸುವ

ಮಂಗಳೂರು : ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಜನಸ್ಪಂದನ ಸಭೆ – ಪ್ರಮುಖ ಸಮಸ್ಯೆಗಳ ಬಗ್ಗೆ ಸಭೆಯ ಮುಂದಿಟ್ಟ ಜನತೆ

ಮಂಗಳೂರಿನ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಜನಸ್ಪಂದನೆ ಸಭೆ ನಡೆಯಿತು. ಮಂಗಳೂರಿನ ಪ್ರಮುಖ ಸಮಸ್ಯೆಗಳ ಬಗ್ಗೆ ಜನರು ಮತ್ತು ಸಂಘಟನೆಗಳ ಪ್ರಮುಖರು ಸಭೆಯ ಮುಂದಿಟ್ಟರು.ಉಪಸಾರಿಗೆ ಆಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೋನ್ ಬಿ, ಮಿಸ್ಥಿತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಯಾವುದೇ ವಿಚಾರದ ದೂರು ಇದ್ದರೆ ಸಾರ್ವಜನಿಕರು ಆರ್‍ಟಿಒ ಕಚೇರಿ ಸಂಪರ್ಕಿಸಿ ದೂರು