Home Posts tagged #mangaluru (Page 8)

ಮಂಗಳೂರು: ‘ಕರ್ನಾಟಕಕ್ಕೆ 50ರ ಸಂಭ್ರಮ’: ಶೃಂಗಾರಗೊಂಡ ಮಂಗಳೂರು ಪಾಲಿಕೆ ಆವರಣ

ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೈವಿಧ್ಯಮಯವಾಗಿ ನಾಡಹಬ್ಬ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದರಂತೆ ಮಂಗಳೂರು ಮಹಾನಗರ ಪಾಲಿಕೆ ಆವರಣ ಕನ್ನಡ ಬಾವುಟದ ಮುಖಾಂತರ ಶೃಂಗಾರಗೊಂಡಿದೆ. ಮಂಗಳೂರು ಪಾಲಿಕೆ ಕಚೇರಿಯ ಮುಖ್ಯ ಪ್ರವೇಶ ದ್ವಾರವನ್ನು ಕನ್ನಡ ಬಾವುಟದಿಂದಲೇ ವಿಶೇಷವಾಗಿ ಅಲಂಕರಿಸಲಾಗಿದೆ. ಪಾಲಿಕೆ

ಮಂಗಳೂರು: ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ: ಡಿ.9ರ ವರೆಗೆ ಹಕ್ಕು-ಆಕ್ಷೇಪಣೆಗೆ ಅವಕಾಶ

ಮಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ ಮಾಡಿದೆ. ಡಿಸೆಂಬರ್ 09ರ ವರೆಗೆ ಹಕ್ಕು – ಆಕ್ಷೇಪಣೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಮತದಾರರ ಪಟ್ಟಿಗೆ ವಿಶೇಷ ನೋಂದಣಿ ಅಭಿಯಾನಕ್ಕೆ ಎರಡು ಶನಿವಾರ ಮತ್ತು ಎರಡು ಭಾನುವಾರ ದಿನ ನಿಗದಿ ಪಡಿಸಿದೆ. ನವೆಂಬರ್ 18 ಮತ್ತು19, ಡಿಸೆಂಬರ್ 2 ಮತ್ತು 3

ವಿದ್ಯುತ್ ಹಾಗೂ ರೈಲ್ವೇ ಖಾಸಗೀಕರಣದ ಮೂಲಕ ದೇಶದ ಸಂಪತ್ತು ಕಾರ್ಪೊರೇಟ್ ಗಳ ಸುಪರ್ದಿಗೆ – ಮೀನಾಕ್ಷಿ ಸುಂದರಂ*

ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯೇರಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಹಾಗೂ ರೈತ ಕಾರ್ಮಿಕ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ.ಎಲ್ಲಾ ಕೈಗಾರಿಕೆಗಳ ತಾಯಿ ಹಾಗೂ ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ

ಮಂಗಳೂರು: ರಾಜ್ಯ ಸರಕಾರದಿಂದ ಶಾಸಕರ ಹಕ್ಕನ್ನು ಕಸಿಯುವ ಯತ್ನ : ನಳಿನ್

ಪ್ರಧಾನಿ ಮೋದಿಯವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸಿಗರು ನೀಡಿದ ಅವಹೇಳನಕಾರಿ ಹೇಳಿಕೆಗಳಿಗೆಲ್ಲಾ ನಾವು ದೂರು ನೀಡುತ್ತಾ ಹೋಗಿದ್ದರೆ ಅವರೆಲ್ಲರ ವಿರುದ್ಧ ಹಲವು ಪ್ರಕರಣಗಳಿರುತ್ತಿದ್ದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೆÇೀಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಕೇಸ್ ಹಾಕಿರುವ ಬಗ್ಗೆ ಅವರು

ಮಂಗಳೂರು: ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ: ಸಿಎಂ ಸಿದ್ದರಾಮಯ್ಯ

ಹಲವು ಸಮಯದಿಂದ ಬಾಕಿ ಇರುವ ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ

ಮಂಗಳೂರು: ಮಂಗಳೂರು ಪಾಲಿಕೆಯಲ್ಲಿ ಮೇಯರ್ ಫೋನ್-ಇನ್ ಕಾರ್ಯಕ್ರಮ: ಹಲವಾರು ಸಮಸ್ಯೆಗಳನ್ನು ಮೇಯರ್ ಗಮನಕ್ಕೆ ತಂದ ಸಾರ್ವಜನಿಕರು

ಮಂಗಳೂರು ಪಾಲಿಕೆ ವ್ಯಾಪ್ತಿಯ 66 ತಳ್ಳುಗಾಡಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲು ನಿರ್ಧರಿಸಿದ್ದು, ನ. 1ರಂದು ವಿತರಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಮಂಗಳೂರು ಪಾಲಿಕೆಯಲ್ಲಿ ನಡೆದ ಸಾರ್ವಜನಿಕ ಫೆÇೀನ್-ಇನ್ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಮೇಯರ್ ಅವರು, ಒಟ್ಟಾರೆ ಸುಮಾರು 900 ಅರ್ಜಿಗಳು ಬಂದಿದ್ದು, ಮೊದಲ ಹಂತದಲ್ಲಿ ಹೊಸತಾಗಿ 66 ಮಂದಿಗೆ ಗುರುತಿನ ಚೀಟಿ ನೀಡುತ್ತೇವೆ. ತಳ್ಳುಗಾಡಿ ಗುರುತಿನ ಚೀಟಿ ಹೊಂದಿದವರು ನಿಂತು

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ

ಕಟೀಲು ದೇವಸ್ಥಾನ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ. ರಾತ್ರಿಯ ಮಹಾಪೂಜೆ ಸಾಯಂಕಾಲ ಆರೂವರೆ ಒಳಗೆ ಮುಗಿಯುತ್ತದೆ. ಗ್ರಹಣದ ಸಮಯ ವಿಶೇಷ ಅಭಿಷೇಕ, ಮಧ್ಯಕಾಲದಲ್ಲಿ ವಿಶೇಷ ಅಭಿಷೇಕ ಇರುತ್ತದೆ. ಗ್ರಹಣ ಸಮಯಕ್ಕೆ ದೇವಿಯ ದರ್ಶನಕ್ಕೆ ತುಪ್ಪ, ಎಣ್ಣೆ ಸಮರ್ಪಣೆಗೆ ಅವಕಾಶ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ

Mangaluru : ಅ.27 ರಿಂದ ಅ.30 – ಬ್ರಾಂಡೆಡ್ ಗಾರ್ಮೆಂಟ್ಸ್ ಪ್ರದರ್ಶನ

ಬ್ರಾಂಡೆಡ್ ರೆಡಿಮೇಡ್ ವಸ್ತ್ರ ಪ್ರಿಯರಿಗೆ ಶುಭ ಸುದ್ದಿ. ನಗರದ ಟಿ.ಎಂ.ಎ ಪೈ ಕನ್ವೆನ್ಷನ್ ಸೆಂಟರ್‍ನಲ್ಲಿ 4 ದಿನಗಳ ಬ್ರಾಂಡೆಡ್ ಗಾರ್ಮೆಂಟ್ಸ್ ಪ್ರದರ್ಶನ ನಡೆಯುತ್ತಿದೆ. ಅ.27 ರಿಂದ ಅ.30ರವರೆಗೆ ಆಯೋಜಿಸಿದ್ದು, ವಿವಿಧ ಶೈಲಿಯ ಬ್ರಾಂಡೆಡ್ ವಸ್ತ್ರಗಳು ಅತೀ ಕಡಿಮೆ ದರದಲ್ಲಿ ಲಭ್ಯವಿದೆ. ನಗರದ ಟಿ.ಎಂ.ಎ ಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಬ್ರಾಂಡೆಡ್ ಗಾರ್ಮೆಂಟ್ಸ್ ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. 4 ದಿನಗಳ ಕಾಲ ನಡೆಯಲಿರುವ ಈ

ಮಂಗಳೂರು: ಖಾಸಗಿ ಬಸ್ ಢಿಕ್ಕಿ: ಒಂದು ಜಾನುವಾರು ಸ್ಥಳದಲ್ಲೇ ಮೃತ್ಯು, ಉಳಿದ ಜಾನುವಾರುಗಳಿಗೆ ಗಾಯ

ಮಂಗಳೂರು: ಕುಂದಾಪುರದಿಂದ ಮೈಸೂರ್-ಮಂಡ್ಯ ತೆರಳುವ ದುರ್ಗಾಂಬಾ ಮೋಟಾರ್ಸ್ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ಯನ್ನು ತಿಳಿಗೊಳಿಸಿದ್ದಾರೆ.

ದಕ್ಷಿಣ ಕನ್ನಡದ ‘ಮರಳು ಸಮಸ್ಯೆಗೆ ಅಧಿಕಾರಿಗಳೇ ಕಾರಣ …!!

ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಮರಳಿನ ಅಭಾವಕ್ಕೆ ಅಧಿಕಾರಿಗಳೆ ಕಾರಣ ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಶನ್ ದ.ಕ.ಜಿಲ್ಲಾ ಸಮಿತಿ ಆರೋಪಿಸಿದೆ. ಈ ಸಮಸ್ಯೆಗೆ 10 ದಿನದೊಳಗೆ ಪರಿಹಾರ ಕಲ್ಪಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್‍ನ ಅಧ್ಯಕ್ಷ ಮಹಾಬಲ ಕೊಟ್ಟಾರಿ ದ.ಕ.ಜಿಲ್ಲೆಯಲ್ಲಿ ಮರಳಿನ ಕೊರತೆಯಿಲ್ಲ ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮರಳಿನ ಸಮಸ್ಯೆ