Home Posts tagged #mangaluru (Page 9)

ನೇಪಾಳ ಮೂಲದ ಬಾಲಕಿ ಆತ್ಮಹತ್ಯೆ

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ., ಪ್ರಾಯೋಜಿತ ಯಕ್ಷ ಶ್ರೀ ರಕ್ಷಾ ಗೌರವ- ವಾರ್ಷಿಕ ವಿಶೇ‍ಷ ಪ್ರಶಸ್ತಿ ಘೋಷಣೆ

ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ (YAKU) ಪ್ರಾಯೋಜಕತ್ವದಲ್ಲಿ ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2023-2024 ನೇ ಸಾಲಿನ ಪ್ರಶಸ್ತಿಗೆ, ಸ್ಥಳೀಯ ಯಕ್ಷಗಾನ ಹಿಮ್ಮೇಳ ಕಲಾವಿದರೂ, ನಮ್ಮ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯ ಸದಸ್ಯರೂ ಆದ ಶ್ರೀಯುತ ವೆಂಕಟೇಶ ಶಾಸ್ತ್ರಿ ಪುತ್ತಿಗೆಯವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ಶ್ರೀಯುತ ವೆಂಕಟೇಶ

ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ’ಸೋಜಾ, ತಾ.ಪಂ.ಸಿಬಂದಿ

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ- ಮರ ಬಿದ್ದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಬಪ್ಪಳಿಗೆಯ ಸಿಂಗಾಣಿಯ ಕಮಲ ಎಂಬaವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ತಕ್ಷಣ

ಹಾಸನ : ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ

ಮಂಗಳೂರು: ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ನಮ್ಮ ಜಿಲ್ಲೆಯಿಂದ ನರೇಂದ್ರ ಮೋದಿಯಂತಹ ವಿಶ್ವ

ಉಳ್ಳಾಲ: ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ: ಸ್ಥಳಕ್ಕೆ ತಹಶೀಲ್ದಾರ್, ಮುಖ್ಯಾಧಿಕಾರಿ, ಎಸಿಪಿ ಭೇಟಿ ಪರಿಶೀಲನೆ

ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾವಣೆಗೊಂಡ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳಕ್ಕೆ ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ತಹಶೀಲ್ದಾರ್ ಪುಟ್ಟರಾಜು, ಎಸಿಪಿ ಧನ್ಯಾ ನಾಯಕ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆನಂದ್ ಅವರು ಠಾಣೆಗೆ ದೂರು

ಕಾಟಿಪಳ್ಳ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ ಕೃಷ್ಣಪ್ಪ ಪೂಜಾರಿ,ಸಂಘದ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಾಧಿಕಾರಿ ಶೈಲೇಶ್ ಕೋಟ್ಯಾನ್, ಭಜನಾ

ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮೂಲ್ಕಿ ನಾರಾಯಣಗುರು ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಯಾದೀಶ್ ಅಮೀನ್ ರವರ ನೇತೃತ್ವದಲ್ಲಿ ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ಫೆಬ್ರವರಿ 10ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ,ಮೂಲ್ಕಿ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ