ಮಂಜೇಶ್ವರ: ಅಂಡರ್ಪಾಸ್ ನಿರ್ಮಿಸಬೇಕೆಂಬ ಜನರ ಬೇಡಿಕೆ ಈಡೇರದಿರುವುದನ್ನು ವಿರೋಧಿಸಿ ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 100ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಹೋರಾಟ ಸಮಿತಿ ಸದಸ್ಯರು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ
ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿ ಯಾವುದೋ ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಕೂಡಾ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ 10-50 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ತ್ರಿಶೂರು ಭಾಗಕ್ಕೆ ಕಾರಿನಲ್ಲಿ ಸಂಚರಿಸುತಿದ್ದ
ಮಂಜೇಶ್ವರ : ಎಟಿಎಂಗೆ ಹಣ ತುಂಬಿಸಲು ಬಂದ ವಾಹನದ ಗಾಜು ಪುಡಿಗೈದು ೫೦ಲಕ್ಷ ರೂ. ದರೋಡೆಗೈದು ತಂಡ ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ. ವಾಹನದ ಗಾಜು ಒಡೆದು ಹಣವಿದ್ದ ಪೆಟ್ಟಿಗೆಯನ್ನು ತೆಗೆದುಕೊಂಡು ತಂಡ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ಉಪ್ಪಳದಲ್ಲಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಹಣ ತುಂಬುತ್ತಿದ್ದಾಗ ಖಾಸಗಿ ಕಂಪನಿಯ ವಾಹನದಲ್ಲಿ ಕಳ್ಳತನ ನಡೆದಿದೆ. ಸ್ಥಳಕ್ಕಾಗಮಿಸಿದ ಉಪ್ಪಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ
ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಸಂಗಡಿ ಸಮೀಪದ ಅಂಗಡಿಪದವು ನಿವಾಸಿ ದಿವಂಗತ ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಸಾವನ್ನಪ್ಪಿದ ದುರ್ದೈವಿ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು, ಬೊಬ್ಬೆ ಕೇಳಿದ ಸ್ಥಳೀಯರು ವಿದ್ಯುತ್ ವಯರ್ ನ್ನು ವಿಚ್ಚೆದಿಸಿ, ಕೂಡಲೇ ಉಪ್ಪಳದ ಖಾಸಗಿ
ಮಂಜೇಶ್ವರದ ರಾಗಂ ಜಂಕ್ಷನಿನಲ್ಲಿ ರಾ.ಹೆದ್ದಾರಿ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದಲ್ಲಿ ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಭಿತ್ತಿ ಪತ್ರ ಎಲ್ಲೆಡೆ ರಾರಾಜಿಸುತ್ತಿರುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ. ಹೆದ್ದಾರಿ ದಾಟಲು ಯಾವುದಾದರೂ ಪರ್ಯಾಯ ವ್ಯವಸ್ಥೆ
ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನರಾದರು. ಮಂಜೇಶ್ವರ ಪಂಚಾಯತ್ನ ವತಿಯಿಂದ ನಡೆದ ಶುಚಿತ್ವ ಮಿಷನ್ನ ಸಭೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿರುವ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಜೇಶ್ವರದ ರಾಜಕೀಯ ವಲಯದಲ್ಲಿ ಬಿ.ವಿ.ರಾಜನ್ ವಿಶೇಷ ವ್ಯಕ್ತಿತ್ವದೊಂದಿಗೆ ಗುರುತಿಸಿದವರು. ಈ ಪ್ರದೇಶದಲ್ಲಿ ಸಿಪಿಐ ಚಳುವಳಿಯಲ್ಲಿ ದಿ.ಕಾಮ್ರೇಡ್ ಡಾ.ಸುಬ್ಬರಾವ್ ರವರ ಕಾಲಘಟ್ಟದಿಂದಲೇ ಮುಂಚೂಣಿಯಲ್ಲಿ
ಮಂಜೇಶ್ವರದ ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಪರ್ಣಾ .ಪಿ ಅವರು ಕೊಲ್ಲಂನಲ್ಲಿ ಜರುಗಿದ ಕೇರಳ ಶಾಲಾ ಕಲೋತ್ಸವದಲ್ಲಿ ಕಥಕ್ಕಳಿ ಸಂಗೀತ ಹುಡುಗಿಯರ ವಿಭಾಗದಲ್ಲಿ, ಇಂಗ್ಲೀಷ್ ಕಥಾರಚನೆಯಲ್ಲಿ ಎ ಗ್ರೇಡ್ ನೊಂದಿಗೆ ಶಾಲೆಗೆ ಹಾಗೂ ಕಾಸರಗೋಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಸತತ ಪ್ರಯತ್ನ, ಕಲಿಯಬೇಕೆಂಬ ಹಠ, ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಲಯಾಳಂ ಕಥಕ್ಕಳಿ ಸಂಗೀತವನ್ನು ನಿರರ್ಗಳವಾಗಿ ಹಾಡಿ
ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21 ರಂದು ತನ್ನ ನಿವಾಸಿಗಳಿಗೆ ಕ್ರಿಸ್ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಸಿಬ್ಬಂದಿ ಮತ್ತು ನಿವಾಸಿಗಳು ಪ್ರದರ್ಶಿಸಿದ ಆಕರ್ಷಕ ಕ್ರಿಸ್ಮಸ್ ಸ್ಕಿಟ್ನೊಂದಿಗೆ ಆಚರಣೆಯು ಪ್ರಾರಂಭವಾಯಿತು. ಕ್ರಿಸ್ಮಸ್ ಕ್ಯಾರೋಲ್ಗಳಿಗೆ
ಮಂಜೇಶ್ವರ : ಅಜ್ಞಾತ ಮಧ್ಯ ವಯಸ್ಕನೊಬ್ಬ ರೈಲ್ವೇ ಹಳಿಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಮಾರು 55 ವರ್ಷ ಪ್ರಾಯವಿರುವ ಈತ ಎರಡು ದಿವಸಕ್ಕೆ ಮೊದಲು ಗಡಿ ಪ್ರದೇಶವಾದ ತಲಪಾಡಿಯಲ್ಲಿ ಮಲಯಾಳ ಭಾಷೆಯಲ್ಲಿ ಮಾನಸಿಕವಾಗಿ ಅಸ್ವಸ್ಥಗೊಂಡ ರೀತಿಯಲ್ಲಿ ಮಾತನಾಡುತ್ತಿದ್ದನೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಈತನ ಕ್ರೆಯಲ್ಲಿ ಮನೋಹರ್ ಎಂದು ಬರೆಯಲಾಗಿದೆ. ಮಾಹಿತಿ ಅರಿತು ಸ್ಥಳಕ್ಕೆ ಸಮಾಜ