Home Posts tagged #manjeshwara (Page 6)

ಮಂಜೇಶ್ವರ : ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಸಂಗ್ರಹ

ಮಂಜೇಶ್ವರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಹಸಿರು ಕರ್ಮ ಸೇನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಶುಲ್ಕವನ್ನು ಪಡೆದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೊಂಡೊಯ್ಯುತ್ತಿರುವುದು ಸ್ಥಳೀಯರಲ್ಲಿ ಅಲ್ಪವಾದರೂ ಸಮಾಧಾನವನ್ನು ಹುಟ್ಟಿಸಿದೆ. ಕೆಲವೊಂದು ಕುಟುಂಬಗಳು ಈಗಲೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು

ಮಂಜೇಶ್ವರ : ತೋಟದ ಕೆಲಸಕ್ಕಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು || A MAN WHO WAS WORKING IN THE GARDEN COLLAPSED AND DIED

ಮಂಜೇಶ್ವರದ ವರ್ಕಾಡಿ ಕುಂಡಡ್ಕ ಎಂಬಲ್ಲಿ ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ತನಿಯ ಎಂಬ ವ್ಯಕ್ತಿ ದಿಢೀರ್ ಅಸೌಖ್ಯಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಜೀರ್ ಪಳ್ಳ ಟೌನ್ ಸೋಶಿಯಲ್ ವರ್ಕ್ ತಂಡದ ಅಧ್ಯಕ್ಷ ಮುಸ್ತಫಾ ಕಡಂಬಾರ್ ರವರ ನೇತೃತ್ವದ ಕಾರ್ಯಕರ್ತರು ವರ್ಕಾಡಿ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದಾರೆ. ಬಳಿಕ ವ್ಯಕ್ತಿಯ ವಿಳಾಸವನ್ನು ಪತ್ತೆ ಹಚ್ಚಿದ ಕಾರ್ಯಕರ್ತರು ಕಾಞಂಗಾಡಿನಲ್ಲಿರುವ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ

ಹೊಸಂಗಡಿ-ವರ್ಕಾಡಿ-ಆನೆಕಲ್ಲು ರಸ್ತೆ ಬದಿ ಅಪಾಯಕಾರಿ ಮರಗಳು

ಮಂಜೇಶ್ವರ: ಹೊಸಂಗಡಿ – ವರ್ಕಾಡಿ – ಆನೆಕಲ್ಲು ರಸ್ತೆಯ ವಿವಿಧ ಕಡೆ ರಸ್ತೆ ಬದಿ ಬೃಹತ್ ಮರಗಳು ಅಪಾಯಕಾರಿ ಸ್ಥಿತಿಯಲ್ಲಿ ಇದ್ದು, ಇನ್ನು ಕೆಲವು ಕೊಂಬೆಗಳು ಮುರಿದು ಬೀಳುವ ಹಂತದಲ್ಲಿವೆ. ಮಳೆಗಾಲ ಆರಂಭಗೊಂಡ ಬಳಿಕ ಈಗಾಗಲೇ ಹಲವಾರು ಅನಾಹುತಗಳು ಸಂಭವಿದೆ. ಇಲಾಖೆ ಈ ಬಗ್ಗೆ ಎಚ್ಚರ ವಹಿಸದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಮಂಜೇಶ್ವರದ ಬಹುತೇಕ ಪ್ರದೇಶಗಳಲ್ಲೂ ಒಣಗಿದ, ರೋಗಗ್ರಸ್ತ ಮತ್ತು ಬೃಹತ್ ಮರಗಳು, ರೆಂಬೆಗಳನ್ನು ಮಳೆಗಾಲಕ್ಕೆ

ಮಂಜೇಶ್ವರ : ನೀರಿನ ಕೊಳಕ್ಕೆ ಬಿದ್ದು ಯುವಕರಿಬ್ಬರು ಮೃತ್ಯು

ಪೆರ್ನಾಳ್ ಹಬ್ಬ ಆಚರಿಸಲೆಂದು ಸಂಬಂಧಿಕರ ಮನೆಗೆ ಬಂದಿದ್ದ ಯುವಕರಿಬ್ಬರು ಮಸೀದಿಯ ಸಮೀಪದ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಕೊಪ್ಪಳದಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಮಜಿಬೈಲ್ ನಿವಾಸಿ ಖಾದರ್ – ನಸೀಮಾ ದಂಪತಿಗಳ ಮಕ್ಕಳಾದ ಅಬ್ದುಲ್ ನಾಝಿಂ (22) ಹಾಗೂ ಮೊಹಮ್ಮದ್ ನವಾ (17) ಮೃತ ದುರ್ದೈವಿಗಳು. ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ಆಸ್ಪತ್ರೆಗೆ

Manjeshwara : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮಂಜೇಶ್ವರ ರಾಗಂ ಜಂಕ್ಷನ್ ಸಮೀಪದ ಕುನ್ನಿಲ್ ಜುಮಾ ಮಸೀದಿ ರಸ್ತೆ ಸಮೀಪದಲ್ಲಿ ವಾಸವಾಗಿರುವ ದಿವಂಗತ ಸಯ್ಯದ್ ಹಾದಿ ತಂಘಲ್ ರವರ ಪುತ್ರ ಹಮೀದ್ ತಂಘಲ್ ಎಂಬವರ ಮನೆಗೆ ಹಿಂಬಾಗದ ಬಾಗಿಲನ್ನು ಮುರಿದು ನುಗ್ಗಿದ ಕಳ್ಳರು ಮನೆಯೊಳಗಿನ ಕಪಾಟನ್ನು ಮುರಿದು 60 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದನ್ನು ಕಳವುಗೈದಿದ್ದಾರೆ.ಹಮೀದ್ ತಂಘಲ್ ರವರು ಎರಡು ದಿವಸಕ್ಕೆ ಮೊದಲು ಕುಟುಂಬ ಸಮೇತರಾಗಿ ಏರ್ವಾಡಿಗೆ ತೆರಳಿದ್ದಾರೆನ್ನಲಾಗಿದೆ. ಗುರುವಾರ ಸಂಜೆ ಮರಳಿ ಬಂದಾಗ ಮನೆಯ

ಮಂಜೇಶ್ವರ : ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋದ ಡಾಮರು

ಮಂಜೇಶ್ವರ ಗ್ರಾಮ ಪಂಚಾಯತ್‍ನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಮಹಾಕಾಳಿ ರಸ್ತೆ, ಕಳಪೆ ಕಾಮಗಾರಿಯಿಂದ ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋಗಿದೆ. ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ವ್ಯಾಪಕ ಆಕ್ರೋಶವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತ್ ಫಂಡ್‍ನಿಂದ 3 ಲಕ್ಷ ರೂ. ಖರ್ಚಿನಲ್ಲಿ ನಿರ್ಮಾಣಗೊಂಡ 120 ಮೀಟರ್ ಅಂತರದ ರಸ್ತೆ ಇದೀಗ ತಿಂಗಳಾಗುವ ಮೊದಲೇ ಕಿತ್ತು ಹೋಗಿದೆ.

ತೂಮಿನಾಡು ; ಬಾವಿ ಕೆಲಸ ಮೊಟಕು ಹಿನ್ನೆಲೆ, ಸ್ಥಳೀಯರ ಆತಂಕ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡು ವ್ಯಾಪ್ತಿಯ ತೂಮಿನಾಡು ಅಂಗನವಾಡಿಯ ಮುಂಭಾಗದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತು ನಿಧಿಯಿಂದ ಮಂಜೂರಾಗಿರುವ ಬಾವಿಯೊಂದರ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡು ಅದನ್ನು ಅರ್ಧದಲ್ಲೇ ಗುತ್ತಿಗೆದಾರ ಬಿಟ್ಟು ಹೋಗಿರುವುದು ಸ್ಥಳೀಯರ ಆತಂಕಗಳಿಗೆ ಕಾರಣವಾಗಿದೆ. ಬಾವಿಯನ್ನು ಅರ್ಧ ಅಗೆದು ಹಾಗೆಯೇ ಬಿಡಲಾಗಿದೆ. ಬಾಯಿ ತೆರೆದು ಕೊಂಡಿರುವ ಈ ಬಾವಿಯಲ್ಲಿ ಈಗ ನೀರಿಲ್ಲದಿದ್ದರೂ ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿರುವ

ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಹೊಡೆತ : ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಡಿಎಂಕೆ

ಮಂಜೇಶ್ವರ : ಕರ್ನಾಟಕದ ವಿಧಾನಸಭಾ ಚುನಾವಣೆ ಫಲಿತಾಂಶ ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಮರೆಯಲಾಗದ ಹೊಡೆತ ನೀಡಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಜನರ ದೈನಂದಿನ ಸಮಸ್ಯೆಗಳಿಗೆ ಕಿವಿಗೊಡದೆ, ಚುನಾವಣಾ ಸಮಯದಲ್ಲಿ ಕರ್ನಾಟಕದ ಮಣ್ಣಿಗೆ ವಕ್ಕರಿಸಿ ವಿವಿಧ ಗಿಮಿಕ್ ಮಾಡಿ, ಜನರ ಭಾವನೆಗಳೊಂದಿಗೆ ಆಟವಾಡುವ ಮೋದಿ,ಅಮಿತ್ ಶಾ, ಯೋಗಿ ಎಂಬ ದ್ವೇಷದ ಮಾರಾಟಗಾರರಿಗೆ ಜನರು ಸರಿಯಾದ ಉತ್ತರ

ಮಂಜೇಶ್ವರದ ಕುಂಡು ಕೊಳಕೆ ಬೀಚ್‍ನಲ್ಲಿ ಸಮ್ಮರ್ ಬೀಚ್ ಉತ್ಸವ : ಮೇ 8ರಂದು ಸಮಾಪ್ತಿ

ಮಂಜೇಶ್ವರ : ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್‍ನಲ್ಲಿ ಆರಂಭಗೊಂಡ ಸೀಸನ್ 3 ಸಮ್ಮರ್ ಬೀಚ್ ಉತ್ಸವದಲ್ಲಿ ಹಿಂದೆಂಂದೂ ಕಾಣದ ವೈವಿಧ್ಯತೆ ಕಂಡು ಬರುತ್ತಿದೆ. ಇನ್ನು ಕೇವಲ 6 ದಿನಗಳು ಮಾತ್ರ ಬಾಕಿ ಉಳಿದಿದ್ದು ಇದೇ ತಿಂಗಳು ಅಂದ್ರೆ ಇದೇ ತಿಂಗಳು ಮೇ 8 ಕ್ಕೆ ಸಮ್ಮರ್ ಫೈಸ್ಟ್ ಸಮಾಪ್ತಿಗೊಳ್ಳಲಿದೆ. ಎ ಎಚ್ ಎಸ್ ತಂಡ ಈ ಸಲದ ಸಮ್ಮರ್ ಫೆಸ್ಟ್ ಗೆ ಉಚಿತ ಪ್ರವೇಶವನ್ನೇ ಊರವರ

ದಿನನಿತ್ಯ ಒಂದೊಂದು ರೀತಿಯ ತೆರಿಗೆ ವಿಧಿಸಿ ಜನರ ಮೇಲೆ ಬರೆ : ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಡಿಎಂಕೆ

ಮಂಜೇಶ್ವರ : ಎಲ್ಲವನ್ನೂ ಸರಿಪಡಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕೇರಳದ ಎಡರಂಗ ಸರಕಾರವು ದಿನನಿತ್ಯ ಒಂದೊಂದು ರೀತಿಯ ತೆರಿಗೆಗಳನ್ನು ಹೇರಿ ಜನತೆಯನ್ನು ಸುಲಿಯುತ್ತಿದ್ದು, ಈ ತುಘಲಕ್ ಸರಕಾರ ತೊಲಗದೆ ಜನತೆ ನೆಮ್ಮದಿ ಕಾಣಲಾರರು ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದರು. ರಾಜ್ಯ ಸರಕಾರದ ತೆರಿಗೆ ಸುಲಿಗೆ ಪ್ರತಿಭಟಿಸಿ ಯುಡಿಎಫ್ ಪೈವಳಿಕೆ ಪಂಚಾಯತ್ ಸಮಿತಿ ಆಶ್ರಯದಲ್ಲಿ ಪೈವಳಿಕೆ ಪಂಚಾಯತ್ ಕಚೇರಿ ಮುಂಭಾಗದಲ್ಲಿ