Home Posts tagged #manjeshwara (Page 7)

ಚುನಾವಣೆ ಹಿನ್ನೆಲೆ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ತೀವ್ರ ತಪಾಸಣೆ

ಮಂಜೇಶ್ವರ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇರಳ ಪೆÇಲೀಸರು ಕೂಡಾ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.ಕರ್ನಾಟಕ ಭಾಗಕ್ಕೆ ವ್ಯಾಪಾರ, ಚಿಕಿತ್ಸೆ, ಶಿಕ್ಷಣ ಪ್ರವೇಶ ಸೇರಿದಂತೆ ವಿವಿದ ಉದ್ದೇಶಗಳಿಗಾಗಿ ಅನೇಕ ಜನರು ಕೇರಳದಿಂದ ಗಡಿ ದಾಟಿರವರು ಮರಳಿ ಬರುವಾಗ ದೊಡ್ಡ

ಮಂಜೇಶ್ವರದಲ್ಲಿ ಸರ್ವೀಸ್ ರೋಡ್, ಅಂಡರ್ ಪಾಸ್ ವ್ಯವಸ್ಥೆ : ಪ್ರಮುಖ ಬೇಡಿಕೆ ಈಡೇರದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಮಂಜೇಶ್ವರ: ರಾಷ್ಟೀಯ ಹೆದ್ದಾರಿ ಎನ್.ಹೆಚ್. 66 ಅಭಿವೃದ್ಧಿಯ ಭಾಗವಾಗಿ ಹಲವೆಡೆ ಅಂಡರ್ ಪಾಸ್, ಸರ್ವಿಸ್ ರೋಡ್‍ನ ವ್ಯವಸ್ಥೆ ನೀಡಲಾಗಿದ್ದರೂ ಕೇರಳದ ಅತಿ ದೊಡ್ಡ ಎರಡನೇ ಚೆಕ್-ಪೋಸ್ಟ್ ಮಂಜೇಶ್ವರಕ್ಕೆ ಸರ್ವಿಸ್ ರೋಡ್ ಆಗಲಿ, ಅಂಡರ್ ಪಾಸ್ ಆಗಲಿ ಯಾವುದನ್ನು ನೀಡದ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟನೆಗೆ ಸಿದ್ದತೆ ನಡೆಸುತಿದ್ದಾರೆ. ಇದರ ಮೊದಲ ಹಂತವಾಗಿ ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರ ಅಧ್ಯಕ್ಷತೆಯಲ್ಲಿ ಊರವರು ಗುರುನರಸಿಂಹ ಮಂಟಪದಲ್ಲಿ ಸಭೆ

ಮಂಜೇಶ್ವರದೆಲ್ಲೆಡೆ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಮಂಜೇಶ್ವರ: ಪವಿತ್ರ ರಂಜಾನಿನ 30 ವೃತ್ತಗಳನ್ನು ಆಚರಿಸಿ ಮಂಜೇಶ್ವರದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರು ಅತ್ಯಂತ ಸಡಗರ ಸಂಭ್ರಮದ ಈದುಲ್ ಫಿತ್ರ್ ಆಚರಿಸಿದರು. ಮಂಜೇಶ್ವರದ ವಿವಿಧ ಮಸೀದಿ, ಈದ್ಗಾ ಗಳಲ್ಲಿ ಸಾಮೂಹಿಕ ನಮಾಜ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಷಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಬೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತರಲಾಯ್ತು. ತೂಮಿನಾಡು ಮಸ್ಜಿದ್ ನೂರ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಗೆ ಅಶ್ಪಾಕ್ ಮಚ್ಚಂಪ್ಪಾಡಿ ಹಾಗೂ

ಉದ್ಯಮಿ ಸದಾಶಿವ ಕೆ. ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ

ಎಪ್ರಿಲ್ 20ರಂದು ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ಮಂಜೇಶ್ವರ ಕೊಡಿಮಾರು ಕುಳೂರಿನ ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಹಾಗೂ ನಾಗದರ್ಶನ ಕಾರ್ಯಕ್ರಮದಲ್ಲಿ ಕೊಡುಗೈ ದಾನಿ ಹಾಗೂ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ಸ್ಥಾಪಕಾಧ್ಯಕ್ಷರಾದ ಉದ್ಯಮಿ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಇವರಿಗೆ ಎಪ್ರಿಲ್ 20 ಗುರುವಾರದಂದು ರಾತ್ರಿ 8 ಗಂಟೆಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ವಿಯಾಗಿ

ಮಂಜೇಶ್ವರ ರೈಲು ನಿಲ್ದಾಣದ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಜೇಶ್ವರಂ ರೈಲು ನಿಲ್ದಾಣದಲ್ಲಿ ಹಳಿ ಮೇಲೆ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಟಿಯಾನ್ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಮಂಜೇಶ್ವರಂ ಪೊಲೀಸ್ ಠಾಣೆ ಅಥವಾ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ಮಂಜೇಶ್ವರಂ ಪೊಲೀಸ್ ಠಾಣೆ ದೂರವಾಣಿ: 9497 928800 SHO (ಮಂಜೇಶ್ವರಂ): 9497 947263 ದೂರವಾಣಿ : 9497 98 O92

ಮಂಜೇಶ್ವರದ ಪಟ್ಟತ್ತಮೊಗರುವಿನಲ್ಲಿ ಮೊಗೇರ ದೈವದ ಪವಾಡ

ಮಂಜೇಶ್ವರದ ಮಿಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಟ್ಟತ್ತಮೊಗರುವಿನಲ್ಲಿ ಮೊಗೇರ ದೈವದ ಪವಾಡ ಕಂಡು ಅಲ್ಲಿನ ಜನತೆ ಅಚ್ಚರಿಗೆ ಒಳಗಾಗಿದ್ದಾರೆ. ಮೊಗೇರ ದೈವಗಳ ವರ್ಷಾವಧಿ ನೇಮೋತ್ಸವ ನಡೆಯುತ್ತದೆ. ಈ ಬಾರಿ ದೈವಗಳ ಭಂಡಾರವನ್ನು ಈ ವರ್ಷದ ಉತ್ಸವಕ್ಕೆಂದು ತೆಗೆದಿಡುವಾಗ, ಕಳೆದ ವರ್ಷ ದೈವದ ಭಂಡಾರಕ್ಕೆ ಅರ್ಪಿಸಿದ ಮಲ್ಲಿಗೆ ಹೂ ವರ್ಷ ಕಳೆದರೂ ಇಂದಿಗೂ ಬಾಡದೆ ಹಾಗೆ ಇರುವುದು ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ಇದು ದೈವದ ಕಾರಣಿಕ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ.

ಮಂಜೇಶ್ವರದ ಮೊರತ್ತಾಣೆ ನಿವಾಸಿ ರೋಹಿತಾಕ್ಷ ನಾಪತ್ತೆ

ಮಂಜೇಶ್ವರದ ಮೊರತ್ತಾಣೆ ನಿವಾಸಿ ಬಾಬು ಬೆಳ್ಚಪ್ಪಾಡ ಎಂಬವರ ಪುತ್ರ ರೋಹಿತಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ. ಮಂಜೇಶ್ವರ ಸಮೀಪದ ದೈಗೋಳಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಎಪ್ರಿಲ್ 4ರಂದು ಕೆಲಸಕ್ಕೆಂದು ಹೋದಾವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಆತನ ಸಹೋದರ ಗಂಗೂ ಮೊರತ್ತಾಣೆ ಅವರು ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ ರೋಹಿತಾಕ್ಷನ ಬಗ್ಗೆ ಸುಳಿವು ಸಿಕ್ಕಲ್ಲಿ

ಕೇಂದ್ರದ ಬಿಜೆಪಿ ಆಡಳಿತದ ಜನವಿರೋಧಿ ನೀತಿಗೆ ಖಂಡನೆ : ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಜೇಶ್ವರ: ಭಾರತದ ಆಯಕಟ್ಟಿನ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಭಾರೀ ಬಂಡವಾಳದ ಕುಳಗಳಾದ ಅದಾನಿ ಮತ್ತು ಅಂಬಾನಿ ಎಂಬ ಆಧುನಿಕ ಕುಬೇರರ ಪಾದಗಳಿಗೆ ಸಮರ್ಪಿಸಿ ದೇಶದ ಆರ್ಥಿಕತೆಯನ್ನು ಪಾತಾಳಕ್ಕಿಳಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಹಿತವನ್ನು ಸಂಪೂರ್ಣವಾಗಿ ಮರೆತಿದೆ. ಜನವಿರೋಧಿ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ತನಕ ಹೋರಾಟ ಮುಂದುವರಿಸಲಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ

ಕುಂಜತ್ತೂರಿನಲ್ಲಿ ನಿರ್ಮಾಣಗೊಂಡ ಅಂಡರ್‍ ಪಾಸ್ ನಿಂದ ಸಂಚರಿಸಲು ತೊಂದರೆ

ಮಂಜೇಶ್ವರ: ಕುಂಜತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಡರ್ ಪಾಸ್ ನಿಂದ ಬುಧವಾರ ಬೆಳಗ್ಗಿನಿಂದ ವಾಹನ ಸಂಚಾರ ಆರಂಭಗೊಂಡಿತು.ಅಂಡರ್ ಪಾಸ್ ನೀಡುವುದಾಗಿ ಅಧಿಕಾರಿಗಳ ಭಾಗದಿಂದ ಹಸಿರು ನಿಶಾನೆ ಲಭಿಸಿದಾಗ ಸ್ಥಳೀಯರು ಅತೀವ ಸಂತೋಷಪಟ್ಟಿದ್ದರೂ ಈ ರೀತಿಯ ಅಂಡರ್ ಪಾಸ್ ಸಿಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲವೆಂಬುದಾಗಿ ಜನರು ಆಡಿಕೊಳ್ಳುತಿದ್ದಾರೆ. ಅಂಡರ್ ಪಾಸ್ ಅಗಲ ಕಿರಿದಾಗಿದ್ದು ಎರಡು ಲಘು ವಾಹನಗಳು ಮುಖಾಮುಖಿಯಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ

ಮಂಜೇಶ್ವರ : ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿರುವ ಪುರಾತನ ಬಾವಿ

ಮಂಜೇಶ್ವರ : ಮಂಜೇಶ್ವರ ಗ್ರಾ.ಪಂ. ನ 17ನೇ ವಾರ್ಡು ವ್ಯಾಪ್ತಿಯಲ್ಲಿರುವ ಪುರಾತನ ಬಾವಿಯೊಂದು ಈಗ ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿದ್ದು ಅವಸಾನದ ಅಂಚಿಗೆ ತಲುಪಿದ್ದರೂ ಈ ಬಾವಿಯ ನೀರನ್ನು ಸಮೀಪದ ಹೋಟೆಲ್, ಬೇಕರಿ, ಜ್ಯೂಸ್ ಅಂಗಡಿ, ಪಾನಿಪುರಿ ಸ್ಟಾಲ್ ಗಳಿಗೆ ವರ್ಷಗಳಿಂದ ಉಪಯೋಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ವರ್ಷಗಳ ಹಿಂದೆ ಪರಿಸರದ ನಾಗರಿಕರ ನೀರಿನ ದಾಹ ತೀರಿಸುತ್ತಿದ್ದ ಬಾವಿಯನ್ನು ಈಗ ಕಸ ಎಸೆಯಲು ಬಳಸುತ್ತಿರುವುದರಿಂದ ಬಾವಿಯ ನೀರು