Home Posts tagged moodabidre (Page 2)

ಮೂಡುಬಿದಿರೆ:ಗಾಳಿ ಮಳೆಗೆ ಮನೆಯ ಗೋಡೆ ಕುಸಿತ : ಅಪಾರ ನಷ್ಟ

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ಬೀಸಿದ ಗಾಳಿ ಮಳೆಗೆ ಕಲ್ಲಬೆಟ್ಟು ಗ್ರಾಮದ ಮಡ್ಲಂಡದ ಹರೀಶ್ ಕುಲಾಲ್ ಅವರ ಮನೆಯ ಗೋಡೆಯು ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ. ಹರೀಶ್ ಅವರು ರಾತ್ರಿ ಮಲಗಿದ್ದ ಸಂದಭ೯ದಲ್ಲಿ ಈ ಘಟನೆ ಸಂಭವಿಸಿದ್ದು ಎರಡು ಕೋಣೆಯ ಗೋಡೆ ಕುಸಿದಿದೆ.ಪುರಸಭಾ ಸದಸ್ಯೆ ಸುಜಾತ ಶಶಿಕಿರಣ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೂಡುಬಿದಿರೆ : ಉಪನ್ಯಾಸಕರಿಬ್ಬರಿಂದ ವಿದ್ಯಾಥಿ೯ನಿಯ ಅತ್ಯಾಚಾರ

ಮೂಡುಬಿದಿರೆ : ಇಲ್ಲಿನ ಕಾಲೇಜೊಂದರ ಕಾಮುಕ ಉಪನ್ಯಾಸಕರಿಬ್ಬರು ಮತ್ತು ಅವರ ಸ್ನೇಹಿತನೋವ೯ ಸೇರಿಕೊಂಡು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳನ್ನೂ ಅಲ್ಲಿನ ಪೊಲೀಸರು ಬಂಧಿಸಿದ್ದಾರೆಂದು ತಿಳಿದು ಬಂದಿದೆ.ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಸ್ನೇಹಿತ ಅನೂಪ್ ಎಂಬವರೇ ಬಂಧಿತ ಆರೋಪಿಗಳು.ಉಪನ್ಯಾಸಕ ನರೇಂದ್ರ ನೋಟ್ಸ್

ಪ್ರೊ.ಎನ್.ಟಿ ಭಟ್, ಪ್ರೊ.ಬರಗೂರು, ನಾಗತಿಹಳ್ಳಿಗೆ ಶಿವರಾಮ ಕಾರಂತ ಪ್ರಶಸ್ತಿ

ಮೂಡುಬಿದಿರೆ: ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ಶಿವರಾಮ ಕಾರಂತ ಪ್ರಶಸ್ತಿಗೆ ಸಾಹಿತಿಗಳಾದ ಪ್ರೊ.ಎನ್.ಟಿ ಭಟ್, ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.

ಕರಾವಳಿ ಸಹಿತ 3 ಜಿಲ್ಲೆಗಳಲ್ಲಿ ಭಾರೀ ಮಳೆ:ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ  ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು

ವಾಲ್ಪಾಡಿ : ಶುಕ್ರವಾರ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆಯ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಮೇಲಕ್ಕೆತ್ತಿದ್ದಾರೆ. ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ ಹಲಗೆಯನ್ನು ತೆಗೆಯಲೆಂದು ಗುರುಪ್ರಸಾದ್ ಅವರು ಕೆಳಗಿಳಿಯುತ್ತಿದ್ದ ಸಂದಭ೯ದಲ್ಲಿ ಕಾಲು ಜಾರಿ ನೀರಿಗೆ

ಮಂಗಳೂರು ವಿ. ವಿ. ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾಗಿ ಯೋಗೀಶ್ ಕೈರೋಡಿ ಆರಂಬೋಡಿ ಆಯ್ಕೆ

ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ‌ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಎಸ್ ಎಸ್ ಎಲ್ಸಿ ಪರೀಕ್ಷೆ : ಕಲ್ಲಬೆಟ್ಟು ಮೊರಾಜಿ೯ ದೇಸಾಯಿಗೆ ಶೇ 100 ಫಲಿತಾಂಶ

ಮೂಡುಬಿದಿರೆ : ದ. ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸತತವಾಗಿ ಶಾಲೆಗೆ ಶೇ. 100 ಫಲಿತಾಂಶವನ್ನು ನೀಡಿರುತ್ತಾರೆ. 43 ವಿದ್ಯಾರ್ಥಿಗಳಲ್ಲಿ 25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 01

ಮೂಡುಬಿದಿರೆ : ಕಸಾಯಿಖಾನೆಗೆ ಒಯ್ಯಲು ಗುಡ್ಡದಲ್ಲಿ ಕಟ್ಟಿ ಹಾಕಿದ್ದ ಗೋವುಗಳ ರಕ್ಷಣೆ

ಮೂಡುಬಿದಿರೆ : ಎಲ್ಲಿಂದಲೋ ಎರಡು ಗೋವುಗಳನ್ನು ಕದ್ದು ತಂದು ಕಸಾಯಿ ಖಾನೆಗೆ ಒಯ್ಯಲು ತೋಡಾರು ಗ್ರಾಮದ ಬಂಗಬೆಟ್ಟು ಶಾಲೆಯ ಹಿಂಭಾಗದ ಗುಡ್ಡದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವ ದನಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ರಕ್ಷಿಸಿ ಗೋಶಾಲೆಗೆ ಸಾಗಿಸಿದ್ದಾರೆ. ಕಸಾಯಿಖಾನೆಗೆ ಒಯ್ಯಲು ಗೋವುಗಳನ್ನು ಗುಡ್ಡದಲ್ಲಿ ಕಟ್ಟಿ ಹಾಕಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾಯ೯ಕತ೯ರು ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ಸುಮಾರು 6 ಗಂಟೆಗೆ ಸ್ಥಳಕ್ಕೆ ತೆರಳಿ ಎರಡು

ಆಳ್ವಾಸ್ ಕಾಲೇಜಿಗೆ ‘ಸ್ವಾಯತ್ತ’ ಗರಿ: ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಜಾರಿ ಪ್ರಸ್ತುತ ಉದ್ಯಮ ಹಾಗೂ ಕೌಶಲ ಆಧರಿತ ಕೋರ್ಸುಗಳು

ಮೂಡುಬಿದಿರೆ : ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ ಅನುಷ್ಠಾನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಅಖಿಲ ಭಾರತ ಅಂತರ ವಿವಿ ಪುರುಷರ ಖೋ ಖೋ ಪಂದ್ಯಾಟ- ಆಳ್ವಾಸ್ ವಿದ್ಯಾರ್ಥಿಗಳನ್ನು ಒಳಗೊಂಡ ಮಂಗಳೂರು ವಿವಿ ತಂಡ ಚಾಂಪಿಯನ್ಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿಷಗಳ ಅಂತರದಿAದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು