Home Posts tagged #moodabidre (Page 18)

ಕಬಕ ಪ್ರಕರಣ: ಮೂಲ್ಕಿ-ಮೂಡುಬಿದಿರೆ ಬಿಜೆಪಿ ಖಂಡನೆ

ಮೂಡುಬಿದಿರೆ: ಪುತ್ತೂರಿನ ಕಬಕದಲ್ಲಿ ನಡೆದ ಪ್ರಕರಣವನ್ನು ಮೂಲ್ಕಿ ಮೂಡುಬಿದಿರೆ ಮಂಡಲ ಬಿಜೆಪಿ ಖಂಡಿಸಿದೆ. ಮಂಡಲ ಅಧ್ಯಕ್ಷ ಸುನೀಲ್ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾವರ್ಕರ್ ಬಗ್ಗೆ ವಿವಾದ ಎಬ್ಬಿಸಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗ ಸಂಘಟನೆಗಳ ನಿಷೇಧಕ್ಕಾಗಿ ಮತ್ತು ಕಬಕ ಪ್ರಕರಣದಲ್ಲಿ ತಪ್ಪಿತಸ್ಥರಿಗೆ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ : ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿ ಗಣೇಶ್ ಹನುಮಂತಪ್ಪ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ ಪ್ರೌಢಶಾಲೆಯಿಂದ 499 ಮಂದಿ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. 13 ಮಂದಿ ವಿದ್ಯಾರ್ಥಿಗಳು 620ಕ್ಕಿಂತ

ಮೂಡುಬಿದಿರೆ: ರಂಗಸ್ಥಳದಲ್ಲಿ ಕುಸಿದುಬಿದ್ದ ಕಲಾವಿದ

ಮೂಡುಬಿದಿರೆಯ ಅಲಂಗಾರಿನಲ್ಲಿ ಸೋಮವಾರ ರಾತ್ರಿ ನಡೆದ ಯಕ್ಷಗಾನದ ವೇಳೆ ಕಲಾವಿದರೊಬ್ಬರು ಕುಸಿದು ಬಿದ್ದಿದ್ದು, ಕೆಲವು ನಿಮಿಷಗಳ ಬಳಿಕ ಚೇತರಿಸಿಕೊಂಡು ಬಳಿಕ ರಂಗಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ. ಅಲಂಗಾರು ಶ್ರೀಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕರ್ಣಪರ್ವ ಪ್ರಸಂಗದಲ್ಲಿ ಖ್ಯಾತ ಕಲಾವಿದ ಮೋಹನ ಅಮ್ಮುಂಜೆ ಅವರು ಪಾತ್ರಧಾರಿಯಾಗಿದ್ದರು. ಈ ಸಂದರ್ಭ ಅತೀವ ಬಳಲಿಕೆಯಿಂದ ಅವರು ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದು, 15 ನಿಮಿಷಗಳ ಕಾಲ ಯಕ್ಷಗಾನವನ್ನು

ನಿವೃತ್ತ ವೀರಯೋಧ ಲಾರೆನ್ಸ್ ಡಿಸೋಜ ನಿಧನ: ನಿವೃತ್ತ ಸೈನಿಕರ ಸಂಘದಿಂದ ಅಂತಿಮ ಗೌರವ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ ಹೊದಿಸಿ ಸರ್ಕಾರಿ ಸಮಾನ ಗೌರವ ಅರ್ಪಿಸಲಾಯಿತು. ಮೃತ ಯೋಧ ಲಾರೆನ್ಸ್ ಡಿಸೋಜರವರು ಭಾರತೀಯ ಭೂಸೇನೆಯಲ್ಲಿ ಸುಮಾರು ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರ, ಅಲಹಾಬಾದ್ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದರು. ೯೮

ಮೂಡುಬಿದಿರೆ ಪುರಸಭಾ ಅಧಿವೇಶನ : ಎಸ್‍ಎಫ್‍ಸಿ ನಿಧಿ ಕಾಮಗಾರಿ ಟೆಂಡರ್ ತಡೆ ಹಿಡಿಯಲು ಆಗ್ರಹ

 ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ ನೀಡುವಿಕೆಯಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್‌ಗೆ ಅನುಮೋದನೆಯನ್ನು

ಕಂಬಳದ ದಾಖಲೆಯ ಓಟಗಾರನಿಗೆ ನಿಂದನೆ: ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಕಂಬಳಾಭಿಮಾನಿಗಳಿಂದ ಮನವಿ

ಮೂಡುಬಿದಿರೆ : ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ” ಕರ್ನಾಟಕ ಕ್ರೀಡಾರತ್ನ” ಪ್ರಶಸ್ತಿಯನ್ನು ಪಡೆದಿರುವ, ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡ ಅವರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಆರೋಪಿಯ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಶಾಸಕ

ಸ್ಟ್ಯಾನ್ ಸ್ವಾಮಿಗೆ ನ್ಯಾಯ ಒದಗಿಸುವಂತೆ ವಿನೋದ್ ವಾಲ್ಟರ್ ಪಿಂಟೊ ಒತ್ತಾಯ

ಮೂಡುಬಿದಿರೆ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಸೇರಿ ಕಾನೂನು ಹೋರಾಟ ನಡೆಸುತ್ತಿರುವಾಗಲೇ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟ ಧರ್ಮಗುರು, ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರಿಗೆ ಇನ್ನಾದರು ಸರ್ಕಾರ ನ್ಯಾಯ ಒದಗಿಸಬೇಕೆಂದು ವಿನೋದ್ ವಾಲ್ಟರ್ ಪಿಂಟೊ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರ ಆರೋಪವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಾದ್ಯವಾಗಿಲ್ಲ. ತೀವ್ರ

ಮೂಡುಬಿದಿರೆಯಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ

ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಒಂಟಿಕಟ್ಟೆಯ ಕಡಲ ಕೆರೆ ನಿಸರ್ಗಧಾಮದ ಸಾಲುಮರ ತಿಮ್ಮಕ್ಕ ಸಸ್ಯೋದ್ಯಾನವನ ಆವರಣದಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನವನ್ನು ಶುಕ್ರವಾರ ಸಾಯಂಕಾಲ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪರಿಸರವನ್ನು ನಾವು ಸಂರಕ್ಷಿಸಿದಲ್ಲಿ

ಮೂಡುಬಿದರೆಯಲ್ಲಿ ಎರಡು ತಿಂಗಳ ಬಳಿಕ ಬಸ್ ಸಂಚಾರ

ಎರಡು ತಿಂಗಳ ಲಾಕ್ ಡೌನ್ ಮುಗಿದು ಮೂಡುಬಿದಿರೆಯಲ್ಲಿ ಸೋಮವಾರದಂದು ಶೇ ೫೦ರಷ್ಟು ಖಾಸಗಿ ಬಸ್ಸುಗಳು ರಸ್ತೆಗಿಳಿದು ಓಡಾಟ ಆರಂಭಿಸಿದವು.ಖಾಸಗಿ ಬಸ್ಸುಗಳು ರಸ್ತೆಗಿಳಿದುದರಿಂದ ಜನರು ತಾವು ಹೋಗಬೇಕಾದ ಸ್ಥಳಗಳಿಗೆ ಬೆಳಗಿನಿಂದಲೇ ಬಸ್ಸುಗಳನ್ನು ಆಶ್ರಯಿಸಿದರು. ಲಾಕ್ ಡೌನ್ ಸಂದರ್ಭದಲ್ಲಿ ಖಾಸಗಿ ಬಸ್ಸು ತಂಗುದಾಣದ ಆವರಣದಲ್ಲಿ ಇತರ ವಾಹನಗಳು ಬಂದು ನಿಲ್ಲುತ್ತಿದ್ದವು. ಅದರಂತೆ ಸೋಮವಾರವು ಕೂಡಾ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಬಸ್ಸು ನಿಲ್ದಾಣದ

ಲಾಕ್ ಡೌನ್ ನಿಯಮ ಉಲ್ಲಂಘನೆ : 31 ವಾಹನಗಳ ಜಫ್ತಿ, 70 ಕೇಸು ದಾಖಲು

ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ ಮಾಸ್ಕ್ ಧರಿಸದಿದ್ದ 70 ಜನರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಯ ಸಂದರ್ಭ ಬೆಳಿಗ್ಗೆ ಮೂಡುಬಿದಿರೆಯ ಪೇಟೆಯಲ್ಲಿ ಮತ್ತು