Home Posts tagged #moodabidre (Page 3)

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ

ಮೂಡುಬಿದಿರೆ: ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ

ಮೂಡುಬಿದಿರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅಗತ್ಯವಾಗಿ ಬೇಕು. ಪಿಡಿಗಳು ಅಗತ್ಯವಾಗಿ ಬೇಕು. ಸಮಸ್ಯೆಗಳು ಎಲ್ಲಾ ಕಡೆಗಳಲ್ಲೂ ಇರುತ್ತವೆ ಆದರೆ ಶಿಕ್ಷಕರು ಶಾಲೆಗಳಿಗೆ ಬರುವಾಗ ಟೆನ್ಷನ್ ನಲ್ಲಿ ಬರಬೇಡಿ. ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದರೆ ದೈಹಿಕ ಶಿಕ್ಷಕರ ಒತ್ತಡ ಕಡಿಮೆಯಾಗಲಿದೆ. ಇದರಿಂದ ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿದಂತ್ತಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಅವರು ರಾಜ್ಯ ದೈಹಿಕ ಶಿಕ್ಷಣ

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂಚಾಯತ್: ಸಿಪಿಐಎಂ ಬೆಂಬಲಿತೆ ರಾಧ ಅಧ್ಯಕ್ಷೆ, ಬಿಜೆಪಿಯ ಬೆಂಬಲಿತ ದಯಾನಂದ ಉಪಾಧ್ಯಕ್ಷರಾಗಿ ಆಯ್ಕೆ

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂಚಾಯತ್ ನಲ್ಲಿ ಗುರುವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಸದಸ್ಯನೋರ್ವ ಅಡ್ಡ ಮತದಾನದ ಮಾಡಿದ ಪರಿಣಾಮವಾಗಿ ಸಿಪಿಐಎಂ ಬೆಂಬಲಿತ ಸದಸ್ಯೆ ರಾಧಾ ಅವರು ಅಧ್ಯಕ್ಷೆಯಾಗಿ ಹಾಗೂ 11 ಜನ ಸದಸ್ಯರ ಬೆಂಬಲವಿರುವ ಬಿಜೆಪಿಯ ದಯಾನಂದ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸಿಪಿಐಎಂ ಬೆಂಬಲಿತೆ ರಾಧಾ ಅವರು ಪುತ್ತಿಗೆ ಪಂಚಾಯತ್ ನಲ್ಲಿ ಸಿಪಿಐಎಂನ ಓರ್ವರೇ ಸದಸ್ಯರಾಗಿದ್ದು, 11

ಮೂಡುಬಿದಿರೆ : ಕನ್ನಡ ಭಾಷಾ ಬೋಧಕರಿಗೆ ಕಾರ್ಯಾಗಾರ

ಶಿಕ್ಷಕರಿಗೆ ಕನ್ನಡ ಸಾಹಿತ್ಯ ಚರಿತ್ರೆ, ಭಾರತದ ಎಲ್ಲ ಮತಧರ್ಮಗಳು, ಸಾಹಿತ್ಯ, ಸಂಗೀತಾದಿ ಸಾಂಸ್ಕೃತಿಕ ಪರಿಚಯ ಒಂದಿಷ್ಟು ಇರಬೇಕಾಗಿದೆ; ಶರೀರ ಭಾಷೆಯನ್ನೂ ಬೋಧನೆಯ ಮಾಧ್ಯಮವಾಗಿ ಬಳಸುವ, ನೋಟ್ಸ್ ಕೊಡದೆ ಸ್ವಂತಿಕೆ ಬೆಳೆಸುವ, ಪಾಠ ಬಿಟ್ಟು ಅನ್ಯ ಲೇಖನಗಳ ಕಾಪಿ ಬರೆಸುವ, ಉಚ್ಚಾರ ಹೇಳಿಕೊಡುವ, ಪಾಠವನ್ನು ವಿಷಯದ ದೃಷ್ಟಿಗಿಂತಲೂ ಭಾಷೆಯ ದೃಷ್ಟಿಯಿಂದ ನೋಡುವ , ಕಲಿಸುವ ಸಾಮರ್ಥ್ಯವನ್ನು ಹೊಂದಿರಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ

ಕಲ್ಲಬೆಟ್ಟುವಿನಲ್ಲಿ ಶಾಲಾ ಔಷಧಿ ವನದ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ ಸಹಯೋಗದಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ‘ಶಾಲಾ ಔಷಧಿ ವನ’ವನ್ನು ಸಸ್ಯಗಳ ನಾಟಿ ಮೂಲಕ ಉದ್ಘಾಟಿಸಲಾಯಿತು. ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಹಾಗೂ ಸುರೇಶ್ ಕೋಟ್ಯಾನ್ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ದ್ರವ್ಯಗುಣ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಸುಬ್ರಹ್ಮಣ್ಯ

ದಕ್ಷಿಣ ಕೊರಿಯಾ ಜಾಂಬೂರಿಯಲ್ಲಿ ಮೇಳೈಸಿದ ಯಕ್ಷಗಾನ, ಹುಲಿವೇಷ

ಅಂತರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ವತಿಯಿಂದ ದಕ್ಷಿಣ ಕೊರಿಯಾದ ಸಿಮನ್ ಗಾಮ್ ದ್ವೀಪದಲ್ಲಿ ನಡೆಯುತ್ತಿರುವ ವಿಶ್ವ ಜಾಂಬೂರಿಯಲ್ಲಿ ಮಂಗಳವಾರ ದ.ಕ ಜಿಲ್ಲೆಯ 25 ವಿದ್ಯಾರ್ಥಿಗಳ ತಂಡ ಕರಾವಳಿಯ ಯಕ್ಷಗಾನ ಹಾಗೂ ಹುಲಿವೇಷ ಪ್ರದರ್ಶನವನ್ನು ನೀಡುವ ಮೂಲಕ ಜನಮನ ಗೆದ್ದಿದೆ ಅಲ್ಲದೆ ಭರತನಾಟ್ಯ, ಕೇರಳದ ಮೋಹಿನಿಯಾಟ್ಯಂ, ಒರಿಸ್ಸಾದ ಒಡಿಸ್ಸಿ, ಗುಜರಾತ್‍ನ ಬಾಂಗ್ಡಾ, ರಾಜಸ್ಥಾನದ ಗಾರ್ಭಾ ನೃತ್ಯ, ಮಣಿಪುರದ ಸ್ಟಿಕ್ ಡ್ಯಾನ್ಸ್ ಸೊಬಗನ್ನು ಕಂಡು ವಿದೇಶೀಯರು

ಮೂಡುಬಿದಿರೆಯ ಅಮರಶ್ರೀ ಟಾಕೀಸಿಗೆ ಬೀಗಮುದ್ರೆ

ಮೂಡುಬಿದಿರೆ: ಕಳೆದ 40 ವರ್ಷಗಳಿಂದ ಕಾರ್ಯಚರಿಸುತ್ತಾ ಜನರಿಗೆ ಸದಭಿರುಚಿಯ ಸಿನೆಮಾಗಳನ್ನು ನೀಡಿ ರಂಜಿಸುತ್ತಿದ್ದ ಮೂಡುಬಿದಿರೆಯ ಅಮರಶ್ರೀ ಚಿತ್ರಮಂದಿರಕ್ಕೆ ಬೀಗಮುದ್ರೆ ಬಿದ್ದಿದೆ. ಮಾಜಿ ಸಚಿವ ದಿ.ಕೆ.ಅಮರನಾಥ ಶೆಟ್ಟಿ ಅವರ ಮಗಳು ಅಮರಶ್ರೀ ಅವರ ಹೆಸರಿನಲ್ಲಿರುವ ಈ ಸಿನೆಮಾ ಮಂದಿರವನ್ನು ಕಳೆದ 10 ವರ್ಷಗಳಿಂದ ಕಾರ್ಕಳದ ಜೆರಾಲ್ಡ್ ಕುಟಿನ್ಹಾ ಅವರು ನಡೆಸುತ್ತಿದ್ದರು. ಕಳೆದ 2021ಕ್ಕೆ ಪರವಾನಿಗೆಯ ಅವಧಿಯು ಮುಕ್ತಾಯಗೊಂಡಿರುತ್ತದೆ. ನಂತರ ನವೀಕರಣಗೊಳಿಸದೆ

ಮೂಡುಬಿದರೆಯಲ್ಲಿ ಬೀಡಿ ಕಾರ್ಮಿಕರಿಂದ ಪ್ರತಿಭಟನೆ

ಮೂಡುಬಿದಿರೆ: ಬೀಡಿ ಕಾರ್ಮಿಕರಿಗೆ 2015ರಿಂದ 2018ರ ತನಕ ಮೂರು ವರ್ಷಗಳ ಬಾಕಿ ಇರುವ ತುಟ್ಟಿ ಭತ್ತೆ ಮೊತ್ತವನ್ನು ನೀಡಲು ಒತ್ತಾಯಿಸಿ ಮತ್ತು 2018ರಿಂದ ಬೀಡಿ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ಕೂಲಿ ಪಾವತಿಗಾಗಿ ಆಗ್ರಹಿಸಿ ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್, ಮೂಡುಬಿದಿರೆ ಡಿಪೆÇೀ ಬಳಿ ಪ್ರತಿಭಟನೆ ನಡೆಸಿದರು. ಬೀಡಿ ಫೆಡರೇಶನ್ ನ ಜಿಲ್ಲಾಧ್ಯಕ್ಷ ವಸಂತ ಆಚಾರಿ ಪ್ತತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬೀಡಿ

ಬುಲ್ಲರ್ ಇಂಡಿಯಾ ಜೊತೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಪ್ಪಂದ

ಮೂಡುಬಿದಿರೆ: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಒಡಂಬಡಿಕೆಗೆ ಸಹಿ ಹಾಕಿತು. ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ ಹಾಗೂ ಕಂಪೆನಿಯ ವೆಂಕಟೇಶ್ ಮತ್ತು ರವೀಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃಷಿ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಶಶಿಕುಮಾರ್, ಮೆಕ್ಯಾನಿಕಲ್

ಮೂಡುಬಿದರೆ : 60ನೇ ಶ್ರೀ ಸಾರ್ವಜನಿಕ ಗಣೇಶೋತ್ಸವ : ಡಾ.ಎಂ. ಮೋಹನ್ ಅಳ್ವಾರಿಂದ ಲೋಗೋ ಅನಾವರಣ

ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಲೋಗೋ ಅನಾವರಣಗೊಳಿಸಿ ಮಾತನಾಡಿ ಮೂಡುಬಿದಿರೆಯು ಹಲವು ವಿಚಾರಗಳಲ್ಲಿ ಸಾಧನೆ ಮಾಡಿದೆ. ಇಲ್ಲಿನ ಸಾರ್ವಜನಿಕ ಗಣೇಶೋತ್ಸವಕ್ಕೆ ಅದರದ್ದೇ ಆದ