Home Posts tagged #moodabidre (Page 5)

ಪಣಪಿಲದಲ್ಲಿ ಮತ್ಸ್ಯ ಮಿಲನ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ: ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ ವತಿಯಿಂದ ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ “ಮತ್ಸ್ಯ ಮಿಲನ” ಪಣಪಿಲ

ಇರುವೈಲು ಗ್ರಾ.ಪಂ.ನ ಪುದ್ದರಕೋಡಿಯಲ್ಲಿ ಅಪಾಯಕಾರಿ ಕಾಲು ಸಂಕ

ಮೂಡುಬಿದಿರೆ : ಅಡಿಕೆ ಮರವನ್ನು ಬಳಸಿ ನಿರ್ಮಿಸಿರುವ ಅಪಾಯಕಾರಿ ಕಾಲು ಸಂಕದಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಸಹಿತ ಸಾರ್ವಜನಿಕರು ಜೀವ ಭಯದಿಂದ ಸಂಚರಿಸಬೇಕಾದ ಪರಿಸ್ಥಿತಿ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ ವ್ಯಾಪ್ತಿಯ ತೋಡಾರು ಗ್ರಾಮದ ಪುದ್ದರಕೋಡಿ ಜಯ ಶೆಟ್ಟಿ ಎಂಬವರ ಮನೆ ಬಳಿ ಎದುರಾಗಿದೆ. ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದ ಕಾಲು ಸಂಕವು ಕಳೆದ ವರ್ಷ ಮನೆಯ ರಭಸಕ್ಕೆ ಕುಸಿದು ಹೋಗಿತ್ತು. ಆಗ ಅಡಿಕೆ ಮರಗಳನ್ನು ಬಳಸಿ ತಾತ್ಕಾಲಿಕ

ಪುತ್ತಿಗೆ ಕಾಯರ್ ಪುಂಡ್‍ನಲ್ಲಿ ಜಲಾವೃತ : ಸಾರ್ವಜನಿಕರ ದೂರಿಗೆ ಎಚ್ಚೆತ್ತುಕೊಂಡ ಪಂಚಾಯತ್

ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆಯಲ್ಲಿ ತುಂಬಿಕೊಂಡು ತೋಟಗಳಲ್ಲಿ ತುಂಬಿಕೊಂಡಿತ್ತು. ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪುತ್ತಿಗೆ ಪಂಚಾಯತ್ ತಕ್ಷಣ ಎಚ್ಚೆತ್ತುಕೊಂಡಿದೆ.ಪಂಚಾಯತ್ ಅಭಿವೃದ್ಧಿ

ಮೂಡುಬಿದಿರೆ: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ (21ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ‌ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಮೂಡುಬಿದಿರೆಯ ಸೋನಾಲ್

ಮೂಡುಬಿದಿರೆ: ಇಲ್ಲಿನ ಉದ್ಯಮಿ ಶಂಕರ್ ಎ. ಕೋಟ್ಯಾನ್ – ಜೀವಿತಾ ಶಂಕರ್ ದಂಪತಿಯ ಪುತ್ರಿಯಾಗಿರುವ ಸೋನಲ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಕೂದಲು ಇರುವುದಿಲ್ಲ ಎಂಬುದನ್ನು ತಿಳಿದುಕೊಂಡಿದ್ದ ಸೋನಲ್ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು ವರ್ಷದಿಂದ ಕನಸು ಕಂಡಿದ್ದಳು. ಇದೀಗ ಬೆಂಗಳೂರಿನಲ್ಲಿ ಕ್ಯಾನ್ಸರ್ ಪೀಡಿತರ ನೆರವಿಗಿರುವ ಸಂಸ್ಥೆಯೊಂದಕ್ಕೆ

ಮೂಡುಬಿದಿರೆಯಲ್ಲಿ ” ರೈತ-ವಿಜ್ಞಾನಿ” ಸಂವಾದ

ಭಾರತೀಯ ಕಿಸಾನ್ ಸಂಘ (ರಿ.) ಮೂಡುಬಿದಿರೆ ತಾಲೂಕು ಮತ್ತು ತೋಟಗಾರಿಕಾ ಇಲಾಖೆ ಇವುಗಳ  ಜಂಟಿ ಆಶ್ರಯದಲ್ಲಿ ತೋಟಗಾರಿಕಾ ಕೃಷಿಯಲ್ಲಿ ಮಳೆಗಾಲದ ಸಮಸ್ಯೆಗಳ ಕುರಿತು “ರೈತ – ವಿಜ್ಞಾನಿ ಸಂವಾದ ಕಾರ್ಯಕ್ರಮವು ಶ್ಯಾಮಿಲಿ ಎನ್ಕ್ಲೈವ್ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಕಿಸಾನ್ ಸಂಘ(ರಿ) ಕರ್ನಾಟಕ ದಕ್ಷಿಣ ಪ್ರಾಂತದ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವಿಶೇಷ ಆಹ್ವಾನಿತರಾಗಿ ಶಾಸಕ ಉಮಾನಾಥ

ಮೂಡುಬಿದಿರೆ : ಮುರುಕು ಮನೆಯಲ್ಲಿ ಜೀವಿಸುತ್ತಿರುವ ಅಸಹಾಯಕ ಕುಟುಂಬಕ್ಕೆ ಬೇಕಾಗಿದೆ ನೆರವು

ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ ಸ್ಥಿತಿಯಲ್ಲಿ ಇರುವೈಲಿನಲ್ಲೊಂದು ಅಸಹಾಯಕ ಕುಟುಂಬವು ಇಂದೋ, ನಾಳೆಯೋ ಬಿದ್ದು ಹೋಗಲಿರುವ ಮನೆಯಲ್ಲಿ ಜೀವನ

ಮೂಡುಬಿದಿರೆ : ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ರೈತಸೇನೆ ಒತ್ತಾಯ

ಮೂಡುಬಿದಿರೆ:ತಾಲೂಕಿನಲ್ಲಿ “ ಬಡವರು, ವಿದ್ಯಾರ್ಥಿಗಳು, ದುಡಿಯುವ ವರ್ಗದವರ ಹಸಿವು ನೀಗಿಸಲು ಕರ್ನಾಟಕ ಸರಕಾರ ಜಾರಿಗೆ ತಂದಿರುವ “ಇಂದಿರಾ ಕ್ಯಾಂಟೀನ್” ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆರಂಬಿಸುವಂತೆ ದ.ಕ ಜಿಲ್ಲಾ ಭಾರತೀಯ ರೈತ ಸೇನೆ ಒತ್ತಾಯಿಸಿ ಸಭಾಪತಿ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಆಡಳಿತ ಸೌಧದ ಎದುರಿನಲ್ಲಿರುವ ಹಳೆಯ ತಾಲೂಕು ಕಚೇರಿಯ ಪಡಸಾಲೆಯು ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ

ಮೂಡುಬಿದರೆ : ಅಕ್ರಮ ಗೋವು ಸಾಗಾಟ – ಮೂರು ಗೋವುಗಳ ರಕ್ಷಣೆ

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಹಿಡಿದಿದ್ದಾರೆ. ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.

ಮೂಡುಬಿದರೆ : ಬಡ ಕುಟುಂಬಕ್ಕೆ ಆಸರೆಯಾದ ಪವರ್ ಫ್ರೆಂಡ್ಸ್

ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ ಕುಮಾರ್ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಲ್ಲಾಡಿಯ ನೋಣಯ್ಯ ಪರವ ಎಂಬವರ ಬಡ ಕುಟುಂಬವು ಸಣ್ಣದಾದ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದನ್ನು ಮನಗಂಡು ಪವರ್