Home Posts tagged #moodabidre (Page 7)

ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನಕ್ಕೆ ಉಮಾನಾಥ್ ಕೋಟ್ಯಾನ್ ಭೇಟಿ

ಮೂಡುಬಿದಿರೆಯ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶ್ರೀ ದೇವಸ್ಥಾನದ ಅಷ್ಟೊತ್ತರ ಶತಮಾನೋತ್ಸವ, ಗೋಶಾಲೆ ಉದ್ಘಾಟನೆ, ಶ್ರೀಗುರುಭವನದ ಶಿಲಾನ್ಯಾಸ ಹಾಗೂ ಶ್ರೀ ಶತಚಂಡಿಕಾ ಹವನದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ

“5 ವರ್ಷಗಳ ಕ್ಷೇತ್ರದ ಅಭಿವೃದ್ಧಿಯೇ ನನಗೆ ಶ್ರೀರಕ್ಷೆ” : ಉಮಾನಾಥ್ ಕೋಟ್ಯಾನ್

ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ

ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ವರುಣ ದೇವ ಕರುಣೆ ತೋರಿದ್ದರಿಂದ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಆದರೆ ಈ ಬಾರಿ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದರಿಂದ

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.ತಾಲೂಕು ಉಪತಹಾಶಿಲ್ದಾರ್ ಬಾಲಚಂದ್ರ, ಮೂಡಾ ಎಂಜಿನಿಯರ್ ಪ್ರವೀಣ್, ಸುವಿದಾ ನೋಡೆಲ್ ಗಳಾದ ಶಿವಾನಂದ ಕಾಯ್ಕಿಣಿ ಮತ್ತು ಡಾ.ಪ್ರತಿಮಾ ಹಾಗೂ ವಿವಿಧ ಇಲಾಖೆಯ ಸಿಬಂಧಿಗಳು ಈ ಸಂದರ್ಭದಲ್ಲಿದ್ದರು.

ಮೂಡುಬಿದಿರೆ : ಏಳೂವರೆ ಶತಮಾನಕ್ಕೂ ಮಿಕ್ಕಿದ ಇತಿಹಾಸವಿರುವ ಕೆರೆಗೀಗ ಪುನರುತ್ಥಾನದ ಸಂಭ್ರಮ

ಮೂಡುಬಿದಿರೆ: ಹದಿನೆಂಟು ಕೆರೆ, ಬಸದಿ,ದೇವಸ್ಥಾನಗಳು, ಕೇರಿಗಳು ಹೀಗೆ ಐತಿಹಾಸಿಕ ಮಹತ್ವವಿರುವ ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಯಲ್ಲಿ ಪ್ರಾಚೀನ ಕೆರೆಗಳದ್ದೇ ವಿಶೇಷತೆ. ಇದೀಗ ಬಹುಕಾಲದ ಕಾಯುವಿಕೆಯ ಬಳಿಕ ಶತಮಾನಗಳಿಂದ ಗಿಡಗಂಟಿಪೆÇದೆಗಳಲ್ಲಿ ಮರೆಯಾಗಿ ಹೂಳು ತುಂಬಿಕೊಂಡಿದ್ದ ದೊಡ್ಮನೆ ಶ್ರೀ ಚಂದ್ರಶೇಖರ ದೇವಸ್ಥಾನದ ಸುಂದರ ಕೆರೆ ಜೀಣೋದ್ಧಾರಕ್ಕೆ ತೆರೆದುಕೊಂಡಿದೆ. ಇಲ್ಲಿನ ಪ್ರಾಂತ್ಯ ಗ್ರಾಮದ ದೊಡ್ಮನೆ ರಸ್ತೆ ಕೊನೆಯಲ್ಲಿರುವ ಶ್ರೀ ಚಂದ್ರಶೇಖರ

ಆಳ್ವಾಸ್ ಪದವಿ ಪೂರ್ವ ಕಾಲೇಜು : 47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ

ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ

ದ್ವಿತೀಯ ಪಿಯುಸಿ ಪ್ರಥಮ ರ್‍ಯಾಂಕ್ ಪಡೆದ ಅನನ್ಯಳಿಗೆ ರೂ.3 ಲಕ್ಷ ನಗದು ಪುರಸ್ಕಾರ

ಮೂಡುಬಿದಿರೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿನಿ ಅನನ್ಯಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದರು. ಅನನ್ಯಳಿಗೆ ರೂ.3 ಲಕ್ಷ ನಗದು ಪುರಸ್ಕಾರವನ್ನು ಘೋಷಿಸಿದ ಅವರು, ಆಕೆ ಮುಂದಿನ ಸಿಎಸ್ ವ್ಯಾಸಂಗಕ್ಕೆ ಉಚಿತ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.

ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ‍್ಯಾಂಕ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ 4 ಹಾಗೂ ಪದವಿಯ ಓರ್ವ ವಿದ್ಯಾರ್ಥಿನಿ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಎಂ.ಡಿ. ಕ್ಲಿನಿಕಲ್ ನ್ಯಾಚುರೋಪತಿಯಲ್ಲಿ ಡಾ.ರೋಶಿತಾ ಪಿ. ಪ್ರಥಮ, ಡಾ. ಅಭಿಜ್ಞಾ ತೃತೀಯ

ನವಚೇತನ ಸೇವಾ ಬಳಗ( ರಿ ) ತೋಡಾರು ನಮ್ಮ ಸಂಸ್ಥೆಯ 77 ನೇ ಸೇವಾ ಯೋಜನೆ

ಮೂಡಬಿದ್ರಿ ತಾಲೂಕಿನ ಹೊಸಬೆಟ್ಟು ಗ್ರಾಮದ ಬೊಗ್ರುಗುಡ್ಡೆ ನಿವಾಸಿಯಾದ ಅವಿನಾಶ್ ಇವರ ತಾಯಿ ಕಳೆದ ಕೆಲವು ದಿನಗಳಿಂದ ಬೊನ್ ಮ್ಯಾರೋ ಕಾಯಿಲೆಯಿಂದ ಬಳಲುತ್ತಿದ್ದು ಇವರ ಕುಟುಂಬ ತೀವ್ರವಾಗಿ ಬಡತನದಲ್ಲಿ ಹಿಂದುಳಿದಿದ್ದು ಇಲ್ಲಿಯವರೆಗೆ ಅನೇಕ ಹಣದ ಖರ್ಚು ಆಗಿದ್ದು ಇನ್ನು ಈ ಚಿಕಿತ್ಸೆಯ ವೆಚ್ಚ 10 ಲಕ್ಷ ಖರ್ಚು ಆಗಳಿದ್ದು ಇವರ ಮನವಿಗೆ ಸ್ಪಂದಿಸಿ ಇಂದು ನಮ್ಮ ತಂಡ 15000/- ರೂಪಾಯಿ ಹಣವನ್ನು ರೋಗಿಯ ಮನೆಯವರಿಗೆ ಹಸ್ತಾಂತರ ಮಾಡಲಾಯಿತು ಈ ಸಂದರ್ಭದಲ್ಲಿ ತಂಡದ ಸರ್ವ

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಮೂಲ್ಕಿ-ಮೂಡುಬಿದರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಅಮರಶ್ರೀ ಹೇಳಿಕೆ

ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ ಡಾ.ಅಮರಶ್ರೀ