ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದರು. ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾವನ್ನು ಚಿಕಿತ್ಸೆಗಾಗಿ ಉಡುಪಿಯ ವನ್ಯಜೀವಿ
ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಕಾರ್ಡಿಯಾಲಜಿ ಡೋರ್ಸ್ಟೆಪ್ ಫೌಂಡೇಶನ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಹಾಗೂ ತಂಡದಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳಿಗೆ ಉಚಿತ ತಪಾಸಣಾ ಶಿಬಿರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯದ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಭಾನುವಾರ ಸಂಜೆ ಸಂಪನ್ನಗೊಂಡಿತು. ಫಲಿತಾಂಶ : ಹಗ್ಗ ಕಿರಿಯ ವಿಭಾಗದಲ್ಲಿ 20ಜತೆ ಕೋಣಗಳು ಭಾಗವಹಿಸಿದ್ದು ಕಲ್ಯಾ ಹಾಳೆಕಟ್ಟೆ ನಿತೀಶ್ ಭವಿಷ್ಯ ದೇವಾಡಿಗ ಅವರ ಕೋಣಗಳು ಪ್ರಥಮ ( ಓಡಿಸಿದವರು: ಕಾವೂರು ದೋಟ ಸುದರ್ಶನ್), ಕೆಲ್ಲಪುತ್ತಿಗೆ ಪ್ರವೀಣ್ ಕುಮಾರ್ ದ್ವಿತೀಯ ( ಕೋಣ ಓಡಿಸಿದವರು:
ಮೂಡುಬಿದಿರೆ: ಅಖಿಲ ಭಾರತ ತುಳು ಒಕ್ಕೂಟ(ರಿ.) ಮತ್ತು ತುಳುಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ತುಳು ಮಹಾಕೂಟ-2023ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಆಳ್ವರು, ಬೇರೆ ಬೇರೆ ಸಮುದಾಯದವರು ತುಳು ಭಾಷೆಯನ್ನು ಅಪ್ಪಿ ಒಪ್ಪಿಕೊಂಡಿದ್ದಾರೆ. ಇತರ ಸಮುದಾಯಗಳು ಇರುವಲ್ಲಿ ಅಲ್ಲಲ್ಲಿ ತುಳು ಸಂಘಟನೆಗಳನ್ನು ಮಾಡಬೇಕಾಗಿದೆ ಆ ಮೂಲಕ ಮುಂದಿನ
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,
ಮೂಡುಬಿದಿರೆ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಬಳಿಯಿಂದ ಮೂಡುಬಿದಿರೆ ಕನ್ನಡ ಭವನದವರೆಗೆ ಗುರುವಾರ ಸಂಜೆ ಪೊಲೀಸ ರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 80 ಜನ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಯ
ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್,
ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಅಳವಡಿಸಲಾಗಿರುವ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆಗೆಸುವ ಕ್ರಮ ಕೈಗೊಳ್ಳಲಾಗಿದೆ, ಯಾವುದೇ ಕಾರ್ಯಕ್ರಮ ನಡೆಸುವಲ್ಲಿ ಅನುಮತಿ ಪಡೆದುಕೊಂಡೇ ನಡೆಸಬೇಕು, ರಾಜಕಾರಣಿಗಳು, ಚುನಾಯಿತ ಸದಸ್ಯರು ವೇದಿಕೆಯೇರಿ ಭಾಷಣ ಮಾಡುವಂತಿಲ್ಲ. ಯಾವುದೇ ಭರವಸೆ ನೀಡುವುದಾಗಲೀ, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡುವು ದಾಗಲೀ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳ ಲಾಗುವುದೆಂದು ಚುನಾವಣಾ ಅಧಿಕಾರಿಯಾಗಿರುವ ಕೆ.ಮಹೇಶಚಂದ್ರ
ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು ಗುರುತಿಸಲಾಗಿದೆ. ಮೂಡುಬಿದಿರೆ-ಕಾರ್ಕಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಸೋಮವಾರ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಹಿಮ್ಮುಖವಾಗಿ ಚಲಿಸುವಾಗ
ಮೂಡುಬಿದಿರೆ: ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ ಇಂದು ವಿಶ್ವದಲ್ಲೇ ನಂ.1 ಪಕ್ಷಗಾಗಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ