Home Posts tagged #mudabidre (Page 8)

ನೆಲ್ಲಿಕಾರಿನಲ್ಲಿ ಭೀಕರ ಅಪಘಾತ : ಮಗು ಸೇರಿ ಮೂರು ಮಂದಿ ಮೃತ್ಯು

ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ : ಸ್ಟ್ರೆಲಿಯಂ ಟೆಕ್ನಾಲಜಿ & ಇನೋವೇಶನ್ ಸೆಂಟರ್‍ಗೆ ಚಾಲನೆ

ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ ‘ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ ‘ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್‍ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅವರು ನೂತನ ಲ್ಯಾಬ್‍ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸ್ಟೆಲಿಯಂ

ಮೂಡುಬಿದಿರೆ ಪುರಸಭೆಯ ಅಧಿವೇಶನ : ಹಸಿಕಸ ವಿಲೇವಾರಿಯಲ್ಲಿ ಅಡಚಣೆ

ಮೂಡುಬಿದರೆ : ವಸತಿ ಸಮುಚ್ಛಯಗಳಲ್ಲಿನ ಹಸಿಕಸವನ್ನು ಹಂದಿ ಸಾಕಾಣಿಕೆಗಾರರಿಗೆ ರವಾನಿಸಿ ವಿಲೇವಾರಿ ಮಾಡುವ ಪ್ರಕ್ರಿಯೆಯಲ್ಲಿ ಎರಡು ಮೂರು ಬಾರಿ ಅಡಚಣೆಯಾಗಿದ್ದು ಇದರಿಂದಾಗಿ ತ್ಯಾಜ್ಯ ದಲ್ಲಿ ಹುಳುಗಳಾಗಿರುವದರಿಂದ ತ್ಯಾಜ್ಯ ಸಂಗ್ರಹವಾಗಿಲ್ಲ, ವಿಲೇವಾರಿ ಮಾಡುವವರಿಗೆ ತಿಳಿಸಿದರೆ ಅವರು ಪುರಸಭೆಯ ಅಧಿಕಾರಿಗಳಿಗೆ ತಿಳಿಸಿ ಎಂದು ಹೇಳುತ್ತಾರೆ. ಹಾಗಾದರೆ ಪುರಸಭೆಯ ಸದಸ್ಯರಾಗಿರುವ ನಮಗೆ ಗೌರವವಿಲ್ಲವೇ. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೆ 23ಕೋಟಿಯಷ್ಟು ಹಣವನ್ನು

ಪುರಸಭೆಯ ಪರವಾನಿಗೆ ಪಡೆಯದೆ ಕಾಲೇಜು ನಿರ್ಮಾಣ

ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಮೂಡುಬಿದಿರೆ ಪುರಸಭೆಗೆ ಮನವಿ ನೀಡಿದರು. ಹಿಂ.ಜಾ.ವೇದಿಕೆಯ ಜಿಲ್ಲಾ ಸಹ ಸಂಯೋಜಕ್

ಮೂಡಬಿದಿರೆ : ವಿಶ್ವ ಹಿಂದೂ ಪರಿಷತ್ ಬಜರಂಗದಳದಿoದ ಗೋಪೂಜೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ ಸಂಯೋಜಕರಾದ ದಯಾನಂದ ಶೆಟ್ಟಿ, ಗೋರಕ್ಷ ಪ್ರಮುಖರಾದ ಕೌಶಿಕ್ ಮತ್ತು ಉದಯ ಶೆಟ್ಟಿ ಈ ಸಂದರ್ಭದಲ್ಲಿ

ಮೂಡುಬಿದಿರೆ ತಾಲೂಕು ವತಿಯಿಂದ ಧನಲಕ್ಷ್ಮೀ ಪೂಜೆ

ಆಟೋ ರಿಕ್ಷಾ ಚಾಲಕ ಮಾಲಿಕರ ಸಂಘ(ರಿ) ಮೂಡುಬಿದಿರೆ ತಾಲೂಕು ಇದರ ವತಿಯಿಂದ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಆಲಂಗಾರು ಶ್ರೀ ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಮಾಜ ಮಂದಿರದ ರಿಕ್ಷಾ ಪಾರ್ಕ್ ಬಳಿ ನಡೆಯಿತು. ಸಭಾ ಕಾರ್ಯಕ್ರಮ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಿಕ್ಷಾ ಚಾಲಕರು ಆಪತ್ಬಾಂಧವರು. ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸುರಕ್ಷಿತವಾಗಿ

ಮೂಡಬಿದ್ರೆ : ತುಳುನಾಡ ಕೊಡಿ ಧ್ವಜಸ್ಥಂಭ ಲೋಕಾರ್ಪಣೆ

ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇದರ ಮೂರನೇ ವರ್ಷದ ದೀಪಾವಳಿ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದ ಬಳಿ ಇರುವ ಚಿಣ್ಣರ ಉದ್ಯಾನವನದಲ್ಲಿ ಮೊದಲ ಬಾರಿ “ತುಳುನಾಡ ಕೊಡಿ ಧ್ವಜಸ್ಥಂಭವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಲೋಕಾರ್ಪಣಿಗೊಳಿಸಿದರು. ತುಳು ಭಾಷೆಯನ್ನು ಸಂವಿಧಾನದ ಆರ್ಟಿಕಲ್ 347 ಪ್ರಕಾರ ಅಧಿಕೃತ ಮಾಡುವ ಬಗ್ಗೆ ಮತ್ತು ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡುವ ವಿಧೇಯಕವನ್ನು ಜಿಲ್ಲೆಯ ಎಲ್ಲಾ ಶಾಸಕರುಗಳು ಮುಂದಿನ ಅಧಿವೇಶನದಲ್ಲಿ

ಮೂಡುಬಿದಿರೆ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದ ನಂತರ ಪಾಶ್ವ ವಾಯುಗೆ ಸಿಲುಕಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಚೇತರಿಸಿಕೊಂಡಿದ್ದ ಅವರು ಮನೆಯ ಬಳಿಯಲ್ಲೇ ಫಾಸ್ಟ್ ಫುಡ್ ಅಂಗಡಿ ನಡೆಸುವುದಾಗಿ ಹೇಳಿಕೊಂಡಿದ್ದರು. ಆದರೆ ಮಂಗಳವಾರ

ಮೂಡಬಿದರೆ : ನೇತಾಜಿ ಬ್ರಿಗೇಡ್ ನಿಂದ ದೀಪಾವಳಿ ಉತ್ಸವ

ಆ್ಯಂಕರ್ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ದೀಪದಿಂದ ದೀಪ ಹಚ್ಚುವ ಮೂಲಕ ಊರಿನ ಸಮಸ್ತ ನಾಗರಿಕರ ಜೊತೆಗೂಡಿ 3ನೇ ವರ್ಷz ಬೆಳಕಿನ ಹಬ್ಬವನ್ನು ಸ್ವರಾಜ್ಯ ಮೈದಾನದ ಚಿಣ್ಣರ ಉದ್ಯಾನವನದಲಿ ಸಂಭ್ರಮಿಸಲಾಯಿತು. ಉತ್ಸವವನ್ನು ವಾರ್ಡ್ ಸದಸ್ಯ ರಾಜೇಶ್ ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇವೇಳೆ ಸತ್ಯಶ್ರೀ ಭಜನಾ ಮಂಡಳಿ ಪಳಕಳ ಪುತ್ತಿಗೆ ಇವರ ವತಿಯಿಂದ ಕುಣಿತ ಭಜನೆ ನಡೆಯಿತು. ಸಿಹಿ

ಮೂಡುಬಿದರೆ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪಿತೃ ವಿಯೋಗ

ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅವರ ತಂದೆ ರಮೇಶ್ ಶಾಂತಿ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೂಡುಬಿದಿರೆಯ ಬ್ರಹ್ಮಶ್ರೀ ನಾರಾಯಣ ಗುರು ಪೂಜೆಯ ಅರ್ಚಕರಾಗಿಯೂ, ಮೂಡುಬಿದಿರೆ ಅಯ್ಯಪ್ಪ ದೇವಸ್ಥಾನ ಸ್ಥಾಪಕರಾಗಿಯೂ ಸೇವೆ ಸಲ್ಲಿಸಿದವರು. ಅಯ್ಯಪ್ಪ ಗುರುಸ್ವಾಮಿಯಾಗಿ