ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ನ ಸಭಾಭವನದಲ್ಲಿ
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ಕರ್ಮ ಜೀವನ ಆರಂಭಿಸಿ 50 ವರ್ಷ ತುಂಬಿರುವ ಈ ಸುಸಂದರ್ಭದಲ್ಲಿ ತನ್ನ ಅಧ್ಯಾಪನ, ಆಡಳಿತ, ಕಂಬಳ, ಕೃಷಿ, ಧಾರ್ಮಿಕ ಸೇವಾನುಭವವನ್ನು ಗುರುತಿಸಿ ನೀಡಿರುವ ಗೌರವವನ್ನು ಸಂತೃಪ್ತಿ, ಸಂತೋಷದಿಂದ ಸ್ವೀಕರಿಸಿದ್ದೇನೆ, ಎಲ್ಲ ರಂಗಗಳಲ್ಲೂ ಪ್ರಾಮಾಣಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟವರೆಲ್ಲರನ್ನೂ ಕೃತಜ್ಞತಪೂರ್ವಕ ನೆನೆಯುತ್ತೇನೆ ಎಂದು ಜೈನ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ, ಕಂಬಳ ವಿದ್ವಾಂಸ ಕೆ. ಗುಣಪಾಲ ಕಡಂಬ ಹೇಳಿದರು.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ
ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೂಡುಬಿದಿರೆ: 2023-24ನೇ ಸಾಲಿನ ಕಂಬಳ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕುದಿ ಕಂಬಳ ಆರಂಭಗೊಂಡಿತು. ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು. ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸಮರ್ಪಕವಾಗಿ ನಿರ್ವಹಣೆಯಾಗುತ್ತಿದ್ದು ಇದರಿಂದಾಗಿ ಪರಿಸರದ ನಿವಾಸಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆಂದು ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ದೂರು ನೀಡಿದ್ದಾರೆ. ತಾಲೂಕು ಆಡಳಿತ ಸೌಧದಲ್ಲಿ ಡಿಸಿಯವರಿಂದ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿ ಈ ಬಗ್ಗೆ ಚರ್ಚೆ
ಮಳಲಿ ಪ್ರೌಢಶಾಲೆಯಲ್ಲಿ ಜರುಗಿದ ಗುರುಪುರ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದ್ದಾರೆ. ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ
ಮೂಡುಬಿದಿರೆ : ಕಳೆದ ಹಲವು ವರ್ಷಗಳಿಂದ ಟಯರ್ ಉದ್ಯಮವನ್ನು ನಡೆಸುತ್ತಾ ಬಂದಿರುವ ಹನುಮಾನ್ ಟಯರ್ಸ್ ನ ಮಾಲಕ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಪೂವಪ್ಪ ಕುಂದರ್ ಅವರು ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತ: ಪರಂಗಿಪೇಟೆಯ ನಿವಾಸಿಯಾಗಿದ್ದ ಪೂವಪ್ಪ ಕುಂದರ್ ಮೂಡುಬಿದಿರೆಗೆ ಉದ್ಯೋಗವನ್ನು ಅರಸಿಕೊಂಡು ಬಂದು ಮೂಡುಬಿದಿರೆಯಲ್ಲಿ ಮಂಜುನಾಥ ಟೈರ್ ರಿಸೋಲಿಂಗ್ ಘಟಕದ ಮೂಲಕ ಅನುಭವ ಗಳಿಸಿ ಬಳಿಕ ಸ್ವರಾಜ್ಯ ಹನುಮಾನ್
ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್ಜಂಪ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ‘ಭವಾನಿ ಯಾದವ್ ಆಳ್ವಾಸ್
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ ಯೋಜನೆಯನ್ನು ರೂಪಿಸಿ ಮಕ್ಕಳ ಮತ್ತು ಶಾಲಾಭಿಮಾನಿಗಳ ಮನಗೆದ್ದ ಜನಪ್ರತಿನಿಧಿ ಪಡುಮಾರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ಅವರು. ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ




























