Home Posts tagged #mudubidre (Page 7)

ಮೂಡುಬಿದಿರೆ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವ

ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಾಸಣಾ ಉಚಿತ ಶಿಬಿರ

ಮುಂಡ್ಕೂರು : ಹಡಿಲು ಬಿದ್ದ ಭೂಮಿಯಲ್ಲಿ ಭತ್ತದ ಕೃಷಿ

ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಗದ್ದೆಯಲ್ಲಿ ಒಕ್ಕೂಟದ ಮಹಿಳೆಯರು ಗದ್ದೆ ನಾಟಿ ಮಾಡಿದರು. ಸುಮಾರು ಒಂದು ಎಕರೆ ಹಡಿಲು ಭೂಮಿಯನ್ನು ಸಮತಟ್ಟು ಮಾಡಿ ಟ್ಯಾಕ್ಟರ್ ಮೂಲಕ ಉಳುಮೆ ಮಾಡಿ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ವನಿತಾ ಶೆಟ್ಟಿ ಎಲ್ ಸಿ ಆರ್ ಪಿ ಶಶಿಕಲಾ, ಸುಮನ ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಮೂಡುಬಿದರೆ : ಪ್ಲಾಸ್ಟಿಕ್ ಮುಕ್ತ ಪರಿಸರ ರಕ್ಷಣಾ ಅಭಿಯಾನ

ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ಘಟಕ, ಇಂಟರಾಕ್ಟ್ ಕ್ಲಬ್, ಶಾಲಾ ಸಂಸತ್ತು ಹಾಗೂ ಮೂಡುಬಿದಿರೆ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣಾ ಅಭಿಯಾನ ಮೂಡುಬಿದಿರೆ ಮಾರುಕಟ್ಟೆ ಸಮೀಪ ನಡೆಯಿತು. ಪುರಸಭಾ ಮುಖ್ಯಾಧಿಕಾರಿ ಶಿವ ನಾಯಕ್ ಅಭಿಯಾನಕ್ಕೆ ಚಾಲನೆ ನೀಡಿ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು. ಈ ಜನ ಜಾಗೃತಿ ಕಾರ್ಯಕ್ರಮದಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ನಾರಾಯಣ ಪಿ ಎಂ

ಪಿಂಗಾರ ಕಲಾವಿದೆರ್ ಬೆದ್ರ- ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ’ ಇದರ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ನಾರಂಪ್ಪಾಡಿಗುತ್ತು ಸೇಸಪ್ಪ ಹೆಗ್ಡೆ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದರು.ತಂಡದ ಮುಖ್ಯಸ್ಥ ಮಣಿಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ, ಕದಂಬ ನಾಟಕವು ತುಳು ರಂಗಭೂಮಿಯಲ್ಲಿ ವಿಭಿನ್ನ ಪ್ರಯತ್ನವಾಗಿದ್ದು, ವಿನೂತನ ಶೈಲಿಯ ರಂಗ ವಿನ್ಯಾಸವನ್ನು ಹೊಂದಿದೆ. ಈ

ವಿದ್ಯಾಗಿರಿಯಲ್ಲಿ ವೈವಿಧ್ಯಮಯ ಹಣ್ಣುಗಳ ಮೇಳ ಸಮಾಪನ

ಮೂಡುಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ವಿದ್ಯಾಗಿರಿಯಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಹಲಸು ಮತ್ತು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ `ಸಮೃದ್ಧಿ’ಯು ಸಮಾಪನಗೊಂಡಿತ್ತು. ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ

ಮೂಡುಬಿದರೆ : ಅಕ್ಷರದಾಸೋಹ ನೌಕರರ ಪ್ರತಿಭಟನೆ

ಮೂಡುಬಿದಿರೆ : ಸರಕಾರಿ ಮತ್ತು ಅನುದಾನ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ಆಗ್ರಹಿಸಿ, ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ತಾಲೂಕಿನ ಕ.ರಾ. ಅಕ್ಷರ ದಾಸೋಹ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು. ಮೂಡುಬಿದಿರೆ ಸಿಐಟಿಯುನ ಮಾಜಿ ಅಧ್ಯಕ್ಷೆ ರಮಣಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದಿನಕ್ಕೆ ಆರು ಗಂಟೆಗಿಂತಲೂ ಅಧಿಕ ಸಮಯ ಕೆಲಸ ಮಾಡುವ ಅನಿವಾರ್ಯ ಪರಿಸ್ಥಿತಿಯಲ್ಲಿರುವ ರಾಜ್ಯದ

ಮೂಡುಬಿದರೆ ಆಳ್ವಾಸ್ ನಲ್ಲಿ ಜುಲೈ 14 ರಿಂದ 16ರವರೆಗೆ ಹಲಸು ವೈವಿಧ್ಯಮಯ ಹಣ್ಣುಗಳ ಮೇಳ

ಮೂಡುಬಿದಿರೆ : ಹಲಸು ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿವತಿಯಿಂದ ಹಿರಿಯ ಕೃಷಿ ತಜ್ಞ ಡಾ| ಎಲ್ ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳ ಜುಲೈ 14 ರಿಂದ 16 ರವರೆಗೆ ವಿದ್ಯಾಗಿರಿಯ ಕೆ ಅಮರನಾಥಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಸಂಸ್ಥಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು

ಮೂಡುಬಿದರೆ: ಯುವಕ ನೇಣಿಗೆ ಶರಣು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡುಬಿದರೆ : ಶಿರ್ತಾಡಿಯಲ್ಲಿ 25ನೇ ವರ್ಷದ ಗುರುಪೂಜೆ, ಬೃಹತ್ ಶೋಭಾಯಾತ್ರೆ

ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ

ಮೂಡುಬಿದಿರೆ: ಪಡುಮಾರ್ನಾಡಿನಲ್ಲಿ ಸಿಡಿಲು ಆಘಾತ

ಮೂಡುಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಪಾಡ್ಯಾರ್ ನಿವಾಸಿ ಸುಜಾತ ಎಂಬವರ ಮನೆಗೆ ನಿನ್ನ ರಾತ್ರಿ ಸಿಡಿಲು ಬಡಿದು ಮನೆಯ ಕರೆಂಟ್ ಸ್ವಿಚ್ ಬೋರ್ಡ್, ‘ವಿದ್ಯುತ್ ವಯರ್‌ಗಳು ಸುಟ್ಟು ಸುಮಾರು 50 ಸಾವಿರ ಮೌಲ್ಯದ ವಿದ್ಯುತ್ ಇತರ ಸಲಕರಣೆಗಳು ಹಾನಿಗೀಡಾಗಿವೆ. ಸ್ಥಳಕ್ಕೆ ಮೂಡುಮಾರ್ನಾಡ್ ಪಂಚಾಯತ್ ಪಿಡಿಓ ಅನಿಲ್, ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಸುಜಾತ ಹಾಗು ಅವರ ತಾಯಿ ಮನೆಯೊಳಗಿದ್ದು ಪ್ರಾಣಾಪಾಯದಿಂದ