ಪ್ರತೀ ವರ್ಷದಂತೆ ಈ ವರ್ಷವೂ ಓಣಂ ಸಂದರ್ಭ ಅಯ್ಯಪ್ಪ ಸ್ವಾಮಿ ಮಾಲೆಧರಿಸಿ ಯಾತ್ರೆಗೆ ಹೊರಟ ಸ್ಬಾಮಿಗಳ ಮೂಲಕ ಅಯ್ಯಪ್ಪನಿಗೆ ಬಹಳ ಪ್ರಿಯವಾದ ಪಡಿಪೂಜೆಯು ಮುಲ್ಕಿ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಪೂಜೆಯ ಬಳಿಕ ಮಾತನಾಡಿದ ಗುರುಸ್ವಾಮಿ ಗಿರೀಶ್ ಪಲಿಮಾರು, ಜ್ಯೋತಿ ಸ್ವರೂಪನಾದ ಅಯ್ಯಪ್ಪನನ್ನು ಸಾಕ್ಷಾತ್ಕಾರಗೊಳಿಸುವ ನಿಟ್ಟಿನಲ್ಲಿ ಈ ದೀಪಾರಾಧನೆ ಅಂದರೆ ಪಡಿಪೂಜೆ
ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಬಾರಿ ಗಾತ್ರದ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮರವು ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದು ಬಳಿಕ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿ ಭೀಕರ ಶಬ್ದ ಉಂಟಾಗಿದ್ದು, ವಿದ್ಯುತ್ ಸಂಚಾರ ನಿಲುಗಡೆಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ.ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ ಹಾಗೂ ತಂತಿಗಳಿಗೆ ಹಾನಿಯಾಗಿದ್ದು ಕಿನ್ನಿಗೋಳಿ,
ಸಂಗೀತವು ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಪಠ್ಯದೊಂದಿಗೆ ಸಂಗೀತದಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ಮೆದುಳಿನ ಬೆಳವಣಿಗೆಯಲ್ಲಿ ಸುಧಾರಣೆ ಕಾಣಬಹುದಾಗಿದೆ. ಸಂಗೀತವನ್ನು ಸರಳವಾಗಿ ಆಲಿಸುವಾಗ ಉತ್ತಮ ನರ ಸಂಸ್ಕರಣೆಯನ್ನು ಕಾಣಬಹುದೆಂದು ಅಧ್ಯಯನ ಕಂಡು ಹಿಡಿದಿದೆ. ಸಂಗೀತದಲ್ಲಿ ತೊಡಗಿರುವ ಇತರ ಅಧ್ಯಯನಗಳು ಮಕ್ಕಳಲ್ಲಿ ಐಕ್ಯೂ ಪಾಯಿಂಟ್ಗಳ ಹೆಚ್ಚಳವನ್ನು ಕಂಡುಕೊಂಡಿದೆ. ಮಕ್ಕಳಲ್ಲಿ ಓದುವ ಗ್ರಹಿಕೆಯ ಸಾಮಾರ್ಥ್ಯವನ್ನು
ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ವಿರೋಧ ಪಕ್ಷದವರು ಎಲ್ಲಾ ರೀತಿಯ ಅಪಪ್ರಚಾರ ಮಾಡಿದ್ದು ಆದರೆ ಯಾವುದೇ ಅಪಪ್ರಚಾರಕ್ಕೆ ನಾನು ಉತ್ತರ ನೀಡಲಿಲ್ಲ.
ಚುನಾವಣೆ ಪ್ರಚಾರ ಇಂದು ಕೊನೆಯ ದಿನವಾಗಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮದ ಜನರು ಒಕ್ಕೊರಲಿನಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಲ್ಲಿ ಆಗದ ಕೆಲಸ ಕಾರ್ಯಗಳು ಕೇವಲ 5 ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಇರುವೈಲು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿಗೆ 7 ಕೋಟಿಗೂ ಅಧಿಕ ವೆಚ್ಚದ ಅನುದಾನ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ
ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಉಮಾನಾಥ
ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ
ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ ಡಾ.ಅಮರಶ್ರೀ
ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೋ ಅವರು ಸೋಮವಾರ ಮೂಡುಬಿದಿರೆ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರ್, ಸೂರಿಂಜೆ ಗ್ರಾಮ ಪಂಚಾಯತ್ ಸದಸ್ಯ ಮಹಿಳಾ ಮಲಿಕ್ ಸೂರಿಂಜೆ, ಮಹಿಳಾ ರಾಷ್ಟ್ರೀಯ ಮುಖಂಡೆ ಆಯೇಷಾ ಬಜ್ಪೆ ಈ ಸಂದರ್ಭದಲ್ಲಿದ್ದರು.