ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವದ ಅತ್ಯಂತ ಶ್ರೇಷ್ಠ ಸೇವೆಯಾಗಿರುವ ಶ್ರೀದೇವಿಯ ಶಯನೋತ್ಸವಕ್ಕೆ ಹೂ ಅರ್ಪಿಸುವ ಸೇವೆಯಂಗವಾಗಿ ಈ ಬಾರಿ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡು ಸಮರ್ಪಣೆಯಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ. ಸಂಜೆ 3 ಗಂಟೆಯ ಬಳಿಕ ಮಲ್ಲಿಗೆ ಸಮರ್ಪಣೆ ಸೇವೆ ಆರಂಭ ಗೊಂಡಿತ್ತು. ಮಲ್ಲಿಗೆಯನ್ನು
ಮುಲ್ಕಿ: ಸರಕಾರಿ ಅಧಿಕಾರಿಯಾಗಿ ಮುಲ್ಕಿ ನಗರ ಪಂಚಾಯತ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರ ಕುಂದು ಕೊರತೆ ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸಿ ಉತ್ತಮ ಕಾರ್ಯಗಳನ್ನು ನಡೆಸಿ ನಿಸ್ವಾರ್ಥ ಸೇವೆ ಹಾಗೂ ಪ್ರಾಮಾಣಿಕತೆ ಮೆರೆದ ಮುಖ್ಯಾಧಿಕಾರಿ ಚಂದ್ರ ಪೂಜಾರಿಯವರ ಜನಸೇವೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.ಅವರು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ
ಮುಲ್ಕಿ: ಕಿನ್ನಿಗೋಳಿಯ ಮಹಾಮಾಯಿ ಕಟ್ಟೆಯ ಬಳಿಯ ಶ್ರೀ ಶಾರದ ಮಂಟಪದಲ್ಲಿ ಜರಗುತ್ತಿರುವ ಅತಿ ವಿಶಿಷ್ಟ ಶ್ರೀ ಸಹಸ್ರ ನೃಸಿಂಹಯಾಗ ಸಮಿತಿ ವತಿಯಿಂದ ಆಯೋಜಿಸಿದ್ದ ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನೃಸಿಂಹಯಾಗ ಯಾಗದ ಪ್ರಯುಕ್ತ ಬುಧವಾರ ಪ್ರಾತಃಕಾಲ 5 ಗಂಟೆಗೆ ಗುರು ಗಣಪತಿ ಪೂಜನ,ಆವಾಹಿತ ದೇವತಾ ಪೂಜನ, ಬೆಳಿಗ್ಗೆ 7 ಗಂಟೆಗೆ ಸಹಸ್ರ ನೃಸಿಂಹ ಹವನ,11.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ 1.30 ಲಘ ಪುರ್ಣಾಹುತಿ, ಮಧ್ಯಾಹ್ನ ಪೂಜೆ, ಗೋಪೂಜೆ,
ಮುಲ್ಕಿ: ಮುಲ್ಕಿ ಸಮೀಪದ ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಶ್ರೀ ದೇವರಿಗೆ ಪೂರ್ವಾಹ್ನ ಗಂಟೆ 10:25ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವಸ್ಥಾನದ ತಂತ್ರಿಗಳಾದ ಶಿವಪ್ರಸಾದ ತಂತ್ರಿ ,ವೇ.ಮೂ ಪಂಜ ಭಾಸ್ಕರ ಭಟ್ ಹಾಗೂ ಅರ್ಚಕ ಗೋಪಾಲ ಭಟ್ ಪೌರೋಹಿತ್ಯದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಿತು. ಬಳಿಕ ಮಹಾಪೂಜೆ, ಅವಸ್ಕೃತ ಬಲಿ ನಡೆಯಿತು. ಮಧ್ಯಾಹ್ನ ಪಲ್ಲಪೂಜೆ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ
ಮೂಲ್ಕಿಯ ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್ನ ಬಳಿಯಲ್ಲಿಯೇ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬೋಗಿಯ ಡಬ್ಬಿಗಳು ಅರ್ಧದಲ್ಲಿಯೇ ಕಡಿದುಕೊಂಡು ನಿಂತು ಸುಮಾರು ಒಂದು ತಾಸು ರೈಲ್ವೇ ಗೇಟ್ನಲ್ಲಿ ಸಂಚಾರಿಗಳು ಪರದಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿಯಿಂದ ಮಂಗಳೂರಿನ ಎನ್ಎಂಪಿಟಿಯತ್ತ ತೆರಳುತ್ತಿದ್ದ ಗೂಡ್ಸ್ ಹೊತ್ತಿದ್ದ ಬೋಗಿಯೂ ತಾಂತ್ರಿಕ ದೋಷದಿಂದ ಬೋಗಿಯನ್ನು ಹೊಂದುಕೊಂಡಿದ್ದ ಗೂಡ್ಸ್ ಡಬ್ಬಿಗಳ ಹಾಗೂ
ಮೂಲ್ಕಿ- ಕಳೆದ ಕೆಳ ದಿನಗಳ ಹಿಂದೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಆರೋಪಿ ಹಳೆಯಂಗಡಿ ಇಂದಿರಾ ನಗರದ ನಿವಾಸಿ ದಾವುದ್ ಹಕೀಮ್ ಎಂಬಾತ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೆÇಲೀಸರು ಪ್ರಕರಣದ ತನಿಖೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕೆರೆಕಾಡು ಗ್ರಾಮಸ್ಥರು ಮುಲ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮುಲ್ಕಿ
ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ “ಅನುಗ್ರಹ” ವಿಶೇಷ ಹೋಮ ಪೂಜೆಯೊಂದಿಗೆ ಗೃಹಪ್ರವೇಶ ಗೃಹಹಸ್ತಾಂತರ ನಡೆಯಿತು. ಹೆಲ್ಪ್ ಲೈನ್
ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ. ಸಮಾಜದಲ್ಲಿ ಎಲ್ಲಾ ಸಮಾಜದ ಸಂಘಟನೆಯೂ ಇದೇ ರೀತಿಯ ಯೋಚನೆಯಲ್ಲಿ ಯೋಜನೆ ರೂಪಿಸಬೇಕು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಡುಬೈಲ್ ನಲ್ಲಿ ಜಾಗತಿಕ ಬಂಟರ ಸಂಘಗಳ
ಮುಲ್ಕಿ ವಿಜಯ ಕಾಲೇಜಿಗೆ 1994-97ರಲ್ಲಿ ಬಿಕಂ ಪದವಿ ಪಡೆದು ಹೊರ ಬಂದ ಹಳೆ ವಿದ್ಯಾರ್ಥಿಗಳು, ತಾವು ಕಲಿತ ಸಂಸ್ಥೆಯ ಬಡ ವಿದ್ಯಾರ್ಥಿಗಳ ವಿದ್ಯಾನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ನೂರಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ತಾವು ಪದವಿ ಮುಗಿಸಿ 25ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಲ್ಲರೂ ಒಂದಾಗಿ ಇಪ್ಪತ್ತೈದರ ಸಂಭ್ರಮಾಚರಣೆಯನ್ನು ತಮಗೆ ವಿದ್ಯಾದಾನ ಮಾಡಿದ ಗುರುಗಳಿಗೆ ಗುರುವಂದನೆಯ ಮೂಲಕ ಅರ್ಥಪೂರ್ಣವಾಗಿ ಪಡುಬಿದ್ರಿಯ
ಮುಲ್ಕಿ ಅ7.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಹತ್ವಾಕಾಂಕ್ಷೆಯ ಯೋಜನೆಯ ಅಂಗವಾಗಿ ಮೂಲ್ಕಿಯ ನಗರಕ್ಕೆ ಸಮೀಪವಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪ 65 ಸೆಂಟ್ಸ್ ನಿವೇಶನದಲ್ಲಿ ಅತ್ಯಾಧುನಿಕ ಸುಂದರವಾದ ವಿವಿಧ ಸ್ವರೂಪಗಳ ಭವನಗಳ ನಿರ್ಮಾಣದ ಅಂಗವಾಗಿ ಇಂದು ಮುಲ್ಕಿ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ ಇವರ ಮೂಲಕ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ನಿತಿನ್ ಎಂಟರ್ಪ್ರೈಸಸ್ ಕಾವೂರು ಇದರ ಮಾಲಕರಾದ ನಿತಿನ್